ಬ್ರೇಕಿಂಗ್ ನ್ಯೂಸ್
17-01-22 10:35 pm HK News Desk ಕ್ರೈಂ
ಹೈದರಾಬಾದ್, ಜ.17: ಪತ್ನಿ ಪರ ಪುರುಷರ ಜೊತೆಗಿದ್ದ ಅಶ್ಲೀಲ ವಿಡಿಯೋ ನೋಡಿದ ವ್ಯಕ್ತಿಯೊಬ್ಬ ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪೂರ್ವ ಗೋದಾವರಿ ಜಿಲ್ಲೆಯ ವಂಗಲಪುಡಿ ಗ್ರಾಮದಲ್ಲಿ ನಡೆದಿದೆ.
ವಂಗಲಪುಡಿ ಗ್ರಾಮದ 35 ವರ್ಷದ ವಿವಾಹಿತ ಮಹಿಳೆ ಉದ್ಯೋಗಕ್ಕಾಗಿ ಕುವೈತ್ ತೆರಳಿದ್ದು ಗಂಡ ಮತ್ತು ಮಕ್ಕಳನ್ನು ಊರಲ್ಲಿ ಬಿಟ್ಟಿದ್ದರು. ಗೋಕಾವರಂನಲ್ಲಿ ಇಬ್ಬರು ಗಂಡು ಮಕ್ಕಳು (13, 10 ವರ್ಷ) ಮತ್ತು ಒಬ್ಬ ಮಗಳು (12) ಅಜ್ಜಿಯ ಮನೆಯಲ್ಲಿ ವಾಸವಿದ್ದರು. ಆಟೋ ರಿಕ್ಷಾ ಓಡಿಸುತ್ತಿದ್ದ ತಂದೆ ಕೆಲವೊಮ್ಮೆ ಅಲ್ಲಿಗೆ ಹೋಗಿ ಮಕ್ಕಳನ್ನು ನೋಡಿಕೊಂಡು ತೆರಳುತ್ತಿದ್ದ.
ಶನಿವಾರ ಸಂಜೆ ಮಕ್ಕಳ ಬಳಿ ಬಂದಿದ್ದ ತಂದೆ, ಅವರನ್ನು ಹೊರಗೆ ಕರೆದೊಯ್ಯುವುದಾಗಿ ಹೇಳಿ ಹೋಗಿದ್ದ. ತೋಟಕ್ಕೆ ಕರೆದೊಯ್ದು ಇಲಿಗೆ ಹಾಕುವ ವಿಷವನ್ನು ತಾನೇ ಸೇವಿಸಿದ್ದು ಬಳಿಕ ತನ್ನ ಮೂವರು ಮಕ್ಕಳಿಗೆ ವಿಷ ನೀಡಲು ಯತ್ನಿಸಿದ್ದಾನೆ.
ಹತ್ತು ವರ್ಷದ ಮಗ ವಿಷ ಸೇವಿಸಿದ್ದರೆ, ಇನ್ನಿಬ್ಬರು ಮಕ್ಕಳು ವಿಷ ಸೇವಿಸಲಿಲ್ಲ. ಅಷ್ಟರಲ್ಲಿ ತಂದೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು ಮಕ್ಕಳಿಬ್ಬರು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಅಸ್ವಸ್ಥಗೊಂಡಿದ್ದ ತಂದೆ, ಮಗನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ
ನನಗೆ ಹತ್ತಿರದ ಸಂಬಂಧಿಯಿಂದ ನನ್ನ ಪತ್ನಿ ಪರ ಪುರುಷರ ಜೊತೆಗಿರುವ ಅಶ್ಲೀಲ ವಿಡಿಯೋ ಸಿಕ್ಕಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆದರೆ, ಆತ ಹೇಳುತ್ತಿರುವ ವಿಡಿಯೋಗಳನ್ನು ಪರಿಶೀಲಿಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷ ಸೇವಿಸಲು ಒತ್ತಾಯಿಸಿದ್ದ ತಂದೆ
‘ನಮ್ಮ ತಂದೆ ನಮ್ಮ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅಜ್ಜಿಯ ಮನೆಯಲ್ಲಿಯೇ ಇದ್ದು ಓದುತ್ತಿದ್ದೇವೆ. ಅವರು ಆಗಾಗ ಬಂದು ಹೋಗುತ್ತಿದ್ದರು. ಹಬ್ಬದ ಹಿನ್ನೆಲೆ ತಂದೆ ನಮ್ಮ ಬಳಿಗೆ ಬಂದಿದ್ದರು. ಹೀಗಾಗಿ ನಾವು ಅವರ ಜೊತೆ ಹೊರಗೆ ಹೋಗಿದ್ದೆವು. ಕಹಿ ಔಷಧಿ ಕುಡಿಯಲು ಹೇಳಿದ್ದರು. ವಿಷವೆಂದು ಸಂಶಯ ಬಂದು ಕುಡಿದಿರಲಿಲ್ಲ’ ಎಂದು ಇನ್ನಿಬ್ಬರು ಮಕ್ಕಳು ಹೇಳಿದ್ದಾರೆ.
Wife Sex video with other man leaked, husband attempts for suicide by killing two children in hyderabad.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm