ಬ್ರೇಕಿಂಗ್ ನ್ಯೂಸ್
31-01-22 10:30 pm HK Desk news ಕ್ರೈಂ
ಕರಾಚಿ, ಜ.31 : ಮೊಬೈಲಿನಲ್ಲಿ ಪಬ್ ಜಿ ವಿಡಿಯೋ ಗೇಮ್ ಹುಚ್ಚಾಟಕ್ಕೆ ಬಿದ್ದ 14 ವರ್ಷದ ಹುಡುಗನೊಬ್ಬ ತಾಯಿ, ಇಬ್ಬರು ಸೋದರಿಯರು ಸೇರಿ ಒಂದೇ ಕುಟುಂಬದ ನಾಲ್ವರನ್ನು ಗುಂಡಿಟ್ಟು ಕೊಂದು ಹಾಕಿದ ಘಟನೆ ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
ತಾಯಿ ನಹೀದ್ ಮುಬಾರಕ್ (45), ಆಕೆಯ ಮಗ 22 ವರ್ಷದ ತೈಮೂರ್, ಇನ್ನಿಬ್ಬರು 17 ಮತ್ತು 11 ವರ್ಷದ ಇಬ್ಬರು ಹೆಣ್ಮಕ್ಕಳು ದಾರುಣ ಸಾವಿಗೀಡಾದವರು. ಇವರನ್ನು ಕೊಂದು ಹಾಕಿದ 14 ವರ್ಷದ ಹುಡುಗ ಮಾತ್ರ ಈ ಕುಟುಂಬದಲ್ಲಿ ಉಳಿದಿರುವ ಏಕೈಕ ವ್ಯಕ್ತಿ. ಉಳಿದೆಲ್ಲರೂ ಒಂದೇ ಕುಟುಂಬದ ಕುಡಿಗಳು ಒಡಹುಟ್ಟಿದವನ ಗುಂಡಿನಿಂದಲೇ ಸಾವಿಗೀಡಾಗಿದ್ದಾರೆ.

Unknown Battle ground ಎನ್ನುವ ಹೆಸರಿನ ಪಬ್ ಜಿ ವಿಡಿಯೋ ಗೇಮನ್ನು ಹೆಚ್ಚು ಕಾಲ ಆಡುತ್ತಿದ್ದ ಹುಡುಗ ಅದರಿಂದ ಮಾನಸಿಕವಾಗಿ ಸಮಸ್ಯೆಗೀಡಾಗಿದ್ದ. ಅದೇ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಏರ್ಪಟ್ಟು ಹುಡುಗ ಗುಂಡು ಹಾರಿಸಿದ್ದಾನೆ ಎನ್ನಲಾಗುತ್ತಿದೆ. ತಾಯಿ ನಹೀದ್ ಮುಬಾರಕ್ ಗಂಡನಿಂದ ಬೇರ್ಪಟ್ಟಿದ್ದು ಮಕ್ಕಳೊಂದಿಗೆ ವಾಸವಿದ್ದಳು. ಆರೋಗ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡಿ ಮಕ್ಕಳನ್ನು ಸಾಕುತ್ತಿದ್ದಳು.

ಆದರೆ 14 ವರ್ಷದ ಹುಡುಗ ಮೊಬೈಲ್ ವಿಡಿಯೋ ಗೇಮ್ ನಲ್ಲಿ ಆಡುತ್ತಾ ಕಲಿಯುವುದರಲ್ಲಿ ಹಿಂದೆ ಬಿದ್ದಿದ್ದ. ಇದೇ ವಿಚಾರದಲ್ಲಿ ಹುಡುಗನಿಗೆ ತಾಯಿ ಬೈದಿದ್ದು, ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದಳು. ಇದರಿಂದ ಸಿಟ್ಟಿಗೆದ್ದ ಹುಡುಗ ಕಪಾಟಿನಲ್ಲಿದ್ದ ಪಿಸ್ತೂಲ್ ತೆಗೆದು ತಾಯಿ ಮತ್ತು ಮನೆಯಲ್ಲಿದ್ದ ತನ್ನ ಒಡ ಹುಟ್ಟಿದವರ ಮೇಲೆ ಗುಂಡು ಹಾರಿಸಿದ್ದಾನೆ. ಅವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
A 14-year-old boy allegedly shot dead his entire family, including mother and two minor sisters, allegedly "under the influence" of online game PUBG, police in the capital of Pakistan's Punjab province said.
28-10-25 03:40 pm
Bangalore Correspondent
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm