ಬ್ರೇಕಿಂಗ್ ನ್ಯೂಸ್
18-01-22 09:21 pm HK Desk news ಕ್ರೈಂ
ಬೆಂಗಳೂರು, ಜ.18 : ಬಿಎಸ್ಸಿ ವಿದ್ಯಾರ್ಥಿಯೊಬ್ಬ ಇನ್ ಸ್ಟಾ ಗ್ರಾಮಿನಲ್ಲಿ ಯುವತಿ ಹೆಸರಲ್ಲಿ ಖಾತೆ ತೆರೆದು ತನ್ನನ್ನು ಸಲಿಂಗ ಕಾಮಿಯೆಂದು ಹೇಳಿಕೊಂಡಿದ್ದಲ್ಲದೆ ಸ್ನೇಹಿತೆಯರನ್ನು ಸಂಪಾದಿಸಿ, ಬಳಿಕ ಅವರನ್ನೇ ಬ್ಲಾಕ್ಮೇಲ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಫ್ರೇಸರ್ ಟೌನ್ ನಿವಾಸಿಯಾಗಿರುವ ಪ್ರಪಂಚ್ ನಾಚಪ್ಪ ಎಂಬ 21 ವರ್ಷದ ಯುವಕ, ಕಳೆದ ಸೆಪ್ಟಂಬರ್ ತಿಂಗಳಲ್ಲಿ ಪ್ರತೀಕ್ಷಾ ಬೋರಾ ಹೆಸರಲ್ಲಿ ಇನ್ ಸ್ಟಾ ಗ್ರಾಮಿನಲ್ಲಿ ಖಾತೆ ತೆರೆದಿದ್ದ. ತಾನೊಬ್ಬ ಸಲಿಂಗ ಕಾಮಿ ಯುವತಿಯಾಗಿದ್ದು, ಸೂಕ್ತ ಸಂಗಾತಿಗಾಗಿ ಹುಡುಕಾಟ ನಡೆಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದ.
ಆನಂತರ ಕೆಲವು ಯುವತಿಯರ ಸ್ನೇಹ ಸಂಪಾದಿಸಿದ್ದು ಸೆಕ್ಸ್ ಚಾಟಿಂಗ್ ನಡೆಸಿದ್ದಾನೆ. ಈ ವೇಳೆ, ಯುವತಿಯರ ನಗ್ನ ಚಿತ್ರವನ್ನು ಕೇಳಿ ಪಡೆದಿದ್ದು, ಆ ಫೋಟೋ ಮುಂದಿಟ್ಟು ಬ್ಲಾಕ್ಮೇಲ್ ಆರಂಭಿಸಿದ್ದಾನೆ. ಹಣಕ್ಕಾಗಿ ಪೀಡಿಸಿದ್ದು, ಹಣ ಕೊಡದೇ ಇದ್ದರೆ ಫೋಟೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾನೆ. ಅಲ್ಲದೆ, ತನ್ನನ್ನು ಮಾಡೆಲ್ ಎಂದು ಹೇಳಿಕೊಂಡಿದ್ದು ನೀವು ಮಾಡೆಲ್ ಆಗುವುದಿದ್ದರೆ ಚಾನ್ಸ್ ಕೊಡಿಸುತ್ತೀನಿ ಎಂದು ಆಸೆ ತೋರಿಸಿದ್ದ. 30ರಿಂದ 40 ಮಂದಿಗೆ ಈ ರೀತಿ ಬ್ಲಾಕ್ಮೇಲ್ ಮಾಡಿದ್ದು ಕೆಲವು ಲಕ್ಷ ರೂಪಾಯಿ ದೋಚಿದ್ದಾನೆ.
ತನ್ನನ್ನು ಸಲಿಂಗಕಾಮಿ ಎಂದು ಹೇಳಿಕೊಂಡು ಮರುಳು ಮಾಡುತ್ತಿದ್ದ. ತನ್ನದೇ ನಗ್ನ ಚಿತ್ರವೆಂದು ಹೇಳಿ ಯಾವುದೋ ಫೋಟೋ ಕಳಿಸುತ್ತಿದ್ದ. ಆಮೂಲಕ ನಿನ್ನ ಚಿತ್ರ ಕಳಿಸುವಂತೆ ಪೀಡಿಸುತ್ತಿದ್ದ. ಪ್ರತಿ ಫೋಟೋಗೆ 4 ಸಾವಿರ ರೂ. ಕೊಡುತ್ತೇನೆಂದು ಹೇಳಿ ಆಮಿಷವೊಡ್ಡಿ ಫೋಟೋ ಪಡೆಯುತ್ತಿದ್ದ. ಆನಂತರ, ನಮ್ಮನ್ನೇ ಬ್ಲಾಕ್ಮೇಲ್ ಮಾಡುತ್ತಿದ್ದ ಎಂದು ಯುವತಿಯೊಬ್ಬಳು ತನಿಖಾಧಿಕಾರಿ ಮುಂದೆ ಹೇಳಿಕೆ ನೀಡಿದ್ದಾಳೆ. ಈ ಬಗ್ಗೆ ದೂರು ಪಡೆದ ಪೊಲೀಸರು ಇನ್ ಸ್ಟಾ ಗ್ರಾಮ್ ಹಿನ್ನೆಲೆಯನ್ನು ಕೆದಕಿ ನೋಡಿದಾಗ ಬಿಎಸ್ಸಿ ವಿದ್ಯಾರ್ಥಿ ನಾಚಪ್ಪನ ನಿಜಬಣ್ಣ ಬಯಲಾಗಿತ್ತು.
ಸಂತ್ರಸ್ತ ಯುವತಿಯರು ಆತ ಹಣಕ್ಕಾಗಿ ಬ್ಲಾಕ್ಮೇಲ್ ಮಾಡಲು ಶುರು ಮಾಡಿದರೆ, ಆತನ ಖಾತೆಯನ್ನು ಬ್ಲಾಕ್ ಮಾಡುತ್ತಿದ್ದರು. ಆದರೆ ಆತ ಬೇರೊಂದು ಖಾತೆ ತೆರೆದು ಸಂಪರ್ಕಕ್ಕೆ ಬಂದು ಮತ್ತೆ ಬ್ಲಾಕ್ಮೇಲ್ ಮಾಡುತ್ತಿದ್ದ. ಹಣ ಕೊಡದೇ ಇದ್ದರೆ ಫೋಟೋವನ್ನು ಷೇರ್ ಮಾಡುತ್ತೇನೆಂದು ಬೆದರಿಸುತ್ತಿದ್ದ. ಪ್ರತಿ ಯುವತಿಯಿಂದ ಕನಿಷ್ಠ 5ರಿಂದ ಹತ್ತು ಸಾವಿರ ರೂ. ಹಣ ಪಡೆಯುತ್ತಿದ್ದ. ಕಾಲೇಜು ಯುವತಿಯರನ್ನೇ ಟಾರ್ಗೆಟ್ ಮಾಡಿ, ತನ್ನ ಜಾಲ ಬೀಸುತ್ತಿದ್ದ. ಬಲೆಗೆ ಬೀಳುತ್ತಿದ್ದ ಯುವತಿಯರನ್ನು ಹಣಕ್ಕಾಗಿ ಪೀಡಿಸುತ್ತಿದ್ದ ಎನ್ನುವುದು ತನಿಖೆಯಲ್ಲಿ ತಿಳಿದುಬಂದಿದೆ.
21-year-old Nachappa used a fake Instagram account and pretended to be a lesbian. He would win the confidence of girls and ask them to share nude pictures. He then blackmailed them, threatening to upload the pictures.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm