ಬ್ರೇಕಿಂಗ್ ನ್ಯೂಸ್
24-01-22 08:52 pm Mangalore Correspondent ಕ್ರೈಂ
ಮಂಗಳೂರು, ಜ.24 : ಕೆಎಸ್ಆರ್ ಪಿ ವಿಭಾಗದಲ್ಲಿ ಪೊಲೀಸ್ ಹುದ್ದೆ ಪಡೆಯುವುದಕ್ಕಾಗಿ ಅರ್ಜಿ ಸಲ್ಲಿಸಿದ್ದ ನಿವೃತ್ತ ಯೋಧನೊಬ್ಬ ತನ್ನ ಸೇವೆಯ ಕುರಿತ ದಾಖಲಾತಿಯಲ್ಲಿ ಫೋರ್ಜರಿ ಮಾಡಿರುವುದು ಕಂಡುಬಂದಿದ್ದು, ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ವಿಭಾಗದ ಕೆಎಸ್ಆರ್ ಪಿ ಯೂನಿಟ್ ಅಸೈಗೋಳಿಯಲ್ಲಿದ್ದು, ಅಲ್ಲಿನ ಕೇಂದ್ರಕ್ಕೆ ಸೇರ್ಪಡೆಯಾಗಲು ಚಿತ್ರದುರ್ಗದ ವಸಂತ ಕುಮಾರ್ ಎಂಬ ವ್ಯಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಜೊತೆಗೆ ತನ್ನ ಸೇವಾವಧಿ, ಶಿಕ್ಷಣ ಇನ್ನಿತರ ದಾಖಲಾತಿಗಳನ್ನು ನೀಡಿದ್ದ.
ಆಯ್ಕೆ ಪ್ರಕ್ರಿಯೆ ವೇಳೆ ಆತ ನೀಡಿದ್ದ ದಾಖಲಾತಿಗಳನ್ನು ಆಯಾ ವಿಭಾಗಕ್ಕೆ ಪರಿಶೀಲನೆಗಾಗಿ ಕಳಿಸಿಕೊಡಲಾಗಿತ್ತು. ಈ ವೇಳೆ, ವಸಂತ ಕುಮಾರ್ ತಾನು ಸಿಆರ್ ಪಿಎಫ್ ಪಡೆಯಲ್ಲಿ ಸೇವೆ ಸಲ್ಲಿಸಿದ್ದಾಗಿನ ಅವಧಿಯ ನಿರ್ವಹಣಾ ಪತ್ರದಲ್ಲಿ ಪೋರ್ಜರಿ ಮಾಡಿದ್ದು ಕಂಡುಬಂದಿದೆ. ಸೇವಾವಧಿಯಲ್ಲಿ ಕುಡಿತದ ಚಟ ಹೊಂದಿದ್ದರಿಂದ ಬ್ಯಾಡ್ ಎಂದು ನಮೂದಿಸಿದ್ದನ್ನು ತಿದ್ದಿ ಗುಡ್ ಎಂದು ಮಾಡಿಕೊಂಡಿದ್ದ.
ಸರಕಾರಿ ದಾಖಲೆಯನ್ನು ತಿದ್ದಿ ಪೋರ್ಜರಿ ಮಾಡಿದ್ದಲ್ಲದೆ, ಸರಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಮೋಸ ಎಸಗಿದ ವಿಚಾರದಲ್ಲಿ ಕೆಎಸ್ಆರ್ ಪಿ ಕಮಾಂಡೆಂಟ್ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ. ಕೊಣಾಜೆ ಠಾಣೆಯಲ್ಲಿ ಆತನ ಪೋರ್ಜರಿ ದಾಖಲೆ ಬಗ್ಗೆ ಎಫ್ಎಸ್ ಎಲ್ ಮಾಡಲು ನೀಡಲಾಗಿದ್ದು ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
Mangalore Ex Military Man forges conduct certificate to Join KSRP Police department, FIR has been filed against Vasant Kumar native of Chitradura at Konaje Police Station. He had forged the conduct certificate issued by the Military Department. His conduct was issued as bad which he tried to forge as good.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am