ಬ್ರೇಕಿಂಗ್ ನ್ಯೂಸ್
17-02-22 01:03 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.17 : ಇಲ್ಲಿನ ಉಜಿರೆ ಪೇಟೆಯ ವೈದ್ಯರೊಬ್ಬರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ, ಹಿಜಾಬ್ ವಿರುದ್ಧ ಟ್ವೀಟ್ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಜಿರೆಯ ಬೆನಕ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಶಂತನು ಆರ್. ಪ್ರಭು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ತನ್ನ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ ಯಾರೋ ದುಷ್ಕರ್ಮಿಗಳು ಹಿಜಾಬ್ ವಿರುದ್ಧ ಟ್ವೀಟ್ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆಯರು, ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸುವ ಅಗತ್ಯವಿಲ್ಲ. ನಾವು ಅದನ್ನು ಬಯಸುವುದಿಲ್ಲ. ಹಾಗೆ ನಿಮಗೆ ಬೇಕಾದಂತೆ ಹಿಜಾಬ್ ಧರಿಸಲು ಇದು ತಾಲಿಬಾನ್, ಸೌದಿ ಅರೇಬಿಯಾ ಅಲ್ಲ ಎಂದು ಟ್ವಿಟರ್ ಖಾತೆಯಲ್ಲಿ ಬರೆಯಲಾಗಿದೆ.

ಶಾಲೆ, ಕಾಲೇಜು ಶಿಕ್ಷಣ ಕಲಿಯುವುದಕ್ಕಾಗಿ ಇರುವುದು. ನಿಮಗೆ ಹಿಜಾಬ್ ಹಾಕ್ಕೊಳ್ಳಬೇಕಿದ್ದರೆ ನೀವು ಮದ್ರಸಾಕ್ಕೆ ಹೋಗಿ ಎಂದು ಬರೆದಿದ್ದಾರೆ. ಅಲ್ಲದೆ, ವೈದ್ಯ ಶಂತನು ಪ್ರಭು ಮಗು ಹಿಡಿದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಾಕ್ಕೊಂಡಿದ್ದ ಫೋಟೋ ಇರುವುದನ್ನು ಸ್ಕ್ರೀನ್ ಶಾಟ್ ತೆಗೆದು ಟ್ವಿಟರ್ ನಲ್ಲಿ ಹಾಕಲಾಗಿದೆ.
ಬೆನಕ ಆಸ್ಪತ್ರೆ ಮತ್ತು ತನ್ನ ಬಗ್ಗೆ ಸಮಾಜದಲ್ಲಿ ಸುಳ್ಳು ಸುದ್ದಿ ಹರಡುವ ರೀತಿ ಟ್ವೀಟ್ ಮಾಡಿದ್ದಾರೆ. ತಾನು ಕೂಡ ಮುಸ್ಲಿಮರು ನಡೆಸುವ ಮೆಡಿಕಲ್ ಕಾಲೇಜಿನಲ್ಲಿ ಕಲಿತು ಬಂದವನು. ಮುಸ್ಲಿಂ ಹುಡುಗಿಯರು ಹಿಜಾಬ್ ಹಾಕ್ಕೊಳ್ಳುವ ಬಗ್ಗೆ ತಿಳಿದುಕೊಂಡಿದ್ದೇನೆ. ನನ್ನ ತೇಜೋವಧೆ ಮಾಡುವುದಕ್ಕಾಗಿ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಾ.ಶಂತನು ಪ್ರಭು ದೂರಿನಲ್ಲಿ ತಿಳಿಸಿದ್ದಾರೆ.
A doctor from Ujire here has filed a complaint alleging that his social media account was hacked by miscreants who used it to upload anti-Hijab posts. Dr Shantanu R Prabhu, a pediatrician of Benaka Hospital Ujire in the taluk has complained to Beltangady police, claiming that his Twitter account has been hacked and a tweet against the Hijab has been posted therein.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm