ಬ್ರೇಕಿಂಗ್ ನ್ಯೂಸ್
18-01-22 09:21 pm HK Desk news ಕ್ರೈಂ
ಬೆಂಗಳೂರು, ಜ.18 : ಬಿಎಸ್ಸಿ ವಿದ್ಯಾರ್ಥಿಯೊಬ್ಬ ಇನ್ ಸ್ಟಾ ಗ್ರಾಮಿನಲ್ಲಿ ಯುವತಿ ಹೆಸರಲ್ಲಿ ಖಾತೆ ತೆರೆದು ತನ್ನನ್ನು ಸಲಿಂಗ ಕಾಮಿಯೆಂದು ಹೇಳಿಕೊಂಡಿದ್ದಲ್ಲದೆ ಸ್ನೇಹಿತೆಯರನ್ನು ಸಂಪಾದಿಸಿ, ಬಳಿಕ ಅವರನ್ನೇ ಬ್ಲಾಕ್ಮೇಲ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಫ್ರೇಸರ್ ಟೌನ್ ನಿವಾಸಿಯಾಗಿರುವ ಪ್ರಪಂಚ್ ನಾಚಪ್ಪ ಎಂಬ 21 ವರ್ಷದ ಯುವಕ, ಕಳೆದ ಸೆಪ್ಟಂಬರ್ ತಿಂಗಳಲ್ಲಿ ಪ್ರತೀಕ್ಷಾ ಬೋರಾ ಹೆಸರಲ್ಲಿ ಇನ್ ಸ್ಟಾ ಗ್ರಾಮಿನಲ್ಲಿ ಖಾತೆ ತೆರೆದಿದ್ದ. ತಾನೊಬ್ಬ ಸಲಿಂಗ ಕಾಮಿ ಯುವತಿಯಾಗಿದ್ದು, ಸೂಕ್ತ ಸಂಗಾತಿಗಾಗಿ ಹುಡುಕಾಟ ನಡೆಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದ.
ಆನಂತರ ಕೆಲವು ಯುವತಿಯರ ಸ್ನೇಹ ಸಂಪಾದಿಸಿದ್ದು ಸೆಕ್ಸ್ ಚಾಟಿಂಗ್ ನಡೆಸಿದ್ದಾನೆ. ಈ ವೇಳೆ, ಯುವತಿಯರ ನಗ್ನ ಚಿತ್ರವನ್ನು ಕೇಳಿ ಪಡೆದಿದ್ದು, ಆ ಫೋಟೋ ಮುಂದಿಟ್ಟು ಬ್ಲಾಕ್ಮೇಲ್ ಆರಂಭಿಸಿದ್ದಾನೆ. ಹಣಕ್ಕಾಗಿ ಪೀಡಿಸಿದ್ದು, ಹಣ ಕೊಡದೇ ಇದ್ದರೆ ಫೋಟೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾನೆ. ಅಲ್ಲದೆ, ತನ್ನನ್ನು ಮಾಡೆಲ್ ಎಂದು ಹೇಳಿಕೊಂಡಿದ್ದು ನೀವು ಮಾಡೆಲ್ ಆಗುವುದಿದ್ದರೆ ಚಾನ್ಸ್ ಕೊಡಿಸುತ್ತೀನಿ ಎಂದು ಆಸೆ ತೋರಿಸಿದ್ದ. 30ರಿಂದ 40 ಮಂದಿಗೆ ಈ ರೀತಿ ಬ್ಲಾಕ್ಮೇಲ್ ಮಾಡಿದ್ದು ಕೆಲವು ಲಕ್ಷ ರೂಪಾಯಿ ದೋಚಿದ್ದಾನೆ.
ತನ್ನನ್ನು ಸಲಿಂಗಕಾಮಿ ಎಂದು ಹೇಳಿಕೊಂಡು ಮರುಳು ಮಾಡುತ್ತಿದ್ದ. ತನ್ನದೇ ನಗ್ನ ಚಿತ್ರವೆಂದು ಹೇಳಿ ಯಾವುದೋ ಫೋಟೋ ಕಳಿಸುತ್ತಿದ್ದ. ಆಮೂಲಕ ನಿನ್ನ ಚಿತ್ರ ಕಳಿಸುವಂತೆ ಪೀಡಿಸುತ್ತಿದ್ದ. ಪ್ರತಿ ಫೋಟೋಗೆ 4 ಸಾವಿರ ರೂ. ಕೊಡುತ್ತೇನೆಂದು ಹೇಳಿ ಆಮಿಷವೊಡ್ಡಿ ಫೋಟೋ ಪಡೆಯುತ್ತಿದ್ದ. ಆನಂತರ, ನಮ್ಮನ್ನೇ ಬ್ಲಾಕ್ಮೇಲ್ ಮಾಡುತ್ತಿದ್ದ ಎಂದು ಯುವತಿಯೊಬ್ಬಳು ತನಿಖಾಧಿಕಾರಿ ಮುಂದೆ ಹೇಳಿಕೆ ನೀಡಿದ್ದಾಳೆ. ಈ ಬಗ್ಗೆ ದೂರು ಪಡೆದ ಪೊಲೀಸರು ಇನ್ ಸ್ಟಾ ಗ್ರಾಮ್ ಹಿನ್ನೆಲೆಯನ್ನು ಕೆದಕಿ ನೋಡಿದಾಗ ಬಿಎಸ್ಸಿ ವಿದ್ಯಾರ್ಥಿ ನಾಚಪ್ಪನ ನಿಜಬಣ್ಣ ಬಯಲಾಗಿತ್ತು.
ಸಂತ್ರಸ್ತ ಯುವತಿಯರು ಆತ ಹಣಕ್ಕಾಗಿ ಬ್ಲಾಕ್ಮೇಲ್ ಮಾಡಲು ಶುರು ಮಾಡಿದರೆ, ಆತನ ಖಾತೆಯನ್ನು ಬ್ಲಾಕ್ ಮಾಡುತ್ತಿದ್ದರು. ಆದರೆ ಆತ ಬೇರೊಂದು ಖಾತೆ ತೆರೆದು ಸಂಪರ್ಕಕ್ಕೆ ಬಂದು ಮತ್ತೆ ಬ್ಲಾಕ್ಮೇಲ್ ಮಾಡುತ್ತಿದ್ದ. ಹಣ ಕೊಡದೇ ಇದ್ದರೆ ಫೋಟೋವನ್ನು ಷೇರ್ ಮಾಡುತ್ತೇನೆಂದು ಬೆದರಿಸುತ್ತಿದ್ದ. ಪ್ರತಿ ಯುವತಿಯಿಂದ ಕನಿಷ್ಠ 5ರಿಂದ ಹತ್ತು ಸಾವಿರ ರೂ. ಹಣ ಪಡೆಯುತ್ತಿದ್ದ. ಕಾಲೇಜು ಯುವತಿಯರನ್ನೇ ಟಾರ್ಗೆಟ್ ಮಾಡಿ, ತನ್ನ ಜಾಲ ಬೀಸುತ್ತಿದ್ದ. ಬಲೆಗೆ ಬೀಳುತ್ತಿದ್ದ ಯುವತಿಯರನ್ನು ಹಣಕ್ಕಾಗಿ ಪೀಡಿಸುತ್ತಿದ್ದ ಎನ್ನುವುದು ತನಿಖೆಯಲ್ಲಿ ತಿಳಿದುಬಂದಿದೆ.
21-year-old Nachappa used a fake Instagram account and pretended to be a lesbian. He would win the confidence of girls and ask them to share nude pictures. He then blackmailed them, threatening to upload the pictures.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm