ಬ್ರೇಕಿಂಗ್ ನ್ಯೂಸ್
21-01-22 11:00 pm Mangalore Correspondent ಕ್ರೈಂ
ಮಂಗಳೂರು, ಜ.21 : ನಗರದ ಕುದ್ರೋಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಸ್ಸಾಂ ಮೂಲದ ಯುವತಿ ಅನುಮಾನಾಸ್ಪದ ಸಾವನ್ನಪ್ಪಿದ್ದು, ಆಕೆಯ ಗಂಡ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಗಿ ಪೊಲೀಸರಿಗೆ ದೂರು ನೀಡಿದ್ದಾನೆ.
ಅಸ್ಸಾಮ್ ಮೂಲದ ಸ್ವಹೀದುಲ್ ಅಸ್ಲಾಮ್ ಲಷ್ಕರ್ (30) ಎಂಬ ಯುವಕ ಮತ್ತು ಆತನ ಪತ್ನಿ ಎನ್ನಲಾದ ಸೂಫಿಯಾ ಬೇಗಂ ಆರು ತಿಂಗಳ ಹಿಂದೆ ಮಂಗಳೂರಿಗೆ ಬಂದಿದ್ದು, ಕುದ್ರೋಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಸ್ವಹೀದುಲ್ ಮಂಗಳೂರಿನಲ್ಲಿ ಪೈಂಟಿಂಗ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ.
ಶುಕ್ರವಾರ ಮುಂಜಾನೆ ನಾಲ್ಕು ಗಂಟೆಗೆ ಎದ್ದು ಅಡುಗೆ ಕೆಲಸ ಮಾಡಿ ಮಲಗಿದ್ದು, ಬೆಳಗ್ಗೆ 7.45ಕ್ಕೆ ಎದ್ದು ನೋಡಿದಾಗ ಸೂಫಿಯಾ ಬೇಗಂ ತನ್ನ ಮಲಗಿದ ಕೋಣೆಯಲ್ಲಿ ಕಿಟಕಿಯ ಸರಳಿಗೆ ಚೂಡಿದಾರದ ಶಾಲು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬಳಿಕ ಆಕೆಯನ್ನು ಶಾಲಿನಿಂದ ಬಿಡಿಸಿ ನೆಲದಲ್ಲಿ ಮಲಗಿಸಿದ್ದೇನೆ. ನೆರೆಹೊರೆಯವರಿಗೆ ಈ ಬಗ್ಗೆ ತಿಳಿಸಿದ್ದು ಸೂಫಿಯಾ ಮೃತಪಟ್ಟಿದ್ದು ಕಂಡುಬಂದಿರುತ್ತದೆ ಎಂದು ದೂರಿನಲ್ಲಿ ಲಷ್ಕರ್ ಹೇಳಿದ್ದಾನೆ.
ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಕೂಡ ಅಸ್ಸಾಂ ಮೂಲದ ನಿವಾಸಿಗಳಾಗಿದ್ದು ಪೊಲೀಸರು ಲಷ್ಕರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯುವತಿಯ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಅವರು ಮಂಗಳೂರಿಗೆ ಬರುತ್ತಿದ್ದಾರೆ ಅನ್ನುವ ಮಾಹಿತಿಯಿದೆ. ಆಕೆಯ ಹೆತ್ತವರ ಮಾಹಿತಿ ಪ್ರಕಾರ, ಯುವತಿಗೆ 17 ವರ್ಷ ಆಗಿದ್ದು, ಹತ್ತನೇ ಕ್ಲಾಸ್ ಓದುತ್ತಿರುವಾಗಲೇ ಆಕೆಯನ್ನು ಪ್ರೀತಿಸಿ ಅಲ್ಲಿಂದ ಮಂಗಳೂರಿಗೆ ಕರೆದುಕೊಂಡು ಬಂದಿದ್ದ. ಈಗ ಯಾವುದೋ ವಿಚಾರದಲ್ಲಿ ಕಲಹ ಏರ್ಪಟ್ಟು ಹುಡುಗಿ ಸಾವಿಗೆ ಶರಣಾಗಿದ್ದಾಳೆಯೇ ಅಥವಾ ಈತನೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆಯೇ ಎಂಬ ಶಂಕೆಯಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ.
A painter has filed a complaint with the Bunder police that his wife committed suicide on Friday, January 21. According to the complaint, the deceased Sufia Begam was living with the painter Shohidul in a rented house in Kudroli for the past five months. Sufia Begam was a homemaker.
25-04-24 11:07 pm
Bangalore Correspondent
Cm Siddaramaiah Neha house visit: ಹುಬ್ಬಳ್ಳಿ ;...
25-04-24 10:57 pm
Shivaraj Tangadagi, Janardhana Reddy: ಶಿವರಾಜ...
25-04-24 09:57 pm
CID team, Neha house Hubballi: ಹುಬ್ಬಳ್ಳಿ ನೇಹಾ...
25-04-24 02:19 pm
Mallikarjun Kharge speech at Kalaburgi: ಮತ ಹಾ...
24-04-24 11:14 pm
25-04-24 03:49 pm
HK News Desk
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
25-04-24 10:01 pm
Mangalore Correspondent
Mangalore Loksabha elections: ದಕ್ಷಿಣ ಕನ್ನಡ ಲೋ...
25-04-24 09:50 pm
Blood donation, KMC manipal: ಲೋಕಸಭಾ ಚುನಾವಣೆಯ...
25-04-24 08:45 pm
Banta Brigade, Mangalore, Brijesh Chowta: ಬಂಟ...
25-04-24 02:42 pm
Vishwa Hindu Parishad, Vhp, Mangalore: ರಾಜ್ಯದ...
25-04-24 12:59 pm
25-04-24 10:18 pm
Mangalore Correspondent
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm