ಬ್ರೇಕಿಂಗ್ ನ್ಯೂಸ್
17-01-22 10:35 pm HK News Desk ಕ್ರೈಂ
ಹೈದರಾಬಾದ್, ಜ.17: ಪತ್ನಿ ಪರ ಪುರುಷರ ಜೊತೆಗಿದ್ದ ಅಶ್ಲೀಲ ವಿಡಿಯೋ ನೋಡಿದ ವ್ಯಕ್ತಿಯೊಬ್ಬ ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪೂರ್ವ ಗೋದಾವರಿ ಜಿಲ್ಲೆಯ ವಂಗಲಪುಡಿ ಗ್ರಾಮದಲ್ಲಿ ನಡೆದಿದೆ.
ವಂಗಲಪುಡಿ ಗ್ರಾಮದ 35 ವರ್ಷದ ವಿವಾಹಿತ ಮಹಿಳೆ ಉದ್ಯೋಗಕ್ಕಾಗಿ ಕುವೈತ್ ತೆರಳಿದ್ದು ಗಂಡ ಮತ್ತು ಮಕ್ಕಳನ್ನು ಊರಲ್ಲಿ ಬಿಟ್ಟಿದ್ದರು. ಗೋಕಾವರಂನಲ್ಲಿ ಇಬ್ಬರು ಗಂಡು ಮಕ್ಕಳು (13, 10 ವರ್ಷ) ಮತ್ತು ಒಬ್ಬ ಮಗಳು (12) ಅಜ್ಜಿಯ ಮನೆಯಲ್ಲಿ ವಾಸವಿದ್ದರು. ಆಟೋ ರಿಕ್ಷಾ ಓಡಿಸುತ್ತಿದ್ದ ತಂದೆ ಕೆಲವೊಮ್ಮೆ ಅಲ್ಲಿಗೆ ಹೋಗಿ ಮಕ್ಕಳನ್ನು ನೋಡಿಕೊಂಡು ತೆರಳುತ್ತಿದ್ದ.
ಶನಿವಾರ ಸಂಜೆ ಮಕ್ಕಳ ಬಳಿ ಬಂದಿದ್ದ ತಂದೆ, ಅವರನ್ನು ಹೊರಗೆ ಕರೆದೊಯ್ಯುವುದಾಗಿ ಹೇಳಿ ಹೋಗಿದ್ದ. ತೋಟಕ್ಕೆ ಕರೆದೊಯ್ದು ಇಲಿಗೆ ಹಾಕುವ ವಿಷವನ್ನು ತಾನೇ ಸೇವಿಸಿದ್ದು ಬಳಿಕ ತನ್ನ ಮೂವರು ಮಕ್ಕಳಿಗೆ ವಿಷ ನೀಡಲು ಯತ್ನಿಸಿದ್ದಾನೆ.
ಹತ್ತು ವರ್ಷದ ಮಗ ವಿಷ ಸೇವಿಸಿದ್ದರೆ, ಇನ್ನಿಬ್ಬರು ಮಕ್ಕಳು ವಿಷ ಸೇವಿಸಲಿಲ್ಲ. ಅಷ್ಟರಲ್ಲಿ ತಂದೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು ಮಕ್ಕಳಿಬ್ಬರು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಅಸ್ವಸ್ಥಗೊಂಡಿದ್ದ ತಂದೆ, ಮಗನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ
ನನಗೆ ಹತ್ತಿರದ ಸಂಬಂಧಿಯಿಂದ ನನ್ನ ಪತ್ನಿ ಪರ ಪುರುಷರ ಜೊತೆಗಿರುವ ಅಶ್ಲೀಲ ವಿಡಿಯೋ ಸಿಕ್ಕಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆದರೆ, ಆತ ಹೇಳುತ್ತಿರುವ ವಿಡಿಯೋಗಳನ್ನು ಪರಿಶೀಲಿಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷ ಸೇವಿಸಲು ಒತ್ತಾಯಿಸಿದ್ದ ತಂದೆ
‘ನಮ್ಮ ತಂದೆ ನಮ್ಮ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅಜ್ಜಿಯ ಮನೆಯಲ್ಲಿಯೇ ಇದ್ದು ಓದುತ್ತಿದ್ದೇವೆ. ಅವರು ಆಗಾಗ ಬಂದು ಹೋಗುತ್ತಿದ್ದರು. ಹಬ್ಬದ ಹಿನ್ನೆಲೆ ತಂದೆ ನಮ್ಮ ಬಳಿಗೆ ಬಂದಿದ್ದರು. ಹೀಗಾಗಿ ನಾವು ಅವರ ಜೊತೆ ಹೊರಗೆ ಹೋಗಿದ್ದೆವು. ಕಹಿ ಔಷಧಿ ಕುಡಿಯಲು ಹೇಳಿದ್ದರು. ವಿಷವೆಂದು ಸಂಶಯ ಬಂದು ಕುಡಿದಿರಲಿಲ್ಲ’ ಎಂದು ಇನ್ನಿಬ್ಬರು ಮಕ್ಕಳು ಹೇಳಿದ್ದಾರೆ.
Wife Sex video with other man leaked, husband attempts for suicide by killing two children in hyderabad.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am