ಬ್ರೇಕಿಂಗ್ ನ್ಯೂಸ್
19-01-22 03:51 pm HK Desk news ಕ್ರೈಂ
ಢಾಕಾ, ಜ.19 : ನಾಪತ್ತೆಯಾದ ಎರಡು ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದ ಬಾಂಗ್ಲಾದೇಶದ ಖ್ಯಾತ ಸಿನಿಮಾ ನಟಿ ರೈಮಾ ಇಸ್ಲಾಮ್ ಶಿಮು(45) ಪ್ರಕರಣದಲ್ಲಿ ಸ್ಫೋಟಕ ತಿರುವು ಲಭಿಸಿದ್ದು, ಆಕೆಯನ್ನು ಗಂಡನೇ ಕೊಲೆ ಮಾಡಿದ್ದಾನೆ ಎನ್ನುವ ಮಾಹಿತಿ ಲಭಿಸಿದೆ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆಗೈದ ವಿಚಾರವನ್ನು ಹೇಳಿಕೊಂಡಿದ್ದಾನೆ.
ಜನವರಿ 17ರಂದು ಬೆಳಗ್ಗೆ ನಟಿ ರೈಮಾ ಇಸ್ಲಾಮ್ ಶಿಮು ಶವ ಢಾಕಾ ನಗರದ ಕಿರಾಣಿಗಂಜ್ ಏರಿಯಾದಲ್ಲಿ ರಸ್ತೆ ಬದಿಯ ಮೋರಿಯೊಂದರಲ್ಲಿ ಪತ್ತೆಯಾಗಿತ್ತು. ಗೋಣಿ ಚೀಲದಲ್ಲಿ ಕಟ್ಟಿ ಎಸೆಯಲಾಗಿದ್ದ ಶವವನ್ನು ಸ್ಥಳೀಯರು ಗುರುತಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಶವವನ್ನು ಪೋಸ್ಟ್ ಮಾರ್ಟಂ ನಡೆಸಲು ರವಾನಿಸಲಾಗಿತ್ತು. ಇದಕ್ಕೂ ಮುನ್ನ ಭಾನುವಾರ ಬೆಳಗ್ಗೆ ಶಿಮು ಗಂಡ ಶೆಖಾವತ್ ಆಲಿ ನೋಬಲ್, ತನ್ನ ಪತ್ನಿ ನಾಪತ್ತೆಯಾಗಿದ್ದಾಗಿ ಪೊಲೀಸ್ ದೂರು ನೀಡಿದ್ದ.

ನಟಿಯ ಶವ ಪತ್ತೆಯಾದ ಬೆನ್ನಲ್ಲೇ ಪೊಲೀಸರು ಆಕೆಯ ಪತಿ ಶೆಖಾವತ್ ಮತ್ತು ಆತನ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದರು. ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಟಿಯನ್ನು ಶೆಖಾವತ್ ಸೂಚನೆಯಂತೆ ದುಷ್ಕರ್ಮಿಗಳ ತಂಡ, ಕೊಲೆಗೈದು ಕಿರಾಣಿಗಂಜ್ ಏರಿಯಾದ ಮೋರಿಯೊಂದರಲ್ಲಿ ಎಸೆದಿದೆ ಎನ್ನಲಾಗುತ್ತಿದೆ. ಕೊಲೆ ಕೃತ್ಯದ ಬಗ್ಗೆ ಗಂಡ ಒಪ್ಪಿಕೊಂಡಿದ್ದು, ಯಾಕಾಗಿ ಈ ಕೃತ್ಯ ನಡೆಸಿದ್ದಾನೆ ಎನ್ನುವುದು ಇನ್ನೂ ದೃಢಪಟ್ಟಿಲ್ಲ. ಹೀಗಾಗಿ ನಟಿಯ ಕೊಲೆ ಪ್ರಕರಣ ಸಂಬಂಧಿಸಿ ಹೆಚ್ಚಿನ ತನಿಖೆ ನಡೆಸುವಂತೆ ಆಕೆಯ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಶವದ ಮೇಲೆ ಗಾಯದ ಗುರುತುಗಳಿದ್ದುದರಿಂದ ಕೊಲೆ ಎನ್ನುವ ಶಂಕೆ ವ್ಯಕ್ತವಾಗಿತ್ತು. ಪ್ರಾಥಮಿಕ ಮಾಹಿತಿ ಕಲೆಹಾಕುವುದಕ್ಕಾಗಿ ಗಂಡನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಕೆಲವು ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಬಾಂಗ್ಲಾದೇಶದ ಕೆಲವು ನಟರು ಕೊಲೆಯಲ್ಲಿ ಶಾಮೀಲಾಗಿದ್ದಾರೆ ಎನ್ನಲಾಗುತ್ತಿದೆ. 1998ರಲ್ಲಿ ಸಿನಿಮಾ ರಂಗ ಪ್ರವೇಶಿಸಿದ್ದ ರೈಮಾ ಶಿಮು ಬಾಂಗ್ಲಾದಲ್ಲಿ ಹೆಸರಾಂತ ನಟಿಯಾಗಿದ್ದು 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಅಲ್ಲದೆ, ಟಿವಿ ಸೀರಿಯಲ್, ನಾಟಕಗಳ ನಿರ್ಮಾಣದಲ್ಲಿಯೂ ತೊಡಗಿಸಿದ್ದರು. ಬಾಂಗ್ಲಾದೇಶ ಸಿನಿಮಾ ಕಲಾವಿದರ ಸಂಘದ ಗೌರವ ಸದಸ್ಯೆಯೂ ಆಗಿದ್ದರು.
In a shocking turn of events, Bangladeshi actress Raima Islam Shimu was found dead in a sack. She went missing a few days back and her dead body was found in a sack near a bridge in Keraniganj, Dhaka, on Monday (January 17, 2022). Her husband, Shakhawat Ali Nobel, was interrogated by the police after they found injury marks on the late actress' body. Nobel has confessed to murdering his wife Raima.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm