ಬ್ರೇಕಿಂಗ್ ನ್ಯೂಸ್
17-02-22 01:03 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.17 : ಇಲ್ಲಿನ ಉಜಿರೆ ಪೇಟೆಯ ವೈದ್ಯರೊಬ್ಬರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ, ಹಿಜಾಬ್ ವಿರುದ್ಧ ಟ್ವೀಟ್ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಜಿರೆಯ ಬೆನಕ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಶಂತನು ಆರ್. ಪ್ರಭು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ತನ್ನ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ ಯಾರೋ ದುಷ್ಕರ್ಮಿಗಳು ಹಿಜಾಬ್ ವಿರುದ್ಧ ಟ್ವೀಟ್ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆಯರು, ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸುವ ಅಗತ್ಯವಿಲ್ಲ. ನಾವು ಅದನ್ನು ಬಯಸುವುದಿಲ್ಲ. ಹಾಗೆ ನಿಮಗೆ ಬೇಕಾದಂತೆ ಹಿಜಾಬ್ ಧರಿಸಲು ಇದು ತಾಲಿಬಾನ್, ಸೌದಿ ಅರೇಬಿಯಾ ಅಲ್ಲ ಎಂದು ಟ್ವಿಟರ್ ಖಾತೆಯಲ್ಲಿ ಬರೆಯಲಾಗಿದೆ.

ಶಾಲೆ, ಕಾಲೇಜು ಶಿಕ್ಷಣ ಕಲಿಯುವುದಕ್ಕಾಗಿ ಇರುವುದು. ನಿಮಗೆ ಹಿಜಾಬ್ ಹಾಕ್ಕೊಳ್ಳಬೇಕಿದ್ದರೆ ನೀವು ಮದ್ರಸಾಕ್ಕೆ ಹೋಗಿ ಎಂದು ಬರೆದಿದ್ದಾರೆ. ಅಲ್ಲದೆ, ವೈದ್ಯ ಶಂತನು ಪ್ರಭು ಮಗು ಹಿಡಿದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಾಕ್ಕೊಂಡಿದ್ದ ಫೋಟೋ ಇರುವುದನ್ನು ಸ್ಕ್ರೀನ್ ಶಾಟ್ ತೆಗೆದು ಟ್ವಿಟರ್ ನಲ್ಲಿ ಹಾಕಲಾಗಿದೆ.
ಬೆನಕ ಆಸ್ಪತ್ರೆ ಮತ್ತು ತನ್ನ ಬಗ್ಗೆ ಸಮಾಜದಲ್ಲಿ ಸುಳ್ಳು ಸುದ್ದಿ ಹರಡುವ ರೀತಿ ಟ್ವೀಟ್ ಮಾಡಿದ್ದಾರೆ. ತಾನು ಕೂಡ ಮುಸ್ಲಿಮರು ನಡೆಸುವ ಮೆಡಿಕಲ್ ಕಾಲೇಜಿನಲ್ಲಿ ಕಲಿತು ಬಂದವನು. ಮುಸ್ಲಿಂ ಹುಡುಗಿಯರು ಹಿಜಾಬ್ ಹಾಕ್ಕೊಳ್ಳುವ ಬಗ್ಗೆ ತಿಳಿದುಕೊಂಡಿದ್ದೇನೆ. ನನ್ನ ತೇಜೋವಧೆ ಮಾಡುವುದಕ್ಕಾಗಿ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಾ.ಶಂತನು ಪ್ರಭು ದೂರಿನಲ್ಲಿ ತಿಳಿಸಿದ್ದಾರೆ.
A doctor from Ujire here has filed a complaint alleging that his social media account was hacked by miscreants who used it to upload anti-Hijab posts. Dr Shantanu R Prabhu, a pediatrician of Benaka Hospital Ujire in the taluk has complained to Beltangady police, claiming that his Twitter account has been hacked and a tweet against the Hijab has been posted therein.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am