ಬ್ರೇಕಿಂಗ್ ನ್ಯೂಸ್
10-02-22 04:05 pm HK Desk news ಕ್ರೈಂ
ಬಂಟ್ವಾಳ, ಫೆ.10 : ವಿದ್ಯುತ್ ಬಿಲ್ ತಪಾಸಣೆ ಹೆಸರಲ್ಲಿ ಮನೆಯಂಗಳಕ್ಕೆ ಬಂದಿದ್ದ ಅದೇ ನೆಪದಲ್ಲಿ ಮನೆ ಒಳಗೆ ಬಂದು ಮಹಿಳೆಯನ್ನು ಥಳಿಸಿ ದರೋಡೆಗೈದ ಘಟನೆ ವಿಟ್ಲ ಪೇಟೆಯ ಅಡ್ಡದ ಬೀದಿಯಲ್ಲಿ ನಡೆದಿದೆ. ಬುಧವಾರ ಸಂಜೆ ವೇಳೆಗೆ ಮನೆಗೆ ಆಗಮಿಸಿದ್ದ ಇಬ್ಬರು ಆಗಂತುಕರು ಬೀಫಾತುಮ್ಮ ಎಂಬ ಮಹಿಳೆಯ ಮೇಲೆ ಹಲ್ಲೆಗೈದು, ಆಕೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ವಿಟ್ಲ ಕಸಬಾ ಗ್ರಾಮದ ನಿವಾಸಿ ಬೀಫಾತುಮ್ಮ (50) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೀಫಾತುಮ್ಮ ಅವರ ಪತಿ ಸುಲೈಮಾನ್, ವಿಟ್ಲದ ಅಡ್ಡದ ಬೀದಿಯ ಸಮೀಪದಲ್ಲೇ ರಸ್ತೆ ಬದಿ ಎಳನೀರು ಮಾರುವ ವ್ಯಾಪಾರ ಮಾಡುತ್ತಿದ್ದು, ಮಧ್ಯಾಹ್ನ ಊಟಕ್ಕೆ ಬಂದು ಆನಂತರ ಹಿಂತಿರುಗಿದ್ದರು. ಕೆಲಹೊತ್ತಿನಲ್ಲಿಯೇ ಬೈಕಿನಲ್ಲಿ ಇಬ್ಬರು ಬಂದಿದ್ದು, ಹೆಲ್ಮೆಟ್ ಹಾಕ್ಕೊಂಡಿದ್ದರು.
ಮಹಿಳೆಯ ಬಳಿ ಕರೆಂಟ್ ಬಿಲ್ ಕಟ್ಟಿಲ್ಲವಾ ಎಂದು ವಿಚಾರಿಸಿದ್ದಾರೆ. ಬಿಲ್ ಇದೆಯೆಂದು ಒಳಗೆ ಹೋದ ಮಹಿಳೆಯನ್ನು ಯುವಕರು ಹಿಂಬಾಲಿಸಿ ಒಳಗೆ ಬಂದಿದ್ದು, ಕೈಯಲ್ಲಿದ್ದ ಚೂರಿಯಿಂದ ಕೈ, ಹೊಟ್ಟೆ, ಕುತ್ತಿಗೆಗೆ ಹಲ್ಲೆ ಮಾಡಿದ್ದಾರೆ. ಆನಂತರ ಮಹಿಳೆ ಧರಿಸಿದ್ದ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಆನಂತರ ಮನೆಯ ಹೊರಗೆ ಬಂದ ಮಹಿಳೆ ಸ್ಥಳೀಯರಿಗೆ ಹೇಳಿದ್ದಾರೆ. ಮಹಿಳೆಯನ್ನು ವಿಟ್ಲ ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿ, ಮಂಗಳೂರಿಗೆ ಒಯ್ಯಲಾಗಿದೆ.
ಮನೆಯ ಕೊಠಡಿಯ ಕಪಾಟು ಒಡೆದ ರೀತಿಯಲ್ಲಿ ಕಂಡುಬಂದಿದ್ದು ಹಣ ಅಥವಾ ಇನ್ನಿತರ ವಸ್ತುಗಳು ಕಳವಾಗಿದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್ ಸೇರಿದಂತೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ. ಮಂಗಳೂರಿನ ಬೆರಳಚ್ಚು ತಜ್ಞರು ತೆರಳಿ, ತಪಾಸಣೆ ನಡೆಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Miscreants flee with good and cash in the name of collecting electricity bill at Vitla.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm