ಬ್ರೇಕಿಂಗ್ ನ್ಯೂಸ್
16-02-22 11:17 am Mangalore Correspondent ಕ್ರೈಂ
ಮಂಗಳೂರು, ಫೆ.16 : ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪತ್ಬಾಂಧವ ನೇತೃತ್ವದಲ್ಲಿ ನಡೆಯುತ್ತಿರುವ ಟೋಲ್ ಗೇಟ್ ವಿರೋಧಿ ಹೋರಾಟದ ವೇದಿಕೆಗೆ ಮಂಗಳವಾರ ರಾತ್ರಿ ಮಂಗಳಮುಖಿಯರು ನುಗ್ಗಿದ್ದು ಅಶ್ಲೀಲವಾಗಿ ನಡೆದುಕೊಂಡಿದ್ದಲ್ಲದೆ, ಆಸಿಫ್ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.
ಏಳೆಂಟು ಮಂದಿಯಿದ್ದ ಮಂಗಳಮುಖಿಯರು ತಮ್ಮ ಶರ್ಟ್, ಪ್ಯಾಂಟ್ ಬಿಚ್ಚಿ ತೋರಿಸಿ ಅವಾಚ್ಯ ಮತ್ತು ಅಶ್ಲೀಲವಾಗಿ ನಡೆದುಕೊಂಡಿದ್ದಾರೆ. ಆಸಿಫ್ ಫೇಸ್ಬುಕ್ ಲೈವ್ ಮಾಡುತ್ತಿದ್ದಾರೆಂದು ತಿಳಿದು, ನಮ್ಮದನ್ನೂ ತೋರಿಸು ಎಂದು ಪ್ಯಾಂಟ್ ಬಿಚ್ಚಿದ್ದಾರೆ. ಅವಾಚ್ಯವಾಗಿ ನಿಂದಿಸಿ, ಹಣ ಕೊಡುವಂತೆ ಪೀಡಿಸಿದ್ದಾರೆ. ಅಲ್ಲಿದ್ದ ಪೊಲೀಸ್ ಪೇದೆ ಅಸಹಾಯಕನಾಗಿ ಅವರನ್ನು ಮನವೊಲಿಸಲು ಯತ್ನಿಸಿದರೂ, ಮಂಗಳಮುಖಿಯರು ನಿರ್ಲಕ್ಷ್ಯ ಮಾಡಿದ್ದಾರೆ.


ಆಸಿಫ್ ಫೇಸ್ಬುಕ್ ಲೈವ್ ಮಾಡಿದ ಬಳಿಕ ಅವರ ಪರವಾಗಿ ಸ್ಥಳೀಯರು ಜಮಾಯಿಸಿದ್ದು ಆನಂತರ ವೇದಿಕೆ ಬಿಟ್ಟು ಕದಲಿದ್ದಾರೆ. ಟೋಲ್ ಗೇಟ್ ನಡೆಸುವ ಮಂದಿಯೇ ಮಂಗಳಮುಖಿಯರನ್ನು ಅಲ್ಲಿಗೆ ಕಳಿಸಿ, ರಂಪಾಟ ನಡೆಸುವಂತೆ ಮಾಡಿದ್ದಾರೆ. ಆಮೂಲಕ ಟೋಲ್ ಗೇಟ್ ವಿರೋಧಿ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ ಎಂದು ಆಸಿಫ್ ಆರೋಪಿಸಿದ್ದಾರೆ. ಅಲ್ಲಿಗೆ ಬಂದಿದ್ದ ಮಂಗಳಮುಖಿಯರು ಕುಡಿದ ಮತ್ತಿನಲ್ಲಿದ್ದರು. ಈ ರೀತಿ ವರ್ತಿಸಿದ ತಂಡದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಸಿಫ್ ಆಗ್ರಹಿಸಿದ್ದಾರೆ.


ಕಳೆದ ಹತ್ತು ದಿನಗಳಿಂದ ಸುರತ್ಕಲ್ ಟೋಲ್ ಗೇಟ್ ಬಳಿ ವಿಶಿಷ್ಟ ಮತ್ತು ವಿಭಿನ್ನ ರೀತಿಯಲ್ಲಿ ಆಸಿಫ್ ಪ್ರತಿಭಟನೆ ನಡೆಸುತ್ತಿದ್ದು ಟೋಲ್ ಗೇಟ್ ಬಂದ್ ಮಾಡಿಯೇ ತೀರುತ್ತೇವೆಂದು ಸ್ಥಳೀಯರು ಆಸಿಫ್ ಜೊತೆಗೆ ನಿಂತಿದ್ದಾರೆ. ಸುರತ್ಕಲ್ ಟೋಲ್ ಗೇಟ್ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದು ಕಳೆದ ಎರಡು ವರ್ಷಗಳಿಂದ ನಿಲ್ಲಿಸುತ್ತೇವೆ ಎಂದು ಹೇಳುತ್ತಲೇ ಮುಂದುವರಿಸಿದ್ದಾರೆ. ಸಂಸದ ನಳಿನ್ ಕುಮಾರ್ ಕೃಪೆಯಿಂದ ಈ ಟೋಲ್ ಗೇಟ್ ನಡೆಯುತ್ತಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.
Asif Apatbandhava, a social worker, has been holding protest in unique form near the tollgate at Surathkal for the last some days, demanding the removal of the tollgate which he claims is illegal. A few transgenders reportedly tried to attack him past midnight on Tuesday February 15. Initially, at about 12.30 am, two transgenders came to him. A little while later, a gang of transgenders came there.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm