ಬ್ರೇಕಿಂಗ್ ನ್ಯೂಸ್
03-02-22 02:18 pm Mangalore Correspondent ಕ್ರೈಂ
ಉಳ್ಳಾಲ, ಫೆ.3 : ಕೇರಳದಿಂದ ಉಳ್ಳಾಲಕ್ಕೆ ಕಾರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಮಾಂಸ ಮತ್ತು ನಾಲ್ವರು ಆರೋಪಿಗಳನ್ನ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ ಟೋಲ್ ಪ್ಲಾಝಾದಲ್ಲಿ ಬಂಧಿಸಿದ್ದಾರೆ.
ಇಂದು ಮುಂಜಾನೆ ತಲಪಾಡಿ ಟೋಲ್ ಪ್ಲಾಝಾದಲ್ಲಿ ಸಿಸಿಬಿ ಪೊಲೀಸರು ಇಕೋ ಕಾರಲ್ಲಿ ಕೇರಳದಿಂದ ಉಳ್ಳಾಲ ಕೋಡಿಗೆ ಸಾಗಣೆ ಮಾಡುತ್ತಿದ್ದ 160 ಕೆ.ಜಿ ದನದ ಮಾಂಸವನ್ನ ವಶಪಡಿಸಿದ್ದು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಉಳ್ಳಾಲ ಕೋಟೆಪುರ, ಕೋಡಿ ನಿವಾಸಿಗಳಾದ ಶೋಯೆಬ್ ಅಕ್ತರ್(22), ಮಹಮ್ಮದ್ ಮುಝಮ್ಮಿಲ್(25), ಅಮೀನ್ (21) ಮತ್ತು ಚೆಂಬುಗುಡ್ಡೆಯ ಹುಸೇನ್(24) ಬಂಧಿತರಾಗಿದ್ದು ಸಿಸಿಬಿಯವರು ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದಾರೆ.


ಕಾಸರಗೋಡು ಜಿಲ್ಲೆಯ ಬಂದ್ಯೋಡಿನ ಮೊಹಮ್ಮದ್ ಎಂಬವರಿಂದ ದನ ಖರೀದಿಸಿ, ಅವರ ಮನೆಯಲ್ಲೇ ಮಾಂಸ ಮಾಡಿ ಉಳ್ಳಾಲಕ್ಕೆ ತಂದು ಯುಸಿ ಇಬ್ರಾಹಿಂ ಕೋಡಿ ಎಂಬವರ ಕೋಡಿ ಮತ್ತು ಮುಕ್ಕಚ್ಚೇರಿಯಲ್ಲಿರುವ ಬೀಫ್ ಸ್ಟಾಲ್ ನಲ್ಲಿ ಮಾರಾಟ ಮಾಡುತ್ತಿದ್ದರು. ಈಕೋ ಕಾರಿನಲ್ಲಿ ದನದ ಮಾಂಸ, ಮೂರು ತಲೆಗಳು, ದನದ ಚರ್ಮ ಪತ್ತೆಯಾಗಿದೆ.


ಉಳ್ಳಾಲ ಕೋಡಿಯ ಅಪ್ಪ ಮತ್ತು ಮಕ್ಕಳು(ಇಬ್ಬರು ಗಂಡು ಮಕ್ಕಳು) ಉಪ್ಪಿನಂಗಡಿ, ಮೂಡಬಿದ್ರೆ, ಕೇರಳದಿಂದ ನಿತ್ಯವೂ ಅಕ್ರಮವಾಗಿ ಗೋವುಗಳು ಮತ್ತು ದನದ ಮಾಂಸವನ್ನ ಕೋಡಿ ಪ್ರದೇಶಕ್ಕೆ ತರಿಸಿ ಅಕ್ರಮ ಕಸಾಯಿ ಖಾನೆ ನಡೆಸುತ್ತಿದ್ದಾರೆ. ಉಳ್ಳಾಲ ಪೊಲೀಸರು ಇದನ್ನು ಕಂಡರೂ ಕಾಣದಂತೆ ವರ್ತಿಸುತ್ತಿದ್ದಾರೆಂದು ಕೋಡಿ ಪ್ರದೇಶದ ಸ್ಥಳೀಯರೇ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Mangalore 160 Kilos of beef meat seized at Talapady toll gate by CCB police. The arrested are identified as Shoab Akthar, Muzamil and Ameen.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am