ಬ್ರೇಕಿಂಗ್ ನ್ಯೂಸ್
16-01-22 02:21 pm Mangalore Correspondent ಕ್ರೈಂ
ಮಂಗಳೂರು, ಜ.16 : ಎಂಬಿಬಿಎಸ್ ಕಲಿಯುತ್ತಿರುವ ಹಿಂದು ವಿದ್ಯಾರ್ಥಿನಿಗೆ ಮುಸ್ಲಿಂ ಹುಡುಗನ ಜೊತೆ ಸಂಬಂಧ ಇದೆಯೆಂದು ಆಕೆಯ ಫೋಟೋ ಎಡಿಟ್ ಮಾಡಿ, ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್ ಓದುತ್ತಿರುವ ಹಿಂದು ಹುಡುಗಿಯೊಬ್ಬಳ ಫೋಟೋವನ್ನು ಆಕೆಯ ಇನ್ ಸ್ಟಾಗ್ರಾಮ್ ಪೇಜ್ ನಿಂದ ಕದ್ದು ಎಡಿಟ್ ಮಾಡಲಾಗಿತ್ತು. ಈಕೆಗೆ ಮುಲ್ಲಾ ರಹಿಮಾನ್ ಜೊತೆಗೆ ಕುಚಿಕು ಇದೆಯೆಂದು ಬರೆದು ಮುಸ್ಲಿಂ ಹುಡುಗನ ಫೋಟೋ ಜೊತೆಗಿಟ್ಟು ಎಡಿಟ್ ಮಾಡಲಾಗಿತ್ತು. ಈ ಫೋಟೋವನ್ನು ಕೆಲವು ಪೇಜ್ ಗಳಲ್ಲಿ ವೈರಲ್ ಮಾಡಿದ್ದು, ಎಡಿಟೆಡ್ ಫೋಟೋ ವಿದ್ಯಾರ್ಥಿನಿಗೂ ಲಭಿಸಿತ್ತು.
ಇದೇ ವೇಳೆ, ಮುಸ್ಲಿಂ ಹುಡುಗನ ಜೊತೆಗೆ ಹಿಂದು ವಿದ್ಯಾರ್ಥಿನಿಯ ಕುಚಿಕು ಅನ್ನುವ ವಿಚಾರ ಹಿಂದು ಸಂಘಟನೆಗಳ ಕಾರ್ಯಕರ್ತರ ವಿರೋಧಕ್ಕೂ ಕಾರಣವಾಗಿತ್ತು. ಆನಂತರ, ಫೋಟೋಗೂ ಆಕೆಗೂ ಯಾವುದೇ ಸಂಬಂಧ ಇಲ್ಲ ಅನ್ನುವುದು ಕುಟುಂಬಸ್ಥರಿಗೂ ಗೊತ್ತಾಗಿತ್ತು. ಆದರೆ ಎಡಿಟೆಡ್ ಫೋಟೋ ವೈರಲ್ ಆಗುತ್ತಿದ್ದುದರಿಂದ ಪರ – ವಿರೋಧವೂ ಕೇಳಿಬಂದಿತ್ತು. ವಿದ್ಯಾರ್ಥಿನಿ ಕುಟುಂಬಸ್ಥರು ಘಟನೆ ಬಗ್ಗೆ ತನಿಖೆ ನಡೆಸುವಂತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಹಿಂದೆ ಯಾರೋ ದುಷ್ಕರ್ಮಿಗಳಿದ್ದು, ಉದ್ದೇಶ ಪೂರ್ವಕವಾಗಿ ಈ ರೀತಿಯ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Mangalore Mbbs student photo Morphed with Muslim Youth on Instagram, girl files case at women police station. Her photo was edited and stated as Mulla Rahimans Kuchiku with Muslim guy.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm