ಬ್ರೇಕಿಂಗ್ ನ್ಯೂಸ್
30-01-22 05:38 pm HK Desk news ಕ್ರೈಂ
ಚಿಕ್ಕಮಗಳೂರು, ಜ.30 : ಅಪ್ರಾಪ್ತ ಹುಡುಗನೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತ ಹುಡುಗಿಯನ್ನು ಸಿಟ್ಟಿನ ಭರದಲ್ಲಿ ಹೊಡೆದು ಕೊಂದು ಬಿಟ್ಟಿದ್ದಲ್ಲದೆ, ಆಬಳಿಕ ಆಘಾತಕ್ಕೊಳಗಾಗಿ ಆಕೆಯ ಶವದ ಜೊತೆಗೇ ರಾತ್ರಿ ಕಳೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಡಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಒಂದೇ ಗ್ರಾಮದವರಾದ ಹುಡುಗ ಮತ್ತು ಹುಡುಗಿ ಕಳೆದ ಒಂದು ವರ್ಷದಿಂದ ಪ್ರೀತಿಸುತ್ತಿದ್ದು, ಈ ವಿಚಾರ ಎರಡು ಮನೆಯವರಿಗೂ ತಿಳಿದಿತ್ತು. ಪ್ರಾಪ್ತ ವಯಸ್ಸಿಗೆ ಬಂದ ಮೇಲೆ ಮದುವೆ ಮಾಡಿಸುವ ಭರವಸೆಯನ್ನೂ ನೀಡಿದ್ದರು. ಆದರೆ, ಶುಕ್ರವಾರ ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಇದೆಯೆಂದು ಹೇಳಿ ತನ್ನ ಹುಡುಗಿಯನ್ನು ಜೊತೆಗೆ ಕರೆದೊಯ್ದಿದ್ದ.
ಅಲ್ಲಿಂದ ಹಿಂತಿರುಗುವ ಸಂದರ್ಭದಲ್ಲಿ ನಿರ್ಜನ ಪ್ರದೇಶದಲ್ಲಿ ಬೈಕ್ ನಿಲ್ಲಿಸಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ, ಯುವತಿ ಮದುವೆಗೂ ಮುನ್ನ ಈ ರೀತಿಯ ಸಂಬಂಧ ಬೇಡವೆಂದು ನಿರಾಕರಿಸಿದ್ದಾಳೆ. ಈ ವೇಳೆ ಯುವಕ ಬಲವಂತದಿಂದ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗುತ್ತಿದೆ. ಇದರಿಂದ ಸಿಟ್ಟಿಗೆದ್ದ ಯುವತಿ, ಈ ಬಗ್ಗೆ ಮನೆಯವರಿಗೆ ತಿಳಿಸುವುದಾಗಿ ಗದರಿಸಿದ್ದಾಳೆ. ಇದೇ ವಿಚಾರದಲ್ಲಿ ಇಬ್ಬರ ಮಧ್ಯೆ ಜಗಳ ನಡೆದಿದ್ದು ಯುವಕ, ಯುವತಿಯ ಮೇಲೆ ಹಲ್ಲೆ ನಡೆಸಿದ್ದಾನೆ.
ಈ ವೇಳೆ, ಹೊಡೆದ ಏಟಿನಿಂದಾಗಿ ಯುವತಿ ಪ್ರಜ್ಞೆ ತಪ್ಪಿ ಬಿದ್ದಿದ್ದು ಮತ್ತೆ ಏಳಲೇ ಇಲ್ಲ. ಇದರಿಂದ ದಿಗ್ಭ್ರಾಂತನಾದ ಯುವಕ ರಾತ್ರಿ ಏನೂ ಮಾಡಲಾಗದೇ ಅಲ್ಲಿಯೇ ಉಳಿದಿದ್ದಾನೆ. ಯುವತಿ ಬಿದ್ದ ಜಾಗದಲ್ಲೇ ಹೆಣವಾಗಿದ್ದಾಳೆ. ರಾತ್ರಿಯಿಡೀ ಕಾಡಿನ ಮಧ್ಯೆ ಶವದ ಜೊತೆಗೇ ಯುವಕ ಕಾಲ ಕಳೆದಿದ್ದು, ಬೆಳಗ್ಗೆ ಬಿಸಿಲೇರಿದಾಗ ಜನರು ನೋಡಿ ಗಾಬರಿಗೊಂಡಿದ್ದಾರೆ. ವಿಷಯ ಕೇಳಿದಾಗ, ಆಗಿರುವ ಪ್ರಮಾದವನ್ನು ಯುವಕ ಹೇಳಿಕೊಂಡಿದ್ದಾನೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Chikmagalur Minor youth kills lover girlfriend, spends whole night with the dead body. It is said that he took the girl to a isolated place and tried to rape her for which the girl objected. Angered by her behavior he killed her. The youth has been arrested by the Police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm