ಬ್ರೇಕಿಂಗ್ ನ್ಯೂಸ್
10-02-22 04:05 pm HK Desk news ಕ್ರೈಂ
ಬಂಟ್ವಾಳ, ಫೆ.10 : ವಿದ್ಯುತ್ ಬಿಲ್ ತಪಾಸಣೆ ಹೆಸರಲ್ಲಿ ಮನೆಯಂಗಳಕ್ಕೆ ಬಂದಿದ್ದ ಅದೇ ನೆಪದಲ್ಲಿ ಮನೆ ಒಳಗೆ ಬಂದು ಮಹಿಳೆಯನ್ನು ಥಳಿಸಿ ದರೋಡೆಗೈದ ಘಟನೆ ವಿಟ್ಲ ಪೇಟೆಯ ಅಡ್ಡದ ಬೀದಿಯಲ್ಲಿ ನಡೆದಿದೆ. ಬುಧವಾರ ಸಂಜೆ ವೇಳೆಗೆ ಮನೆಗೆ ಆಗಮಿಸಿದ್ದ ಇಬ್ಬರು ಆಗಂತುಕರು ಬೀಫಾತುಮ್ಮ ಎಂಬ ಮಹಿಳೆಯ ಮೇಲೆ ಹಲ್ಲೆಗೈದು, ಆಕೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ವಿಟ್ಲ ಕಸಬಾ ಗ್ರಾಮದ ನಿವಾಸಿ ಬೀಫಾತುಮ್ಮ (50) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೀಫಾತುಮ್ಮ ಅವರ ಪತಿ ಸುಲೈಮಾನ್, ವಿಟ್ಲದ ಅಡ್ಡದ ಬೀದಿಯ ಸಮೀಪದಲ್ಲೇ ರಸ್ತೆ ಬದಿ ಎಳನೀರು ಮಾರುವ ವ್ಯಾಪಾರ ಮಾಡುತ್ತಿದ್ದು, ಮಧ್ಯಾಹ್ನ ಊಟಕ್ಕೆ ಬಂದು ಆನಂತರ ಹಿಂತಿರುಗಿದ್ದರು. ಕೆಲಹೊತ್ತಿನಲ್ಲಿಯೇ ಬೈಕಿನಲ್ಲಿ ಇಬ್ಬರು ಬಂದಿದ್ದು, ಹೆಲ್ಮೆಟ್ ಹಾಕ್ಕೊಂಡಿದ್ದರು.
ಮಹಿಳೆಯ ಬಳಿ ಕರೆಂಟ್ ಬಿಲ್ ಕಟ್ಟಿಲ್ಲವಾ ಎಂದು ವಿಚಾರಿಸಿದ್ದಾರೆ. ಬಿಲ್ ಇದೆಯೆಂದು ಒಳಗೆ ಹೋದ ಮಹಿಳೆಯನ್ನು ಯುವಕರು ಹಿಂಬಾಲಿಸಿ ಒಳಗೆ ಬಂದಿದ್ದು, ಕೈಯಲ್ಲಿದ್ದ ಚೂರಿಯಿಂದ ಕೈ, ಹೊಟ್ಟೆ, ಕುತ್ತಿಗೆಗೆ ಹಲ್ಲೆ ಮಾಡಿದ್ದಾರೆ. ಆನಂತರ ಮಹಿಳೆ ಧರಿಸಿದ್ದ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಆನಂತರ ಮನೆಯ ಹೊರಗೆ ಬಂದ ಮಹಿಳೆ ಸ್ಥಳೀಯರಿಗೆ ಹೇಳಿದ್ದಾರೆ. ಮಹಿಳೆಯನ್ನು ವಿಟ್ಲ ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿ, ಮಂಗಳೂರಿಗೆ ಒಯ್ಯಲಾಗಿದೆ.
ಮನೆಯ ಕೊಠಡಿಯ ಕಪಾಟು ಒಡೆದ ರೀತಿಯಲ್ಲಿ ಕಂಡುಬಂದಿದ್ದು ಹಣ ಅಥವಾ ಇನ್ನಿತರ ವಸ್ತುಗಳು ಕಳವಾಗಿದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್ ಸೇರಿದಂತೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ. ಮಂಗಳೂರಿನ ಬೆರಳಚ್ಚು ತಜ್ಞರು ತೆರಳಿ, ತಪಾಸಣೆ ನಡೆಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Miscreants flee with good and cash in the name of collecting electricity bill at Vitla.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm