ಬ್ರೇಕಿಂಗ್ ನ್ಯೂಸ್
23-01-22 09:09 pm HK Desk news ಕ್ರೈಂ
ತಿರುವನಂತಪುರ, ಜ.23 : ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಮತ್ತು ಮಕ್ಕಳ ಪೋರ್ನೋ ವಿಡಿಯೋ ಪ್ರಸಾರದ ಪ್ರಕರಣ ಸಂಬಂಧಿಸಿ ಕೇರಳ ಪೊಲೀಸರು ಪಿ- ಹಂಟ್ ಹೆಸರಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದು ರಾಜ್ಯಾದ್ಯಂತ ಹತ್ತು ಮಂದಿಯನ್ನು ಬಂಧಿಸಿದ್ದಾರೆ.
ಜ.16 ರಂದು ವಿಶೇಷ ಕಾರ್ಯಾಚರಣೆ ನಡೆದಿದ್ದು ಸುಮಾರು 161 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಅಲ್ಲದೆ, 186 ಮೊಬೈಲ್ ಇನ್ನಿತರ ಇಲೆಕ್ಟ್ರಾನಿಕ್ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಎಡಿಜಿಪಿ ಮನೋಜ್ ಅಬ್ರಹಾಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ವಿವಿಧ ಮಕ್ಕಳ ಪೋರ್ನೋ ವಿಡಿಯೋ ಪ್ರಸಾರದ ಜಾಲಗಳನ್ನು ಪತ್ತೆ ಮಾಡಲಾಗಿದೆ. ಪೊಲೀಸರು ನಕಲಿ ಹೆಸರುಗಳ ಮೂಲಕ ಈ ಪೋರ್ನೋ ವಿಡಿಯೋ ಜಾಲದ ಒಳಕ್ಕೆ ನುಗ್ಗಿದ್ದು ಆಮೂಲಕ ಅದರ ಒಳಸುಳಿಯನ್ನು ತಿಳಿದುಕೊಂಡಿದ್ದರು. ನಿರಂತರ ಕಾರ್ಯಾಚರಣೆಯಿಂದ ಈ ರೀತಿಯ ಅಪರಾಧ ಕೃತ್ಯ ಹೊರಬಂದಿತ್ತು.
ವಶಕ್ಕೆ ಪಡೆಯಲಾದ ಮೊಬೈಲ್ ಇನ್ನಿತರ ಉಪಕರಣಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳದ ವಿಡಿಯೋ ಪತ್ತೆಯಾಗಿದೆ. ಮಕ್ಕಳ ಮೇಲೆ ರೇಪ್, ಮನೆ, ಸ್ವಿಮ್ಮಿಂಗ್ ಪೂಲ್, ವಾಟರ್ ಪಾರ್ಕ್, ಮಾಲ್, ರೆಸಾರ್ಟ್, ಹೊಟೇಲ್ ಗಳಲ್ಲಿ ಮಕ್ಕಳ ಮೇಲೆ ಎಸಗುವ ಹಲ್ಲೆ ಇನ್ನಿತರ ಕಿರುಕುಳದ ವಿಡಿಯೋಗಳಿದ್ದವು. ಈ ರೀತಿಯ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾ ಗ್ರೂಪ್ ಗಳಲ್ಲಿ ನಿಗೂಢ ರೀತಿಯಲ್ಲಿ ಷೇರ್ ಮಾಡುತ್ತಿದ್ದರು.
ಮಕ್ಕಳ ಪೋರ್ನೋ ವಿಡಿಯೋಗಳನ್ನು ನೋಡುವುದು, ಷೇರ್ ಮಾಡುವುದು, ಮೊಬೈಲ್ ನಲ್ಲಿ ಇಟ್ಟುಕೊಳ್ಳುವುದು ಅಪರಾಧವಾಗಿದ್ದು ಈ ರೀತಿಯ ಕೃತ್ಯಗಳಿಗೆ ಕಾನೂನಿನಲ್ಲಿ ಐದು ವರ್ಷಗಳ ಶಿಕ್ಷೆ ವಿಧಿಸಬಹುದಾಗಿದೆ.
As many as ten people were arrested as part of operation P-Hunt by the Kerala Police to tackle child pornography and child sexual exploitation in the state. The tenth edition of the drive was held on January 16 and over 161 cases were registered and 186 devices were seized during the drive.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am