ಬ್ರೇಕಿಂಗ್ ನ್ಯೂಸ್
02-02-22 03:13 pm HK Desk news ಕ್ರೈಂ
ಬೆಂಗಳೂರು, ಫೆ.2 : ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯಕ್ಕೆ ಭಾರೀ ಪ್ರಮಾಣದಲ್ಲಿ ಗಾಂಜಾ ಪೂರೈಕೆ ಮಾಡುತ್ತಿದ್ದ ಖದೀಮರ ಜಾಲವನ್ನು ಬೆಂಗಳೂರಿನ ತ್ಯಾಮಗೊಂಡ್ಲು ಪೊಲೀಸರು ಪತ್ತೆ ಮಾಡಿದ್ದಾರೆ.
ಗಾಂಜಾ ಪೂರೈಕೆದಾರನ ಮಾಹಿತಿ ಹಿಡಿದು ಬೆಂಗಳೂರು ಪೊಲೀಸರು ಗಾಂಜಾ ಬೆಳೆಯುವ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಗೆ ತೆರಳಿದ್ದು, ಅಲ್ಲಿನ ನಿವಾಸಿಗಳು ಬೆಳೆಯುತ್ತಿದ್ದ ಅಪಾರ ಪ್ರಮಾಣದ ಗಾಂಜಾ ಗದ್ದೆಯನ್ನು ನೋಡಿ ಶಾಕ್ ಆಗಿದ್ದಾರೆ. ಗೋದಾವರಿ ನದಿ ತೀರದ ಗುಡ್ಡಗಾಡು ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಗಾಂಜಾ ಬೆಳೆಯುತ್ತಿದ್ದು, ಅಲ್ಲಿನ ಜನರು ಅದನ್ನೇ ಮುಖ್ಯ ಕಸುಬಾಗಿಸಿಕೊಂಡಿದ್ದಾರೆ.


ತಮ್ಮ ಹೊಲಗಳಲ್ಲಿ ರಾಜಾರೋಷವಾಗಿ ಗಾಂಜಾವನ್ನು ಬೆಳೆದು ಮನೆ ಅಂಗಳದಲ್ಲಿ ಒಣಗಿಸಿ, ಪಾರ್ಸೆಲ್ ಮಾಡುತ್ತಿದ್ದರು. ನೆಲಮಂಗಲ ಸರ್ಕಲ್ ಇನ್ ಸ್ಪೆಕ್ಟರ್ ರಾಜೀವ ಮತ್ತವರ ತಂಡ ಗೋದಾವರಿ ಜಿಲ್ಲೆಗೆ ತೆರಳಿದ್ದು ಅಲ್ಲಿ ಬೆಳೆಯುತ್ತಿರುವ ಗಾಂಜಾ ಗದ್ದೆಗಳು, ಗಾಂಜಾವನ್ನು ಮೂಟೆ ಕಟ್ಟಿ ದಾಸ್ತಾನು ಮಾಡಿರುವುದು, ಬೆಳೆಯನ್ನು ಕೊಯ್ಲು ಮಾಡಿ ಒಣಗಿಸಿ ದಾಸ್ತಾನು ಕೇಂದ್ರಕ್ಕೆ ಸಾಗಿಸುತ್ತಿರುವ ದೃಶ್ಯವನ್ನು ಸೆರೆಹಿಡಿದಿದ್ದಾರೆ.


ರೈತರು ಬೆಳೆಯುವ ಗಾಂಜಾವನ್ನು ಪ್ಯಾಕೆಟ್ ಮೂಲಕ ಅಲ್ಲಿಂದ ಗುಪ್ತವಾಗಿ ಸರಬರಾಜು ಮಾಡಲಾಗುತ್ತಿದೆ. ತ್ಯಾಮಗೊಂಡ್ಲು ಪೊಲೀಸರು ಗಾಂಜಾ ಕಿಂಗ್ ಪಿನ್ ಎನ್ನಲಾಗಿರುವ ಆಂಧ್ರಪ್ರದೇಶ ಮೂಲದ ರಾಮಪ್ರಸಾದ್ ಮತ್ತು ನೆಲಮಂಗಲ ನಿವಾಸಿ ಉಮೇಶ್ ನನ್ನು ಬಂಧಿಸಿದ್ದಾರೆ. ಇವರ ನಡುವೆ ಕೊಂಡಿಯಾಗಿದ್ದ ಸೈಯದ್ ಎಂಬ ಆರೋಪಿ ಪೊಲೀಸರ ಕಾರ್ಯಾಚರಣೆ ತಿಳಿದು ಎಸ್ಕೇಪ್ ಆಗಿದ್ದಾನೆ. ಆರೋಪಿಗಳು ಕಾರಿನಲ್ಲಿ ಸಾಗಿಸುತ್ತಿದ್ದ 53 ಕೇಜಿ ಗಾಂಜಾ, ಎರಡು ಮೊಬೈಲ್, ಮಾರುತಿ 800 ಕಾರು ಜಪ್ತಿ ಮಾಡಿದ್ದಾರೆ.


ಆರೋಪಿಗಳು ಗೋದಾವರಿ ಜಿಲ್ಲೆಯಿಂದ ರಹಸ್ಯವಾಗಿ ಗಾಂಜಾವನ್ನು ತಂದು ಬೆಂಗಳೂರು ಹೊರವಲಯದಲ್ಲಿ ವಹಿವಾಟು ನಡೆಸುತ್ತಿದ್ದರು. ಚಿಕ್ಕಬಳ್ಳಾಪುರ ಸೇರಿ ಹೊರ ಜಿಲ್ಲೆಗಳಿಗೂ ಗಾಂಜಾ ಪೂರೈಕೆ ಮಾಡುತ್ತಿದ್ದರು. ಇಲ್ಲಿಂದಲೇ ಪೆಡ್ಲರ್ ಗಳು ಗಾಂಜಾವನ್ನು ಪಡೆದು ವಿವಿಧ ಕಡೆಗಳಿಗೆ ಪೂರೈಸುತ್ತಿದ್ದರು. ಗೋದಾವರಿ ಜಿಲ್ಲೆಯಲ್ಲಿ ಪತ್ತೆಯಾಗಿರುವ ಗಾಂಜಾ ಬೆಳೆಯ ಬಗ್ಗೆ ಅಲ್ಲಿನ ಸ್ಥಳೀಯ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
53 kilo Ganja seized, illegal supply to Mangalore and Bangalore found by Police in Godavari. Peddlers pick Ganja from here and supply it to Mangalore and Bangalore has been revealed by the Police.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm