ಬ್ರೇಕಿಂಗ್ ನ್ಯೂಸ್
19-02-22 01:28 pm HK Desk news ಕ್ರೈಂ
ನವದೆಹಲಿ, ಫೆ.19 : ಪಾಕಿಸ್ಥಾನದ ಗುಪ್ತಚರ ಸಂಸ್ಥೆ ಐಎಸ್ಐ ಅಣತಿಯಂತೆ ಉಗ್ರಗಾಮಿ ಸಂಘಟನೆ ಲಷ್ಕರ್ ಇ- ತೊಯ್ಬಾ ಉಗ್ರ ಸಂಘಟನೆಗೆ ಭಾರತದ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡಿದ ಆರೋಪದಲ್ಲಿ ಎನ್ಐಎ ತಂಡದಲ್ಲಿ ಅಧಿಕಾರಿಯಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಒಬ್ಬರನ್ನು ಎನ್ಐಎ ತನಿಖಾ ತಂಡ ಬಂಧಿಸಿದೆ.
ಹಿಮಾಚಲ ಪ್ರದೇಶ ಮೂಲದ ಅರವಿಂದ್ ದಿಗ್ವಿಜಯ್ ನೇಗಿ ಬಂಧಿತ ವ್ಯಕ್ತಿ. 2011ರಲ್ಲಿ ಐಪಿಎಸ್ ಬ್ಯಾಚ್ಗೆ ಬಡ್ತಿ ಪಡೆದಿದ್ದ ಪೊಲೀಸ್ ಅಧಿಕಾರಿ ನೇಗಿ ಎರಡು ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಎನ್ಐಎ ಎಸ್ಪಿಯಾಗಿದ್ದ ವೇಳೆ ತನಿಖಾ ತಂಡದ ಕಾರ್ಯಾಚರಣೆ ಕುರಿತ ಮಾಹಿತಿಗಳಿದ್ದ ದಾಖಲೆಯನ್ನು ಪಾಕಿಸ್ತಾನಕ್ಕೆ ನೀಡಿದ್ದರು. ಇದಕ್ಕಾಗಿ ದೊಡ್ಡ ಮೊತ್ತದ ಹಣವನ್ನು ಪಡೆದಿದ್ದರು.
![]()
ಈ ಬಗ್ಗೆ ಸಂಶಯ ಹೊಂದಿದ್ದ ರಾಷ್ಟ್ರೀಯ ತನಿಖಾ ದಳವು ಕಳೆದ ನವೆಂಬರ್ 6 ರಂದು ಪ್ರಕರಣ ದಾಖಲಿಸಿತ್ತು. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳ ಯೋಜನೆ ಮತ್ತು ಕಾರ್ಯಗತಗೊಳಿಸಲು ಬೆಂಬಲವನ್ನು ನೀಡುವುದಕ್ಕಾಗಿ ನಿಷೇಧಿತ ಲಷ್ಕರ್-ಇ-ತೊಯ್ಬಾ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಈ ಹಿಂದೆ ಆರು ಮಂದಿಯನ್ನು ಬಂಧಿಸಿತ್ತು.
ಈ ಬಗ್ಗೆ ಎನ್ಐಎ ಅಧಿಕಾರಿಗಳು ಹಿಮಾಚಲ ಪ್ರದೇಶದ ಕಿನಾನೂರಿನಲ್ಲಿರುವ ನೇಗಿ ಮನೆ ಸೇರಿದಂತೆ ಹಲವು ಕಡೆ ದಾಳಿ ನಡೆಸಿದ್ದರು. ನೇಗಿ ಐಪಿಎಸ್ ಅಧಿಕಾರಿಯಾಗಿ ಭಡ್ತಿ ಪಡೆದ ಬಳಿಕ 11 ವರ್ಷಗಳ ಕಾಲ ಎನ್ಐಎ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಜಮ್ಮು ಕಾಶ್ಮೀರದಲ್ಲಿ ನಕಲಿ ನೋಟುಗಳ ಚಲಾವಣೆ, ಐಸಿಸ್ ಉಗ್ರವಾದಿ ಸಂಘಟನೆಗೆ ಯುವಕರ ಸೇರ್ಪಡೆ, ಉಗ್ರವಾದಿ ಸಂಘಟನೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದ ಬಗ್ಗೆ ಎನ್ಐಎ ಎಸ್ಪಿಯಾಗಿದ್ದ ಅರವಿಂದ್ ನೇಗಿ ತನಿಖೆ ನಡೆಸುತ್ತಿದ್ದರು.
New Delhi, Feb 18 (PTI) Cracking down on its own officers, the National Investigation Agency (NIA) on Friday arrested IPS officer Arvind Digvijay Negi, who was earlier posted as a Superintendent of Police (SP) in the agency, for allegedly leaking secret documents to an over ground worker of the banned Lashkar-e-Taiba terror group, according to officials.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am