ಬ್ರೇಕಿಂಗ್ ನ್ಯೂಸ್
07-02-22 11:02 pm Mangalore Correspondent ಕ್ರೈಂ
ಮಂಗಳೂರು, ಫೆ.7 : ಮನೆ ಬಳಿಯಲ್ಲೇ ತಗಡು ಶೀಟಿನ ಕೊಠಡಿ ನಿರ್ಮಿಸಿಕೊಂಡು ಗೃಹ ಬಳಕೆಯ ಎಲ್ ಪಿಜಿ ಗ್ಯಾಸ್ ಪಡೆದು ಅದನ್ನು ವಾಣಿಜ್ಯ ಬಳಕೆಯ ಸಿಲಿಂಡರ್ ಗಳಿಗೆ ತುಂಬಿಸಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಮಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ.
ಮಂಗಳೂರು ತಾಲೂಕಿನ ಪೆರ್ಮನ್ನೂರು ಗ್ರಾಮದ ಚೆಂಬುಗುಡ್ಡೆ ಎಂಬಲ್ಲಿನ ನಿವಾಸಿ ಫ್ರಾನ್ಸಿಸ್ ಎಂಬವರು ಮನೆಗೆ ತಾಗಿಕೊಂಡು ತಗಡು ಶೀಟಿನ ಕೊಠಡಿ ನಿರ್ಮಿಸಿಕೊಂಡು ಅದರಲ್ಲಿ ಅಡುಗೆ ಅನಿಲದ ಸಿಲಿಂಡರ್ ಗಳನ್ನು ತುಂಬಿಸಿಡಲಾಗಿತ್ತು. ಕಮರ್ಶಿಯಲ್ ಬಳಕೆಯ ವಿವಿಧ ಗಾತ್ರದ ಸಿಲಿಂಡರ್ ಗಳಿಗೆ ತಾನೇ ರೆಗ್ಯುಲೇಟರ್ ಬಳಸಿ ಗೃಹ ಬಳಕೆಯ ಸಿಲಿಂಡರ್ ಗಳಿಂದ ಗ್ಯಾಸ್ ತುಂಬಿಸುತ್ತಿದ್ದುದನ್ನು ಪತ್ತೆ ಮಾಡಲಾಗಿದೆ.

ಈ ಬಗ್ಗೆ ಖಚಿತ ಮಾಹಿತಿಯಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ನೇತೃತ್ವದಲ್ಲಿ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ರಂಜಿತ್ ಮತ್ತವರ ತಂಡ ಹಾಗೂ ಉಳ್ಳಾಲ ವಲಯದ ಆಹಾರ ನಿರೀಕ್ಷಕರಾದ ಹ್ಯಾರಿಸ್, ಪ್ರಭಾರ ಆಹಾರ ನಿರೀಕ್ಷಕಿ ರೇಖಾ ಮತ್ತು ಸಿಬಂದಿ ಫೆ.5ರಂದು ಸ್ಥಳಕ್ಕೆ ದಾಳಿ ನಡೆಸಿದ್ದರು. ಈ ವೇಳೆ, ಆರೋಪಿ ಫ್ರಾನ್ಸಿಸ್ ಸದ್ರಿ ಕೋಣೆಯಲ್ಲಿ ಖಾಲಿ ಗ್ಯಾಸ್ ಸಿಲಿಂಡರನ್ನು ನೆಲದಲ್ಲಿಟ್ಟು ಅದರ ಮೇಲ್ಗಡೆ ತುಂಬಿದ ಗ್ಯಾಸ್ ಸಿಲಿಂಡರನ್ನು ಕವುಚಿ ಹಾಕಿ ಗ್ಯಾಸ್ ತುಂಬಿಸುತ್ತಿದ್ದ. ಪೊಲೀಸರು ದಾಳಿ ನಡೆಸಿದ್ದನ್ನು ನೋಡಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಸ್ಥಳದಲ್ಲಿ ಎಚ್ ಪಿ, ಇಂಡೇನ್, ಭಾರತ್, ಪ್ಯೂರ್, ಟೋಟಲ್ ಕಂಪನಿಯ ದೊಡ್ಡ ಮತ್ತು ಸಣ್ಣ ಗಾತ್ರದ ವಿವಿಧ ಮಾದರಿಯ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಗ್ಯಾಸ್ ತುಂಬಿದ ಸಿಲಿಂಡರ್ -15, ತುಂಬಿದ ಆಕ್ಸಿಜನ್ ದೊಡ್ಡ ಸಿಲಿಂಡರ್ – 1, ಖಾಲಿ ಗ್ಯಾಸ್ ಸಿಲಿಂಡರ್ – 112 ಹೀಗೆ ಒಟ್ಟು 128 ಸಿಲಿಂಡರ್ ಪತ್ತೆಯಾಗಿದೆ. ಇದರ ಒಟ್ಟು ಮೌಲ್ಯ 1.92 ಲಕ್ಷ ರೂಪಾಯಿ ಆಗಿದೆ. ಸ್ಥಳದಲ್ಲಿ ದೊರೆತ ವಿವಿಧ ಪರಿಕರಗಳನ್ನು ವಶಕ್ಕೆ ಪಡೆದಿದ್ದು, ಆಹಾರ ನಿರೀಕ್ಷಕರು ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ullal police raided the house of one Francis at Chembugudde of Permannur in the taluk on definite information that the accused is transferring liquefied petroleum gas (LPG) from domestic gas cylinders to commercial ones though artificial regulators without any safety. The accused absconded from the spot.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm