ಬ್ರೇಕಿಂಗ್ ನ್ಯೂಸ್
17-01-22 10:35 pm HK News Desk ಕ್ರೈಂ
ಹೈದರಾಬಾದ್, ಜ.17: ಪತ್ನಿ ಪರ ಪುರುಷರ ಜೊತೆಗಿದ್ದ ಅಶ್ಲೀಲ ವಿಡಿಯೋ ನೋಡಿದ ವ್ಯಕ್ತಿಯೊಬ್ಬ ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪೂರ್ವ ಗೋದಾವರಿ ಜಿಲ್ಲೆಯ ವಂಗಲಪುಡಿ ಗ್ರಾಮದಲ್ಲಿ ನಡೆದಿದೆ.
ವಂಗಲಪುಡಿ ಗ್ರಾಮದ 35 ವರ್ಷದ ವಿವಾಹಿತ ಮಹಿಳೆ ಉದ್ಯೋಗಕ್ಕಾಗಿ ಕುವೈತ್ ತೆರಳಿದ್ದು ಗಂಡ ಮತ್ತು ಮಕ್ಕಳನ್ನು ಊರಲ್ಲಿ ಬಿಟ್ಟಿದ್ದರು. ಗೋಕಾವರಂನಲ್ಲಿ ಇಬ್ಬರು ಗಂಡು ಮಕ್ಕಳು (13, 10 ವರ್ಷ) ಮತ್ತು ಒಬ್ಬ ಮಗಳು (12) ಅಜ್ಜಿಯ ಮನೆಯಲ್ಲಿ ವಾಸವಿದ್ದರು. ಆಟೋ ರಿಕ್ಷಾ ಓಡಿಸುತ್ತಿದ್ದ ತಂದೆ ಕೆಲವೊಮ್ಮೆ ಅಲ್ಲಿಗೆ ಹೋಗಿ ಮಕ್ಕಳನ್ನು ನೋಡಿಕೊಂಡು ತೆರಳುತ್ತಿದ್ದ.
ಶನಿವಾರ ಸಂಜೆ ಮಕ್ಕಳ ಬಳಿ ಬಂದಿದ್ದ ತಂದೆ, ಅವರನ್ನು ಹೊರಗೆ ಕರೆದೊಯ್ಯುವುದಾಗಿ ಹೇಳಿ ಹೋಗಿದ್ದ. ತೋಟಕ್ಕೆ ಕರೆದೊಯ್ದು ಇಲಿಗೆ ಹಾಕುವ ವಿಷವನ್ನು ತಾನೇ ಸೇವಿಸಿದ್ದು ಬಳಿಕ ತನ್ನ ಮೂವರು ಮಕ್ಕಳಿಗೆ ವಿಷ ನೀಡಲು ಯತ್ನಿಸಿದ್ದಾನೆ.
ಹತ್ತು ವರ್ಷದ ಮಗ ವಿಷ ಸೇವಿಸಿದ್ದರೆ, ಇನ್ನಿಬ್ಬರು ಮಕ್ಕಳು ವಿಷ ಸೇವಿಸಲಿಲ್ಲ. ಅಷ್ಟರಲ್ಲಿ ತಂದೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು ಮಕ್ಕಳಿಬ್ಬರು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಅಸ್ವಸ್ಥಗೊಂಡಿದ್ದ ತಂದೆ, ಮಗನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ
ನನಗೆ ಹತ್ತಿರದ ಸಂಬಂಧಿಯಿಂದ ನನ್ನ ಪತ್ನಿ ಪರ ಪುರುಷರ ಜೊತೆಗಿರುವ ಅಶ್ಲೀಲ ವಿಡಿಯೋ ಸಿಕ್ಕಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆದರೆ, ಆತ ಹೇಳುತ್ತಿರುವ ವಿಡಿಯೋಗಳನ್ನು ಪರಿಶೀಲಿಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷ ಸೇವಿಸಲು ಒತ್ತಾಯಿಸಿದ್ದ ತಂದೆ
‘ನಮ್ಮ ತಂದೆ ನಮ್ಮ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅಜ್ಜಿಯ ಮನೆಯಲ್ಲಿಯೇ ಇದ್ದು ಓದುತ್ತಿದ್ದೇವೆ. ಅವರು ಆಗಾಗ ಬಂದು ಹೋಗುತ್ತಿದ್ದರು. ಹಬ್ಬದ ಹಿನ್ನೆಲೆ ತಂದೆ ನಮ್ಮ ಬಳಿಗೆ ಬಂದಿದ್ದರು. ಹೀಗಾಗಿ ನಾವು ಅವರ ಜೊತೆ ಹೊರಗೆ ಹೋಗಿದ್ದೆವು. ಕಹಿ ಔಷಧಿ ಕುಡಿಯಲು ಹೇಳಿದ್ದರು. ವಿಷವೆಂದು ಸಂಶಯ ಬಂದು ಕುಡಿದಿರಲಿಲ್ಲ’ ಎಂದು ಇನ್ನಿಬ್ಬರು ಮಕ್ಕಳು ಹೇಳಿದ್ದಾರೆ.
Wife Sex video with other man leaked, husband attempts for suicide by killing two children in hyderabad.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm