ಬ್ರೇಕಿಂಗ್ ನ್ಯೂಸ್
30-01-22 05:38 pm HK Desk news ಕ್ರೈಂ
ಚಿಕ್ಕಮಗಳೂರು, ಜ.30 : ಅಪ್ರಾಪ್ತ ಹುಡುಗನೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತ ಹುಡುಗಿಯನ್ನು ಸಿಟ್ಟಿನ ಭರದಲ್ಲಿ ಹೊಡೆದು ಕೊಂದು ಬಿಟ್ಟಿದ್ದಲ್ಲದೆ, ಆಬಳಿಕ ಆಘಾತಕ್ಕೊಳಗಾಗಿ ಆಕೆಯ ಶವದ ಜೊತೆಗೇ ರಾತ್ರಿ ಕಳೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಡಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಒಂದೇ ಗ್ರಾಮದವರಾದ ಹುಡುಗ ಮತ್ತು ಹುಡುಗಿ ಕಳೆದ ಒಂದು ವರ್ಷದಿಂದ ಪ್ರೀತಿಸುತ್ತಿದ್ದು, ಈ ವಿಚಾರ ಎರಡು ಮನೆಯವರಿಗೂ ತಿಳಿದಿತ್ತು. ಪ್ರಾಪ್ತ ವಯಸ್ಸಿಗೆ ಬಂದ ಮೇಲೆ ಮದುವೆ ಮಾಡಿಸುವ ಭರವಸೆಯನ್ನೂ ನೀಡಿದ್ದರು. ಆದರೆ, ಶುಕ್ರವಾರ ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಇದೆಯೆಂದು ಹೇಳಿ ತನ್ನ ಹುಡುಗಿಯನ್ನು ಜೊತೆಗೆ ಕರೆದೊಯ್ದಿದ್ದ.
ಅಲ್ಲಿಂದ ಹಿಂತಿರುಗುವ ಸಂದರ್ಭದಲ್ಲಿ ನಿರ್ಜನ ಪ್ರದೇಶದಲ್ಲಿ ಬೈಕ್ ನಿಲ್ಲಿಸಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ, ಯುವತಿ ಮದುವೆಗೂ ಮುನ್ನ ಈ ರೀತಿಯ ಸಂಬಂಧ ಬೇಡವೆಂದು ನಿರಾಕರಿಸಿದ್ದಾಳೆ. ಈ ವೇಳೆ ಯುವಕ ಬಲವಂತದಿಂದ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗುತ್ತಿದೆ. ಇದರಿಂದ ಸಿಟ್ಟಿಗೆದ್ದ ಯುವತಿ, ಈ ಬಗ್ಗೆ ಮನೆಯವರಿಗೆ ತಿಳಿಸುವುದಾಗಿ ಗದರಿಸಿದ್ದಾಳೆ. ಇದೇ ವಿಚಾರದಲ್ಲಿ ಇಬ್ಬರ ಮಧ್ಯೆ ಜಗಳ ನಡೆದಿದ್ದು ಯುವಕ, ಯುವತಿಯ ಮೇಲೆ ಹಲ್ಲೆ ನಡೆಸಿದ್ದಾನೆ.
ಈ ವೇಳೆ, ಹೊಡೆದ ಏಟಿನಿಂದಾಗಿ ಯುವತಿ ಪ್ರಜ್ಞೆ ತಪ್ಪಿ ಬಿದ್ದಿದ್ದು ಮತ್ತೆ ಏಳಲೇ ಇಲ್ಲ. ಇದರಿಂದ ದಿಗ್ಭ್ರಾಂತನಾದ ಯುವಕ ರಾತ್ರಿ ಏನೂ ಮಾಡಲಾಗದೇ ಅಲ್ಲಿಯೇ ಉಳಿದಿದ್ದಾನೆ. ಯುವತಿ ಬಿದ್ದ ಜಾಗದಲ್ಲೇ ಹೆಣವಾಗಿದ್ದಾಳೆ. ರಾತ್ರಿಯಿಡೀ ಕಾಡಿನ ಮಧ್ಯೆ ಶವದ ಜೊತೆಗೇ ಯುವಕ ಕಾಲ ಕಳೆದಿದ್ದು, ಬೆಳಗ್ಗೆ ಬಿಸಿಲೇರಿದಾಗ ಜನರು ನೋಡಿ ಗಾಬರಿಗೊಂಡಿದ್ದಾರೆ. ವಿಷಯ ಕೇಳಿದಾಗ, ಆಗಿರುವ ಪ್ರಮಾದವನ್ನು ಯುವಕ ಹೇಳಿಕೊಂಡಿದ್ದಾನೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Chikmagalur Minor youth kills lover girlfriend, spends whole night with the dead body. It is said that he took the girl to a isolated place and tried to rape her for which the girl objected. Angered by her behavior he killed her. The youth has been arrested by the Police.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm