ಬ್ರೇಕಿಂಗ್ ನ್ಯೂಸ್
29-01-22 03:42 pm HK Desk news ಕ್ರೈಂ
ಮಂಡ್ಯ, ಜ 29: ಗಂಡನೇ ಪತ್ನಿಯ ಕತ್ತು ಕೊಯ್ದು ನಂತರ ತಲೆಯ ಮೇಲೆ ಕಲ್ಲು ಎತ್ತು ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಜರುಗಿದೆ.
ರಾಗಿಮುದ್ದನಹಳ್ಳಿಯ ಶಾಲಿನಿ (32) ಕೊಲೆಯಾಗಿರುವ ಪತ್ನಿಯಾಗಿದ್ದು, ಸುರೇಶ್ (40) ಕೊಲೆ ಮಾಡಿದ ಪತಿಯಾಗಿದ್ದಾನೆ. ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಲಿನಿ ಹಾಗೂ ಸುರೇಶ್ ಒಂದೇ ಗ್ರಾಮದವರಾಗಿದ್ದು, ಶಾಲಿನಿ ಕಾಲೇಜಿಗೆ ಹೋಗುವ ವೇಳೆ ಆಕೆಯನ್ನು ಪ್ರೀತಿಸಿ ಸುರೇಶ್ ಮದುವೆಯಾಗಿದ್ದ. ಕೆಲವು ವರ್ಷ ಅನ್ಯೋನ್ಯವಾಗಿದ್ದ ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಆದರೆ ಕೆಲ ವರ್ಷಗಳ ನಂತರ ಸುರೇಶ್ ತನ್ನ ಕ್ರೌರ್ಯ ಬುದ್ಧಿಯನ್ನು ಪ್ರದರ್ಶಿಸಿ ಶಾಲಿನಿಗೆ ಹಿಂಸೆ ಮಾಡುತ್ತಿದ್ದ. ಸುರೇಶ್ ಕುಡಿದು ಬಂದು ಶಾಲಿನಿಗೆ ಹೊಡೆಯುವುದು ಮನೆಯಲ್ಲಿ ಪ್ರತಿ ದಿನ ಗಲಾಟೆ ಮಾಡುತ್ತಿದ್ದ. ಇವರಿಗೆ ಎರಡನೇ ಮಗು ಹುಟ್ಟಿದ್ದಾಗ, ಹೆಣ್ಣು ಮಗು ಎಂಬ ಕಾರಣಕ್ಕೆ ಶಾಲಿನಿಗೆ ಸುರೇಶ್ ಮತ್ತಷ್ಟು ಹಿಂಸೆ ಕೊಡುತ್ತಿದ್ದನು. ಜೊತೆಗೆ ಸೀಮೆಎಣ್ಣೆ ಸುರಿದು ಕೊಲೆ ಮಾಡಲು ಮೂರು ಬಾರಿ ಕೊಲೆ ಮಾಡಲು ಪ್ರಯತ್ನ ಮಾಡಿದ್ದನು.

ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿ ಸುರೇಶ್ನನ್ನು ಶಾಲಿನಿ ಜೈಲಿಗೆ ಕಳಿಸಿದ್ದಳು. ಜೈಲಿನಿಂದ ಬಂದ ಬಳಿಕ ಮತ್ತೆ ಶಾಲಿನಿಗೆ ಸುರೇಶ್ ಹಿಂಸೆ ಕೊಡಲು ಪ್ರಾರಂಭಿಸಿದ್ದ. ಈ ಹಿನ್ನೆಲೆಯಲ್ಲಿ 4 ವರ್ಷದ ಹಿಂದೆ ಈ ದಂಪತಿ ವಿಚ್ಛೇದನ ಪಡೆದಿದ್ದರು. ನಂತರ ಶಾಲಿನಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಂದೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದಳು. ಈ ಹಿನ್ನೆಲೆಯಲ್ಲಿ ತನ್ನನ್ನು ಬಿಟ್ಟು ಜೀವನ ಸಾಗಿಸುತ್ತಿದ್ದಾಳೆ ಎಂದು ಸುರೇಶ್ ಖಿನ್ನತೆ ಒಳಗಾಗಿದ್ದಾನೆ.
ನಿನ್ನೆ ಶಾಲಿನಿ ಗಾಮೆರ್ಂಟ್ನಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಆಕೆಯನ್ನು ಎಳೆದುಕೊಂಡು ಹೋಗಿ ಮೊದಲಿಗೆ ಕತ್ತು ಕೊಯ್ದು ನಂತರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಸುರೇಶ್ ಇದೀಗ ಪರಾರಿಯಾಗಿದ್ದು, ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿಯನ್ನು ಕಳೆದುಕೊಂಡ ಇಬ್ಬರು ಹೆಣ್ಣು ಮಕ್ಕಳು ಕಣ್ಣೀರಿಡುತ್ತಿದ್ದಾರೆ.
Mandya Wife killed by throwing stone on her head by Alcoholic husband. It was a love marriage.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:37 pm
Mangalore Correspondent
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm