ಬ್ರೇಕಿಂಗ್ ನ್ಯೂಸ್
20-02-22 01:11 pm Bengaluru Correspondent ಕ್ರೈಂ
ಬೆಂಗಳೂರು, ಫೆ.20 : ಕಾಂಗ್ರೆಸ್ ಮುಖಂಡ, ಶಾಸಕ ಪ್ರಿಯಾಂಕ ಖರ್ಗೆ ಪತ್ನಿ ಶ್ರುತಿ ಖರ್ಗೆ ಅವರ ಮೊಬೈಲ್ ಸುಲಿಗೆ ಮಾಡಿದ ಪ್ರಕರಣದಲ್ಲಿ ಸದಾಶಿವ ನಗರ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.
ಮೋಯಿನ್ @ ಕಾಜಾ ಮೋಯಿನ್, ತೋಹಿದ್, ಜಬೀ ಅಲಿಯಾಸ್ ಕಾಲಾ ಹಾಗೂ ಇಲಿಯಾಸ್ ಬಂಧಿತ ಆರೋಪಿಗಳು. ಪೊಲೀಸರ ವಿಚಾರಣೆ ವೇಳೆ ಆರೋಪಿಗಳ ಸಾಲು ಸಾಲು ಸುಲಿಗೆ ಕಹಾನಿಯೂ ಬಯಲಿಗೆ ಬಂದಿದೆ. ಆರೋಪಿಗಳು 180ಕ್ಕೂ ಹೆಚ್ಚು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಅನ್ನುವ ಮಾಹಿತಿ ಸಿಕ್ಕಿದೆ.
ವ್ಯವಸ್ಥಿತವಾಗಿ ಸುಲಿಗೆ ಮಾಡುತ್ತಿದ್ದ ಆರೋಪಿಗಳು ದಿನದಲ್ಲಿ ಬೆಳಗ್ಗೆ ಮತ್ತು ಸಂಜೆ ಮಾತ್ರ ತಮ್ಮ ಕೃತ್ಯಕ್ಕೆ ಸಮಯ ಮಾಡಿಕೊಂಡಿದ್ದರು. ಬೆಳಿಗ್ಗೆ 5 ರಿಂದ 8 ಮತ್ತು ರಾತ್ರಿ 8 ರಿಂದ 10ರ ವರೆಗೆ ಮಾತ್ರ ಸುಲಿಗೆ ಮಾಡುತ್ತಿದ್ದರು. ಅದರಲ್ಲೂ ಶನಿವಾರ- ಭಾನುವಾರವೇ ಈ ಗ್ಯಾಂಗ್ ಫುಲ್ ಆಕ್ಟಿವ್ ಆಗುತ್ತಿತ್ತು. ಬೈಕ್ ಕಳ್ಳತನ ಮಾಡಿ ಅದನ್ನೇ ಬಳಸಿಕೊಂಡು ತಮ್ಮ ಕೃತ್ಯ ನಡೆಸುತ್ತಿದ್ದರು.

ಇದೇ ತಂಡ ರಾಜ್ಯದ ಹಲವೆಡೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೃತ್ಯವೆಸಗಿದ್ದು ಬೆಂಗಳೂರಿನ ಹೈಗ್ರೌಂಡ್, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಸರ್ಜಾಪುರ, ಮಂಡ್ಯ, ಹೊಸಕೋಟೆ, ನೆಲಮಂಗಲ ಸೇರಿ ಹಲವು ಠಾಣೆಗಳಲ್ಲಿ ವಾಂಟೆಡ್ ಲಿಸ್ಟ್ ನಲ್ಲಿದ್ದಾರೆ. ಹಲವು ಠಾಣೆಗಳಲ್ಲಿ ಇವರ ವಿರುದ್ಧ ಸುಲಿಗೆ ಪ್ರಕರಣ ದಾಖಲಾಗಿದೆ. ಎಚ್.ಎಸ್ ಆರ್ ಲೇಔಟ್ ನಲ್ಲಿ ಹಣ ಕೊಡದ ಕಾರಣಕ್ಕೆ ಕ್ಯಾಬ್ ಚಾಲಕನಿಗೆ ಚಾಕು ಇರಿದಿದ್ದರು ಅನ್ನುವ ಮಾಹಿತಿಯೂ ಲಭಿಸಿದೆ. ಸದ್ಯ ಸದಾಶಿವನಗರ ಪೊಲೀಸರಿಂದ ಆರೋಪಿಗಳ ಬಂಧನವಾಗಿದೆ. ಇತ್ತೀಚೆಗೆ ಶ್ರುತಿ ಖರ್ಗೆ ಮೊಬೈಲ್ ದೋಚಿದ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು.
Four accused have been arrested in connection with the mobile extortion case of Shruti Kharge(Shruthi Kharge), wife of MLA Priyank Kharge (Priyank Kharge). Sadashivanagar police, who managed to nab Khatarnak Khadimar, exposed a line of extortion and extortion of the accused during interrogation
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm