ಬ್ರೇಕಿಂಗ್ ನ್ಯೂಸ್
17-01-22 03:26 pm Shivamogga Correspondent ಕ್ರೈಂ
ಶಿವಮೊಗ್ಗ, ಜ.17: ಪತ್ನಿಯದ್ದೇ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡಿದ್ದಲ್ಲದೆ, ವರದಕ್ಷಿಣೆ ಹಣ ತರುವಂತೆ ಕಿರುಕುಳ ನೀಡುತ್ತಿದ್ದ ಪತಿ ಮತ್ತು ಅತ್ತೆ, ಮಾವನ ವಿರುದ್ಧ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆತ್ತಲೆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟು ಮಾನ ಹರಾಜು ಹಾಕುವುದಾಗಿ ಹೇಳಿ ಬೆದರಿಕೆ ಒಡ್ಡಿದ್ದಲ್ಲದೆ, ತಂದೆಯ ಬಳಿಯಿಂದ ಹಣ ಕೇಳಿ ತರುವಂತೆ ಒತ್ತಡ ಹೇರುತ್ತಿದ್ದ ಬಗ್ಗೆ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ಸಲ್ಮಾನ್, ಅತ್ತೆ ಸಾಹಿರಾ, ಮಾವ ಶೌಕತ್ ಖಾನ್, ನಾದಿನಿ ಸಮೀನಾ ವಿರುದ್ಧ ದೂರು ನೀಡಿದ್ದು, ಶಿವಮೊಗ್ಗದ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ರಿಪ್ಪನ್ ಪೇಟೆ ಠಾಣೆ ವ್ಯಾಪ್ತಿಯ ಹುಂಚ ನಿವಾಸಿಯಾಗಿದ್ದು, 2021ರ ಮೇ 22ರಂದು ಈಕೆಯನ್ನು ಶೃಂಗೇರಿಯ ಸಲ್ಮಾನ್ ಜೊತೆ ಮದುವೆ ಮಾಡಲಾಗಿತ್ತು. ಮದುವೆಯ ಸಂದರ್ಭ 90 ಗ್ರಾಮ್ ಚಿನ್ನಾಭರಣ ಮತ್ತು ಮೂರು ಲಕ್ಷ ನಗದು ವರದಕ್ಷಿಣೆ ನೀಡುವ ಬಗ್ಗೆ ಮಾತುಕತೆ ನಡೆದಿತ್ತು. ಮದುವೆಯ ನಂತರ 90 ಗ್ರಾಮ್ ಚಿನ್ನಾಭರಣ, ಎರಡು ಲಕ್ಷ ನಗದು ಮತ್ತು ಮನೆಯ ಇನ್ನಿತರ ಸಾಮಾನುಗಳನ್ನು ಖರೀದಿಸಿ ಕೊಡಲಾಗಿತ್ತು.
ಒಂದು ಲಕ್ಷ ನಗದು ಕೊಡಲು ಬಾಕಿಯಾಗಿದ್ದ ವಿಚಾರದಲ್ಲಿ ಇವರ ನಡುವೆ ಜಗಳ ನಡೆದಿದ್ದು, ಪದೇ ಪದೇ ಯುವತಿಗೆ ಕಿರುಕುಳ ನೀಡಲಾಗಿತ್ತು. ಇದಕ್ಕಾಗಿ ಅತ್ತೆ ಮತ್ತು ಮಾವ ನಿರಂತರ ಕಿರುಕುಳ ನೀಡಿದ್ದು, ಇದಕ್ಕೆ ಗಂಡ ಸಲ್ಮಾನ್ ಮತ್ತು ನಾದಿನಿ ಸಮೀನಾ ಸಾಥ್ ನೀಡಿದ್ದರು. ಇದಲ್ಲದೆ, ಗಂಡ ಸಲ್ಮಾನ್ ಈಕೆಯನ್ನು ಬೆತ್ತಲಾಗಿಸಿ ವಿಡಿಯೋ ಮಾಡಿದ್ದು, ಅದೇ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಲಾರಂಭಿಸಿದ್ದ. ಒಂದೋ ಹಣ ತಂದು ಕೊಡಬೇಕು, ಇಲ್ಲದಿದ್ದರೆ ವಿಡಿಯೋ ಹೊರಬಿಟ್ಟು ನಡತೆ ಸರಿ ಇಲ್ಲ ಎಂದು ಸುದ್ದಿ ಹಬ್ಬಿಸುತ್ತೇನೆ ಎಂದು ಬೆದರಿಸಿದ್ದ.
ಗಂಡ ಮತ್ತು ಅತ್ತೆ, ಮಾವಂದಿರ ಕಿರುಕುಳದಿಂದ ಬೇಸತ್ತ ಯುವತಿ ಇತ್ತೀಚೆಗೆ ತನ್ನ ರಿಪ್ಪನ್ ಪೇಟೆ ಬಳಿಯ ತವರು ಮನೆಗೆ ಬಂದಿದ್ದಳು. ಅಲ್ಲಿಗೆ ಬಂದಿದ್ದ ಸಲ್ಮಾನ್, ತಲಾಖ್ ನೀಡುವುದಾಗಿ ಹೇಳಿ ಹೋಗಿದ್ದ. ಆನಂತರ ಫೋನ್ ಮಾಡಿ, ವಿಡಿಯೋ ತನ್ನಲ್ಲಿದೆ, ಅದನ್ನು ಹರಿಯಬಿಡುತ್ತೇನೆ ಎಂದು ಹೇಳಿದ್ದ. ಅಲ್ಲದೆ, ಉಳಿದ ಹಣವನ್ನು ಕೂಡಲೇ ತಂದು ಕೊಡು, ಇಲ್ಲದಿದ್ದರೆ ಕೊಂದು ಹಾಕುತ್ತೇನೆ ಎಂದು ಬೆದರಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Shivamogga Husband booked for blackmailing, uploading wifes nude video for dowry. A case has been registered at Ripponpet police station.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm