ಬ್ರೇಕಿಂಗ್ ನ್ಯೂಸ್
03-02-22 06:18 pm Mangalore Correspondent ಕ್ರೈಂ
ಮಂಗಳೂರು, ಫೆ.3 : ಕಾಲೇಜಿಗೆ ತೆರಳುವ ಅಪ್ರಾಪ್ತ ಹುಡುಗಿಯರಿಗೆ ನಾನಾ ರೀತಿಯ ಆಮಿಷವೊಡ್ಡಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿರುವ ಮಂಗಳೂರು ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ.
ಅತ್ತಾವರದ ನಂದಿಗುಡ್ಡೆ ಬಳಿಯ ಎಸ್.ಎಮ್.ಆರ್ ಲಿಯಾನಾ ರೆಸಿಡೆನ್ಸಿ ಹೆಸರಿನ ಅಪಾರ್ಟ್ಮೆಂಟಿನಲ್ಲಿ ಶಮೀನಾ ಎಂಬ ಮಹಿಳೆ ಮತ್ತು ಆಕೆಯ ಗಂಡ ಸಿದ್ಧಿಕ್ ಎಂಬವರು ಮನೆಯೊಂದನ್ನು ಬಾಡಿಗೆ ಪಡೆದು ಅಲ್ಲಿ ಕೃತ್ಯ ಎಸಗುತ್ತಿದ್ದರು. ಅಪ್ರಾಪ್ತ ಬಾಲಕಿಯರು ಮತ್ತು ಮಹಿಳೆಯರನ್ನು ಒತ್ತಾಯಪೂರ್ವಕ ಕರೆತಂದು ಹಣ ಇನ್ನಿತರ ಆಮಿಷವೊಡ್ಡಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು. ಆನಂತರ, ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡುತ್ತಾ ಮತ್ತೆ ಮತ್ತೆ ತಮ್ಮ ಕೃತ್ಯಕ್ಕೆ ಸಹಕರಿಸುವಂತೆ ಒತ್ತಡ ಹೇರುತ್ತಿದ್ದರು.
ಈ ಬಗ್ಗೆ 17 ವರ್ಷದ ಅಪ್ರಾಪ್ತ ಯುವತಿ ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿದ್ದು, ಅದರಂತೆ ಪ್ರಕರಣ ದಾಖಲಾಗಿ ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಶಮೀನಾ ಮತ್ತು ಸಿದ್ದಿಕ್ ನಡೆಸುತ್ತಿದ್ದ ದಂಧೆಗೆ ಆಯಿಷಮ್ಮ ಎಂಬ ಮಹಿಳೆ ಸಾಥ್ ನೀಡಿದ್ದು, ಮೂವರನ್ನೂ ಪೊಲೀಸರು ಬಂಧಿಸಿದ್ದಾರೆ. ಇವರಿಗೆ ಇನ್ನೂ ಕೆಲವರು ಸಹಕರಿಸುತ್ತಿದ್ದು, ತಂಡವಾಗಿ ದಂಧೆ ನಡೆಸುತ್ತಿದ್ದರು. ಕಾಲೇಜಿಗೆ ಹೋಗುವ ಯುವತಿಯರನ್ನು ಟಾರ್ಗೆಟ್ ಮಾಡಿ, ಆಮಿಷ ಒಡ್ಡಿ ವೇಶ್ಯಾವಾಟಿಕೆಗೆ ಬಳಸುತ್ತಿರುವುದು ಕಂಡುಬಂದಿದೆ. ಆರೋಪಿಗಳ ಬಳಿಯಿಂದ 5 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದು, ಅದನ್ನು ಆಧರಿಸಿ ಇತರ ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
The Women's Police Station of Pandeshwar has arrested five persons for allegedly forcing minor girls and women into prostitution with false entrappments and blackmail in SMR Liana Apartments near Nandigudda of Attavar in the city. The action was taken based on a complaint by a victim, a 17-year-old girl against two women and a man. As per the complaint, Shameena has rented an apartment in Leona Apartments and has been committing this crime with the help of her husband Siddique.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm