ಬ್ರೇಕಿಂಗ್ ನ್ಯೂಸ್
29-01-22 03:42 pm HK Desk news ಕ್ರೈಂ
ಮಂಡ್ಯ, ಜ 29: ಗಂಡನೇ ಪತ್ನಿಯ ಕತ್ತು ಕೊಯ್ದು ನಂತರ ತಲೆಯ ಮೇಲೆ ಕಲ್ಲು ಎತ್ತು ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಜರುಗಿದೆ.
ರಾಗಿಮುದ್ದನಹಳ್ಳಿಯ ಶಾಲಿನಿ (32) ಕೊಲೆಯಾಗಿರುವ ಪತ್ನಿಯಾಗಿದ್ದು, ಸುರೇಶ್ (40) ಕೊಲೆ ಮಾಡಿದ ಪತಿಯಾಗಿದ್ದಾನೆ. ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಲಿನಿ ಹಾಗೂ ಸುರೇಶ್ ಒಂದೇ ಗ್ರಾಮದವರಾಗಿದ್ದು, ಶಾಲಿನಿ ಕಾಲೇಜಿಗೆ ಹೋಗುವ ವೇಳೆ ಆಕೆಯನ್ನು ಪ್ರೀತಿಸಿ ಸುರೇಶ್ ಮದುವೆಯಾಗಿದ್ದ. ಕೆಲವು ವರ್ಷ ಅನ್ಯೋನ್ಯವಾಗಿದ್ದ ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಆದರೆ ಕೆಲ ವರ್ಷಗಳ ನಂತರ ಸುರೇಶ್ ತನ್ನ ಕ್ರೌರ್ಯ ಬುದ್ಧಿಯನ್ನು ಪ್ರದರ್ಶಿಸಿ ಶಾಲಿನಿಗೆ ಹಿಂಸೆ ಮಾಡುತ್ತಿದ್ದ. ಸುರೇಶ್ ಕುಡಿದು ಬಂದು ಶಾಲಿನಿಗೆ ಹೊಡೆಯುವುದು ಮನೆಯಲ್ಲಿ ಪ್ರತಿ ದಿನ ಗಲಾಟೆ ಮಾಡುತ್ತಿದ್ದ. ಇವರಿಗೆ ಎರಡನೇ ಮಗು ಹುಟ್ಟಿದ್ದಾಗ, ಹೆಣ್ಣು ಮಗು ಎಂಬ ಕಾರಣಕ್ಕೆ ಶಾಲಿನಿಗೆ ಸುರೇಶ್ ಮತ್ತಷ್ಟು ಹಿಂಸೆ ಕೊಡುತ್ತಿದ್ದನು. ಜೊತೆಗೆ ಸೀಮೆಎಣ್ಣೆ ಸುರಿದು ಕೊಲೆ ಮಾಡಲು ಮೂರು ಬಾರಿ ಕೊಲೆ ಮಾಡಲು ಪ್ರಯತ್ನ ಮಾಡಿದ್ದನು.

ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿ ಸುರೇಶ್ನನ್ನು ಶಾಲಿನಿ ಜೈಲಿಗೆ ಕಳಿಸಿದ್ದಳು. ಜೈಲಿನಿಂದ ಬಂದ ಬಳಿಕ ಮತ್ತೆ ಶಾಲಿನಿಗೆ ಸುರೇಶ್ ಹಿಂಸೆ ಕೊಡಲು ಪ್ರಾರಂಭಿಸಿದ್ದ. ಈ ಹಿನ್ನೆಲೆಯಲ್ಲಿ 4 ವರ್ಷದ ಹಿಂದೆ ಈ ದಂಪತಿ ವಿಚ್ಛೇದನ ಪಡೆದಿದ್ದರು. ನಂತರ ಶಾಲಿನಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಂದೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದಳು. ಈ ಹಿನ್ನೆಲೆಯಲ್ಲಿ ತನ್ನನ್ನು ಬಿಟ್ಟು ಜೀವನ ಸಾಗಿಸುತ್ತಿದ್ದಾಳೆ ಎಂದು ಸುರೇಶ್ ಖಿನ್ನತೆ ಒಳಗಾಗಿದ್ದಾನೆ.
ನಿನ್ನೆ ಶಾಲಿನಿ ಗಾಮೆರ್ಂಟ್ನಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಆಕೆಯನ್ನು ಎಳೆದುಕೊಂಡು ಹೋಗಿ ಮೊದಲಿಗೆ ಕತ್ತು ಕೊಯ್ದು ನಂತರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಸುರೇಶ್ ಇದೀಗ ಪರಾರಿಯಾಗಿದ್ದು, ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿಯನ್ನು ಕಳೆದುಕೊಂಡ ಇಬ್ಬರು ಹೆಣ್ಣು ಮಕ್ಕಳು ಕಣ್ಣೀರಿಡುತ್ತಿದ್ದಾರೆ.
Mandya Wife killed by throwing stone on her head by Alcoholic husband. It was a love marriage.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm