ಬ್ರೇಕಿಂಗ್ ನ್ಯೂಸ್
18-09-20 04:37 pm Headline Karnataka News Network ಕ್ರೈಂ
ನೈಜೀರಿಯಾ, ಸೆಪ್ಟಂಬರ್ 18: ಅತ್ಯಾಚಾರ ಪ್ರಕರಣ ಕೇಳಿಬಂದಾಗೆಲ್ಲ ಕೆಲವರು ಗೊಣಗುವುದು ಕೇಳಿರಬಹುದು. ಆತನ ‘ಅದನ್ನೇ’ ಕತ್ತರಿಸಬೇಕು ಎಂದು. ಆದರೆ, ಅಂಥ ಕಾನೂನು ಮಾತ್ರ ಎಲ್ಲಿಯೂ ಜಾರಿಯಾಗಿರಲಿಲ್ಲ. ಈಗ ನೈಜೀರಿಯಾ ಅಂಥದ್ದೊಂದು ಕಠಿಣ ಕಾನೂನು ಜಾರಿಗೆ ಮುಂದಾಗಿದೆ.
ಅತ್ಯಾಚಾರ ಪ್ರಕರಣಗಳಲ್ಲಿ ಬೇರೆ ಬೇರೆ ದೇಶಗಳಲ್ಲಿ ಶಿಕ್ಷೆಗಳೂ ಥರಾವರಿ ಇವೆ. ಕೆಲವೊಂದು ದೇಶಗಳಲ್ಲಿ ಗಲ್ಲು ಶಿಕ್ಷೆ, ಜೀವಾವಧಿ, 20 ವರ್ಷ ಜೈಲು ಹೀಗೆ ಶಿಕ್ಷೆಯ ಪ್ರಕಾರ ಇವೆ. ಇಂಥ ಕಠಿಣ ಶಿಕ್ಷೆಗಳಿದ್ದರೂ, ಅತ್ಯಾಚಾರ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ. ಈಗ ನೈಜೀರಿಯಾ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದು, ಪುರುಷನ ಲೈಂಗಿಕ ಶಕ್ತಿಯನ್ನೇ ನಿಶ್ಶಕ್ತಿಗೊಳಿಸುವ ಶಿಕ್ಷೆ ಜಾರಿಗೆ ಮುಂದಾಗಿದೆ.

ನೈಜೀರಿಯಾದಲ್ಲಿ ಕಳೆದ ಲಾಕ್ಡೌನ್ ಸಂದರ್ಭದಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚಿದ್ದರಿಂದ ಹೊಸ ಕಾನೂನು ತರಲಾಗಿದೆ. ನೈಜೀರಿಯಾದ ಕಾಡುನ ಎನ್ನುವ ರಾಜ್ಯದ ಗವರ್ನರ್ ನಾಸಿರ್ ಅಹ್ಮದ್ ಎಲ್ ರಫಾಯಿ, ಅತ್ಯಾಚಾರ ಕಾನೂನಿಗೆ ತಿದ್ದುಪಡಿ ತಂದಿದ್ದು, ಹೊಸ ಕಾಯ್ದೆ ಪ್ರಕಾರ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಪುರುಷನ ವೃಷಣಕ್ಕೆ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಆತನ ಲೈಂಗಿಕ ಶಕ್ತಿಯನ್ನು ತೆಗೆದು ಹಾಕುತ್ತಾರೆ. ಆತನಿಗೆ ಮುಂದೆಂದೂ ಲೈಂಗಿಕ ಆಸಕ್ತಿಯೇ ಬರದಂತೆ ಮಾಡಲಾಗುತ್ತದೆ. ಹಾಗೆಯೇ ಮಹಿಳೆಯರು ಕೂಡ ಇಂಥ ಕೃತ್ಯ ಎಸಗಿದಲ್ಲಿ ಅವರಿಗೂ ಇದೇ ರೀತಿಯ ಶಿಕ್ಷೆ ವಿಧಿಸಲಾಗುವುದು. ಇನ್ನು 14 ವರ್ಷದ ಒಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದಲ್ಲಿ ಗಲ್ಲು ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೊಳಿಸಲಾಗಿದೆ.
ಈ ಹಿಂದೆ ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ನೈಜೀರಿಯಾದಲ್ಲಿ ಜೀವಾವಧಿ ಶಿಕ್ಷೆ ಮತ್ತು ಇತರೇ ಪ್ರಕರಣಗಳಿಗೆ 21 ವರ್ಷದ ಶಿಕ್ಷೆ ಜಾರಿಯಲ್ಲಿತ್ತು.
30-05-26 01:14 pm
HK News Staffer
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am