ಬ್ರೇಕಿಂಗ್ ನ್ಯೂಸ್
18-09-20 04:37 pm Headline Karnataka News Network ಕ್ರೈಂ
ನೈಜೀರಿಯಾ, ಸೆಪ್ಟಂಬರ್ 18: ಅತ್ಯಾಚಾರ ಪ್ರಕರಣ ಕೇಳಿಬಂದಾಗೆಲ್ಲ ಕೆಲವರು ಗೊಣಗುವುದು ಕೇಳಿರಬಹುದು. ಆತನ ‘ಅದನ್ನೇ’ ಕತ್ತರಿಸಬೇಕು ಎಂದು. ಆದರೆ, ಅಂಥ ಕಾನೂನು ಮಾತ್ರ ಎಲ್ಲಿಯೂ ಜಾರಿಯಾಗಿರಲಿಲ್ಲ. ಈಗ ನೈಜೀರಿಯಾ ಅಂಥದ್ದೊಂದು ಕಠಿಣ ಕಾನೂನು ಜಾರಿಗೆ ಮುಂದಾಗಿದೆ.
ಅತ್ಯಾಚಾರ ಪ್ರಕರಣಗಳಲ್ಲಿ ಬೇರೆ ಬೇರೆ ದೇಶಗಳಲ್ಲಿ ಶಿಕ್ಷೆಗಳೂ ಥರಾವರಿ ಇವೆ. ಕೆಲವೊಂದು ದೇಶಗಳಲ್ಲಿ ಗಲ್ಲು ಶಿಕ್ಷೆ, ಜೀವಾವಧಿ, 20 ವರ್ಷ ಜೈಲು ಹೀಗೆ ಶಿಕ್ಷೆಯ ಪ್ರಕಾರ ಇವೆ. ಇಂಥ ಕಠಿಣ ಶಿಕ್ಷೆಗಳಿದ್ದರೂ, ಅತ್ಯಾಚಾರ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ. ಈಗ ನೈಜೀರಿಯಾ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದು, ಪುರುಷನ ಲೈಂಗಿಕ ಶಕ್ತಿಯನ್ನೇ ನಿಶ್ಶಕ್ತಿಗೊಳಿಸುವ ಶಿಕ್ಷೆ ಜಾರಿಗೆ ಮುಂದಾಗಿದೆ.

ನೈಜೀರಿಯಾದಲ್ಲಿ ಕಳೆದ ಲಾಕ್ಡೌನ್ ಸಂದರ್ಭದಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚಿದ್ದರಿಂದ ಹೊಸ ಕಾನೂನು ತರಲಾಗಿದೆ. ನೈಜೀರಿಯಾದ ಕಾಡುನ ಎನ್ನುವ ರಾಜ್ಯದ ಗವರ್ನರ್ ನಾಸಿರ್ ಅಹ್ಮದ್ ಎಲ್ ರಫಾಯಿ, ಅತ್ಯಾಚಾರ ಕಾನೂನಿಗೆ ತಿದ್ದುಪಡಿ ತಂದಿದ್ದು, ಹೊಸ ಕಾಯ್ದೆ ಪ್ರಕಾರ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಪುರುಷನ ವೃಷಣಕ್ಕೆ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಆತನ ಲೈಂಗಿಕ ಶಕ್ತಿಯನ್ನು ತೆಗೆದು ಹಾಕುತ್ತಾರೆ. ಆತನಿಗೆ ಮುಂದೆಂದೂ ಲೈಂಗಿಕ ಆಸಕ್ತಿಯೇ ಬರದಂತೆ ಮಾಡಲಾಗುತ್ತದೆ. ಹಾಗೆಯೇ ಮಹಿಳೆಯರು ಕೂಡ ಇಂಥ ಕೃತ್ಯ ಎಸಗಿದಲ್ಲಿ ಅವರಿಗೂ ಇದೇ ರೀತಿಯ ಶಿಕ್ಷೆ ವಿಧಿಸಲಾಗುವುದು. ಇನ್ನು 14 ವರ್ಷದ ಒಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದಲ್ಲಿ ಗಲ್ಲು ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೊಳಿಸಲಾಗಿದೆ.
ಈ ಹಿಂದೆ ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ನೈಜೀರಿಯಾದಲ್ಲಿ ಜೀವಾವಧಿ ಶಿಕ್ಷೆ ಮತ್ತು ಇತರೇ ಪ್ರಕರಣಗಳಿಗೆ 21 ವರ್ಷದ ಶಿಕ್ಷೆ ಜಾರಿಯಲ್ಲಿತ್ತು.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm