ಬ್ರೇಕಿಂಗ್ ನ್ಯೂಸ್
18-09-20 04:37 pm Headline Karnataka News Network ಕ್ರೈಂ
ನೈಜೀರಿಯಾ, ಸೆಪ್ಟಂಬರ್ 18: ಅತ್ಯಾಚಾರ ಪ್ರಕರಣ ಕೇಳಿಬಂದಾಗೆಲ್ಲ ಕೆಲವರು ಗೊಣಗುವುದು ಕೇಳಿರಬಹುದು. ಆತನ ‘ಅದನ್ನೇ’ ಕತ್ತರಿಸಬೇಕು ಎಂದು. ಆದರೆ, ಅಂಥ ಕಾನೂನು ಮಾತ್ರ ಎಲ್ಲಿಯೂ ಜಾರಿಯಾಗಿರಲಿಲ್ಲ. ಈಗ ನೈಜೀರಿಯಾ ಅಂಥದ್ದೊಂದು ಕಠಿಣ ಕಾನೂನು ಜಾರಿಗೆ ಮುಂದಾಗಿದೆ.
ಅತ್ಯಾಚಾರ ಪ್ರಕರಣಗಳಲ್ಲಿ ಬೇರೆ ಬೇರೆ ದೇಶಗಳಲ್ಲಿ ಶಿಕ್ಷೆಗಳೂ ಥರಾವರಿ ಇವೆ. ಕೆಲವೊಂದು ದೇಶಗಳಲ್ಲಿ ಗಲ್ಲು ಶಿಕ್ಷೆ, ಜೀವಾವಧಿ, 20 ವರ್ಷ ಜೈಲು ಹೀಗೆ ಶಿಕ್ಷೆಯ ಪ್ರಕಾರ ಇವೆ. ಇಂಥ ಕಠಿಣ ಶಿಕ್ಷೆಗಳಿದ್ದರೂ, ಅತ್ಯಾಚಾರ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ. ಈಗ ನೈಜೀರಿಯಾ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದು, ಪುರುಷನ ಲೈಂಗಿಕ ಶಕ್ತಿಯನ್ನೇ ನಿಶ್ಶಕ್ತಿಗೊಳಿಸುವ ಶಿಕ್ಷೆ ಜಾರಿಗೆ ಮುಂದಾಗಿದೆ.

ನೈಜೀರಿಯಾದಲ್ಲಿ ಕಳೆದ ಲಾಕ್ಡೌನ್ ಸಂದರ್ಭದಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚಿದ್ದರಿಂದ ಹೊಸ ಕಾನೂನು ತರಲಾಗಿದೆ. ನೈಜೀರಿಯಾದ ಕಾಡುನ ಎನ್ನುವ ರಾಜ್ಯದ ಗವರ್ನರ್ ನಾಸಿರ್ ಅಹ್ಮದ್ ಎಲ್ ರಫಾಯಿ, ಅತ್ಯಾಚಾರ ಕಾನೂನಿಗೆ ತಿದ್ದುಪಡಿ ತಂದಿದ್ದು, ಹೊಸ ಕಾಯ್ದೆ ಪ್ರಕಾರ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಪುರುಷನ ವೃಷಣಕ್ಕೆ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಆತನ ಲೈಂಗಿಕ ಶಕ್ತಿಯನ್ನು ತೆಗೆದು ಹಾಕುತ್ತಾರೆ. ಆತನಿಗೆ ಮುಂದೆಂದೂ ಲೈಂಗಿಕ ಆಸಕ್ತಿಯೇ ಬರದಂತೆ ಮಾಡಲಾಗುತ್ತದೆ. ಹಾಗೆಯೇ ಮಹಿಳೆಯರು ಕೂಡ ಇಂಥ ಕೃತ್ಯ ಎಸಗಿದಲ್ಲಿ ಅವರಿಗೂ ಇದೇ ರೀತಿಯ ಶಿಕ್ಷೆ ವಿಧಿಸಲಾಗುವುದು. ಇನ್ನು 14 ವರ್ಷದ ಒಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದಲ್ಲಿ ಗಲ್ಲು ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೊಳಿಸಲಾಗಿದೆ.
ಈ ಹಿಂದೆ ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ನೈಜೀರಿಯಾದಲ್ಲಿ ಜೀವಾವಧಿ ಶಿಕ್ಷೆ ಮತ್ತು ಇತರೇ ಪ್ರಕರಣಗಳಿಗೆ 21 ವರ್ಷದ ಶಿಕ್ಷೆ ಜಾರಿಯಲ್ಲಿತ್ತು.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm