ಬ್ರೇಕಿಂಗ್ ನ್ಯೂಸ್
27-01-22 12:30 pm HK Desk news ಕ್ರೈಂ
ನವದೆಹಲಿ, ಜ.27 : ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನವೇ ಮಹಿಳೆಯೊಬ್ಬಳನ್ನು ಅಪಹರಿಸಿ, ಆಕೆಯ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದಲ್ಲದೆ ಹಲ್ಲೆಗೈದು ವಿಕೃತವಾಗಿ ನಡೆದುಕೊಂಡ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಮಹಿಳೆಯ ಬಗ್ಗೆ ವೈಯಕ್ತಿಕ ದ್ವೇಷದಿಂದ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಮಹಿಳೆಯನ್ನು ಅಪಹರಿಸಿದ ತಂಡ, ಗ್ಯಾಂಗ್ ರೇಪ್ ನಡೆಸಿದ್ದಲ್ಲದೆ, ಆಕೆಯ ತಲೆಗೂದಲನ್ನು ಕತ್ತರಿಸಿ ಕುತ್ತಿಗೆಗೆ ಚಪ್ಪಲಿಯ ಹಾರ ತೊಡಿಸಿ ರಸ್ತೆಯಲ್ಲಿ ನಡೆದು ಹೋಗುವಂತೆ ಮಾಡಿದ್ದಾರೆ. ದೆಹಲಿಯ ಶಾರದಾ ಜಿಲ್ಲೆಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಘಟನೆ ನಡೆದಿದೆ.
ಮಹಿಳೆಗೆ ಮದುವೆಯಾಗಿದ್ದು, ಒಂದು ಮಗುವನ್ನು ಹೊಂದಿದ್ದಾಳೆ. ಆದರೆ ಆಕೆಯನ್ನು ಚುಡಾಯಿಸುತ್ತಾ ಬೆನ್ನು ಬಿದ್ದಿದ್ದ ಸ್ಥಳೀಯ ಯುವಕನೊಬ್ಬ ಕಳೆದ ನವೆಂಬರ್ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಆತನ ಸಾವಿಗೆ ಯುವತಿ ಮತ್ತು ಆಕೆಯ ಮನೆಯವರೇ ಕಾರಣ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದರು. ಇದೀಗ ಅದೇ ಮಹಿಳೆಯನ್ನು ಅಪಹರಿಸಿರುವ ಅಲ್ಲಿಯದ್ದೇ ಯುವಕರ ತಂಡ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯ ಮಾನ ಹರಾಜು ಹಾಕುವ ದೃಷ್ಟಿಯಿಂದ ಕೂದಲನ್ನು ಕತ್ತರಿಸಿ, ಚಪ್ಪಲಿ ಹಾರ ಹಾಕಿ ಮನೆಗೆ ತೆರಳುವಂತೆ ಕಳಿಸಿಕೊಟ್ಟಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ದುರದೃಷ್ಟಕರ ಘಟನೆ ನಡೆದಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಸಂತ್ರಸ್ತ ಮಹಿಳೆಯನ್ನು ಕೌನ್ಸಿಲಿಂಗ್ ಒಳಪಡಿಸುತ್ತೇವೆ. ಆಕೆಯ ದೂರಿನಂತೆ ಗ್ಯಾಂಗ್ ರೇಪ್, ಹಲ್ಲೆ ಕೃತ್ಯದ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
The Delhi Police has arrested four accused after a woman was allegedly kidnapped, gang-raped and assaulted in the Vivek Vihar area of the national capital on Republic Day. The incident is suspected to be the result of the woman's personal enmity with the accused, police said. The woman's hair was chopped, she was garlanded with shoes and made to walk the streets by the accused as the locals cheered on.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm