ಬ್ರೇಕಿಂಗ್ ನ್ಯೂಸ್
15-02-22 11:01 pm HK Desk news ಕ್ರೈಂ
ಭುವನೇಶ್ವರ, ಫೆ.15 : ಎಷ್ಟೋ ಯುವಕರು ತಮಗೆ ವಯಸ್ಸಾದರೂ ಸೂಕ್ತ ಹೆಣ್ಣು ಸಿಗುತ್ತಿಲ್ಲ. ಮದುವೆಯಾಗಿಲ್ಲ ಎಂಬ ಕೊರಗಿನಲ್ಲಿ ಇರುತ್ತಾರೆ. ಆದರೆ ಇಲ್ಲೊಬ್ಬ ಭೂಪ ಒಂದಲ್ಲ , ಎರಡಲ್ಲ ಬರೋಬ್ಬರಿ 14 ಮದುವೆಯಾಗಿದ್ದು ಭಾರೀ ಸುದ್ದಿಯಾಗಿದ್ದಾಳೆ. ವಿಶೇಷ ಅಂದ್ರೆ, ಏಳು ಬೇರೆ ಬೇರೆ ರಾಜ್ಯಗಳ ಹೆಣ್ಣು ಮಕ್ಕಳನ್ನು ಮದುವೆಯಾಗಿ ಯಾಮಾರಿಸಿದ್ದಾನೆ.
65 ವರ್ಷ ವಯಸ್ಸಿನ ಒಡಿಶಾದ ಕೇಂದ್ರಪಾರ ಜಿಲ್ಲೆಯ ನಿವಾಸಿ ಬಿಧು ಪ್ರಕಾಶ್ ಸ್ವೈನ್ ಎಂಬ ಈ ಭೂಪ ಕಳೆದ 38 ವರ್ಷಗಳಿಂದ ಮದುವೆಯಾಗುವುದನ್ನೇ ಕಾಯಕ ಮಾಡಿಕೊಂಡಿದ್ದಾನೆ. ಏಳು ರಾಜ್ಯಗಳ 14 ಮಹಿಳೆಯರನ್ನು ಮದುವೆಯಾಗಿದ್ದು, ಕೊನೆಗೂ ಬಂಧನಕ್ಕೆ ಒಳಗಾಗಿದ್ದಾನೆ. ವಿಚಿತ್ರ ಎಂದರೆ ಈತನ ಬಲೆಗೆ ಬಿದ್ದವರ ಪೈಕಿ ಹಲವರು ವೈದ್ಯರು, ವಕೀಲರು, ಶಿಕ್ಷಕಿಯರು ಹಾಗೂ ದೊಡ್ಡ ದೊಡ್ಡ ಹುದ್ದೆಯಲ್ಲಿದ್ದವರೇ. ಪ್ಯಾರಾ ಮಿಲಿಟರಿ ಪಡೆಯಲ್ಲಿ ಕೆಲಸ ಮಾಡುವ ಮಹಿಳೆಯನ್ನೂ ಮದುವೆಯಾಗಿದ್ದಾನೆ!
ಮ್ಯಾಟ್ರಿಮೊನಿ ಸೈಟ್ನಲ್ಲಿ ನೋಂದಾಯಿಸಿಕೊಂಡಿದ್ದ ಈ ವ್ಯಕ್ತಿ ತನ್ನನ್ನು ವೈದ್ಯ ಎಂದು ಹೇಳಿಕೊಂಡಿದ್ದ. ಕೇಂದ್ರ ಸರಕಾರದ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದ. ನಂತರ ಅಲ್ಲಿ ಮದುವೆಗಾಗಿ ಜಾಹೀರಾತು ನೀಡುವ ದೊಡ್ಡ ದೊಡ್ಡ ಹುದ್ದೆಯ ಮಹಿಳೆಯರು, ಸಿರಿವಂತರನ್ನು ಟಾರ್ಗೆಟ್ ಮಾಡುತ್ತಿದ್ದ. ನಂತರ ತಾನು ವೈದ್ಯ, ಇಂತಿಷ್ಟು ಆದಾಯ ಎಂದೆಲ್ಲಾ ಸುಳ್ಳು ಹೇಳಿ ನಂಬಿಸುತ್ತಿದ್ದ. ಹಿಂದೆ ಮುಂದೆ ಯೋಚಿಸದ ಮಹಿಳೆಯರು ಈತನ ಬಲೆಗೆ ಬೀಳುತ್ತಿದ್ದರು. ಅವರನ್ನು ಮದುವೆಯಾಗುತ್ತಿದ್ದ ಆಸಾಮಿ, ಅವರಿಂದಲೇ ಚಿನ್ನ, ಹಣ ಕದ್ದು ಬಳಿಕ ಎಸ್ಕೇಪ್ ಆಗುತ್ತಿದ್ದ. ಮರ್ಯಾದೆಗೆ ಅಂಜಿ ಮಹಿಳೆಯರು ದೂರು ಕೊಡುತ್ತಿರಲಿಲ್ಲ.
1982ರಲ್ಲಿ ಮೊದಲ ಮದುವೆಯಾಗಿದ್ದ ಈತ 2002ರಲ್ಲಿ ಎರಡನೇ ಮದುವೆಯಾಗಿದ್ದ. 1982ರಲ್ಲಿ ಮೊದಲ ವಿವಾಹವಾಗಿದ್ದರೆ, 2020 ರಲ್ಲಿ ಕೊನೆಯ ಬಾರಿಗೆ ದೆಹಲಿಯ ಶಿಕ್ಷಕಿಯೊಬ್ಬರನ್ನು ಮದುವೆಯಾಗಿದ್ದ. ಈ ನಡುವೆ ಹಲವು ಕಡೆ ಐವರು ಮಕ್ಕಳನ್ನು ಹೊಂದಿರುವ ಬಗ್ಗೆ ಮಾಹಿತಿಯಿದೆ. ಹೆಚ್ಚಾಗಿ ಮಧ್ಯವಯಸ್ಕ ಒಂಟಿ ಮಹಿಳೆಯರನ್ನೇ ಗುರಿಯಾಗಿಸಿ ಮದುವೆಯಾಗಿಸುತ್ತಿದ್ದ. ಈತನ ಬಲೆಗೆ ಬಿದ್ದವರ ಪೈಕಿ ಹಲವರು ವಿಚ್ಛೇದಿತರು ಎಂದು ಭುವನೇಶ್ವರ ಉಪ ಪೊಲೀಸ್ ಆಯುಕ್ತ ಉಮಾಶಂಕರ್ ದಾಸ್ ಹೇಳಿದ್ದಾರೆ.
ದೆಹಲಿ, ಪಂಜಾಬ್, ಅಸ್ಸಾಂ, ಜಾರ್ಖಂಡ್ ಮತ್ತು ಒಡಿಶಾ ಸೇರಿದಂತೆ ಏಳು ರಾಜ್ಯಗಳಲ್ಲಿ ಮಹಿಳೆಯರನ್ನು ಈ ವ್ಯಕ್ತಿ ವಂಚಿಸಿದ್ದಾನೆ. ಮೊದಲ ಇಬ್ಬರು ಪತ್ನಿಯರು ಒಡಿಶಾದವರಾಗಿದ್ದು ಕೊನೆಯ ಪತ್ನಿ ದೆಹಲಿಯಲ್ಲಿದ್ದು ಶಿಕ್ಷಕಿಯಾಗಿದ್ದಾರೆ. ಶಿಕ್ಷಕಿಗೆ ಮದುವೆಯಾದ ಮೇಲೆ ಅನುಮಾನ ಬಂದು ಪೊಲೀಸರಲ್ಲಿ ದೂರು ದಾಖಲಿಸಿದಾಗ ವಿಷಯ ಬೆಳಕಿಗೆ ಬಂದಿದೆ.
ಮದುವೆಯಾಗಿ ಕೆಲವು ದಿನಗಳ ಕಾಲ ಜೊತೆಗಿರುತ್ತಿದ್ದ ಪ್ರಕಾಶ್ ಆನಂತರ ಕೇಂದ್ರೀಯ ಸೇವೆಯಲ್ಲಿ ಪ್ರವಾಸ ಇದೆಯೆಂದು ಹೇಳಿ ಉತ್ತರ ಭಾರತ, ಒಡಿಶಾ ಎಂದು ಹೇಳಿ ಹೋಗುತ್ತಿದ್ದ. ಇಂಥ ಸಂದರ್ಭದಲ್ಲಿ ದೆಹಲಿಯಲ್ಲಿ ಹೊಸ ಆಸ್ಪತ್ರೆ ಮಾಡುತ್ತಿರುವುದಾಗಿ ಹೇಳಿ ಪತ್ನಿಯರಿಂದಲೇ ಹಣ ಪಡೆಯುತ್ತಿದ್ದ. ಇಬ್ಬರಿಂದ ತಲಾ ಹತ್ತು ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ತನಿಖೆಯಲ್ಲಿ ಕಂಡುಬಂದಿದೆ. ಆರೋಪಿಯ ಬಳಿಯಿಂದ 11 ಎಟಿಎಂ ಕಾರ್ಡ್ಗಳು, ನಾಲ್ಕು ಆಧಾರ್ ಕಾರ್ಡ್ಗಳು ಮತ್ತು ಇತರ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
He lured with love college teachers, even hard-boiled policewomen and captious lawyers, as he went about striking middle-aged women desperate for companionship with cupid's arrow, marrying 14 of them across seven states over 38 years before running out of luck on Monday. Ramesh Chandra Swain, the 66-year-old from a coastal village in Odisha's Kendrapara district, is now cooling his heels in a jail in judicial custody
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm