ಬ್ರೇಕಿಂಗ್ ನ್ಯೂಸ್
17-02-22 01:03 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.17 : ಇಲ್ಲಿನ ಉಜಿರೆ ಪೇಟೆಯ ವೈದ್ಯರೊಬ್ಬರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ, ಹಿಜಾಬ್ ವಿರುದ್ಧ ಟ್ವೀಟ್ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಜಿರೆಯ ಬೆನಕ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಶಂತನು ಆರ್. ಪ್ರಭು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ತನ್ನ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ ಯಾರೋ ದುಷ್ಕರ್ಮಿಗಳು ಹಿಜಾಬ್ ವಿರುದ್ಧ ಟ್ವೀಟ್ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆಯರು, ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸುವ ಅಗತ್ಯವಿಲ್ಲ. ನಾವು ಅದನ್ನು ಬಯಸುವುದಿಲ್ಲ. ಹಾಗೆ ನಿಮಗೆ ಬೇಕಾದಂತೆ ಹಿಜಾಬ್ ಧರಿಸಲು ಇದು ತಾಲಿಬಾನ್, ಸೌದಿ ಅರೇಬಿಯಾ ಅಲ್ಲ ಎಂದು ಟ್ವಿಟರ್ ಖಾತೆಯಲ್ಲಿ ಬರೆಯಲಾಗಿದೆ.

ಶಾಲೆ, ಕಾಲೇಜು ಶಿಕ್ಷಣ ಕಲಿಯುವುದಕ್ಕಾಗಿ ಇರುವುದು. ನಿಮಗೆ ಹಿಜಾಬ್ ಹಾಕ್ಕೊಳ್ಳಬೇಕಿದ್ದರೆ ನೀವು ಮದ್ರಸಾಕ್ಕೆ ಹೋಗಿ ಎಂದು ಬರೆದಿದ್ದಾರೆ. ಅಲ್ಲದೆ, ವೈದ್ಯ ಶಂತನು ಪ್ರಭು ಮಗು ಹಿಡಿದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಾಕ್ಕೊಂಡಿದ್ದ ಫೋಟೋ ಇರುವುದನ್ನು ಸ್ಕ್ರೀನ್ ಶಾಟ್ ತೆಗೆದು ಟ್ವಿಟರ್ ನಲ್ಲಿ ಹಾಕಲಾಗಿದೆ.
ಬೆನಕ ಆಸ್ಪತ್ರೆ ಮತ್ತು ತನ್ನ ಬಗ್ಗೆ ಸಮಾಜದಲ್ಲಿ ಸುಳ್ಳು ಸುದ್ದಿ ಹರಡುವ ರೀತಿ ಟ್ವೀಟ್ ಮಾಡಿದ್ದಾರೆ. ತಾನು ಕೂಡ ಮುಸ್ಲಿಮರು ನಡೆಸುವ ಮೆಡಿಕಲ್ ಕಾಲೇಜಿನಲ್ಲಿ ಕಲಿತು ಬಂದವನು. ಮುಸ್ಲಿಂ ಹುಡುಗಿಯರು ಹಿಜಾಬ್ ಹಾಕ್ಕೊಳ್ಳುವ ಬಗ್ಗೆ ತಿಳಿದುಕೊಂಡಿದ್ದೇನೆ. ನನ್ನ ತೇಜೋವಧೆ ಮಾಡುವುದಕ್ಕಾಗಿ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಾ.ಶಂತನು ಪ್ರಭು ದೂರಿನಲ್ಲಿ ತಿಳಿಸಿದ್ದಾರೆ.
A doctor from Ujire here has filed a complaint alleging that his social media account was hacked by miscreants who used it to upload anti-Hijab posts. Dr Shantanu R Prabhu, a pediatrician of Benaka Hospital Ujire in the taluk has complained to Beltangady police, claiming that his Twitter account has been hacked and a tweet against the Hijab has been posted therein.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm