ಬ್ರೇಕಿಂಗ್ ನ್ಯೂಸ್
31-01-22 10:30 pm HK Desk news ಕ್ರೈಂ
ಕರಾಚಿ, ಜ.31 : ಮೊಬೈಲಿನಲ್ಲಿ ಪಬ್ ಜಿ ವಿಡಿಯೋ ಗೇಮ್ ಹುಚ್ಚಾಟಕ್ಕೆ ಬಿದ್ದ 14 ವರ್ಷದ ಹುಡುಗನೊಬ್ಬ ತಾಯಿ, ಇಬ್ಬರು ಸೋದರಿಯರು ಸೇರಿ ಒಂದೇ ಕುಟುಂಬದ ನಾಲ್ವರನ್ನು ಗುಂಡಿಟ್ಟು ಕೊಂದು ಹಾಕಿದ ಘಟನೆ ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
ತಾಯಿ ನಹೀದ್ ಮುಬಾರಕ್ (45), ಆಕೆಯ ಮಗ 22 ವರ್ಷದ ತೈಮೂರ್, ಇನ್ನಿಬ್ಬರು 17 ಮತ್ತು 11 ವರ್ಷದ ಇಬ್ಬರು ಹೆಣ್ಮಕ್ಕಳು ದಾರುಣ ಸಾವಿಗೀಡಾದವರು. ಇವರನ್ನು ಕೊಂದು ಹಾಕಿದ 14 ವರ್ಷದ ಹುಡುಗ ಮಾತ್ರ ಈ ಕುಟುಂಬದಲ್ಲಿ ಉಳಿದಿರುವ ಏಕೈಕ ವ್ಯಕ್ತಿ. ಉಳಿದೆಲ್ಲರೂ ಒಂದೇ ಕುಟುಂಬದ ಕುಡಿಗಳು ಒಡಹುಟ್ಟಿದವನ ಗುಂಡಿನಿಂದಲೇ ಸಾವಿಗೀಡಾಗಿದ್ದಾರೆ.

Unknown Battle ground ಎನ್ನುವ ಹೆಸರಿನ ಪಬ್ ಜಿ ವಿಡಿಯೋ ಗೇಮನ್ನು ಹೆಚ್ಚು ಕಾಲ ಆಡುತ್ತಿದ್ದ ಹುಡುಗ ಅದರಿಂದ ಮಾನಸಿಕವಾಗಿ ಸಮಸ್ಯೆಗೀಡಾಗಿದ್ದ. ಅದೇ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಏರ್ಪಟ್ಟು ಹುಡುಗ ಗುಂಡು ಹಾರಿಸಿದ್ದಾನೆ ಎನ್ನಲಾಗುತ್ತಿದೆ. ತಾಯಿ ನಹೀದ್ ಮುಬಾರಕ್ ಗಂಡನಿಂದ ಬೇರ್ಪಟ್ಟಿದ್ದು ಮಕ್ಕಳೊಂದಿಗೆ ವಾಸವಿದ್ದಳು. ಆರೋಗ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡಿ ಮಕ್ಕಳನ್ನು ಸಾಕುತ್ತಿದ್ದಳು.

ಆದರೆ 14 ವರ್ಷದ ಹುಡುಗ ಮೊಬೈಲ್ ವಿಡಿಯೋ ಗೇಮ್ ನಲ್ಲಿ ಆಡುತ್ತಾ ಕಲಿಯುವುದರಲ್ಲಿ ಹಿಂದೆ ಬಿದ್ದಿದ್ದ. ಇದೇ ವಿಚಾರದಲ್ಲಿ ಹುಡುಗನಿಗೆ ತಾಯಿ ಬೈದಿದ್ದು, ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದಳು. ಇದರಿಂದ ಸಿಟ್ಟಿಗೆದ್ದ ಹುಡುಗ ಕಪಾಟಿನಲ್ಲಿದ್ದ ಪಿಸ್ತೂಲ್ ತೆಗೆದು ತಾಯಿ ಮತ್ತು ಮನೆಯಲ್ಲಿದ್ದ ತನ್ನ ಒಡ ಹುಟ್ಟಿದವರ ಮೇಲೆ ಗುಂಡು ಹಾರಿಸಿದ್ದಾನೆ. ಅವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
A 14-year-old boy allegedly shot dead his entire family, including mother and two minor sisters, allegedly "under the influence" of online game PUBG, police in the capital of Pakistan's Punjab province said.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm