ಬ್ರೇಕಿಂಗ್ ನ್ಯೂಸ್
20-02-22 01:11 pm Bengaluru Correspondent ಕ್ರೈಂ
ಬೆಂಗಳೂರು, ಫೆ.20 : ಕಾಂಗ್ರೆಸ್ ಮುಖಂಡ, ಶಾಸಕ ಪ್ರಿಯಾಂಕ ಖರ್ಗೆ ಪತ್ನಿ ಶ್ರುತಿ ಖರ್ಗೆ ಅವರ ಮೊಬೈಲ್ ಸುಲಿಗೆ ಮಾಡಿದ ಪ್ರಕರಣದಲ್ಲಿ ಸದಾಶಿವ ನಗರ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.
ಮೋಯಿನ್ @ ಕಾಜಾ ಮೋಯಿನ್, ತೋಹಿದ್, ಜಬೀ ಅಲಿಯಾಸ್ ಕಾಲಾ ಹಾಗೂ ಇಲಿಯಾಸ್ ಬಂಧಿತ ಆರೋಪಿಗಳು. ಪೊಲೀಸರ ವಿಚಾರಣೆ ವೇಳೆ ಆರೋಪಿಗಳ ಸಾಲು ಸಾಲು ಸುಲಿಗೆ ಕಹಾನಿಯೂ ಬಯಲಿಗೆ ಬಂದಿದೆ. ಆರೋಪಿಗಳು 180ಕ್ಕೂ ಹೆಚ್ಚು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಅನ್ನುವ ಮಾಹಿತಿ ಸಿಕ್ಕಿದೆ.
ವ್ಯವಸ್ಥಿತವಾಗಿ ಸುಲಿಗೆ ಮಾಡುತ್ತಿದ್ದ ಆರೋಪಿಗಳು ದಿನದಲ್ಲಿ ಬೆಳಗ್ಗೆ ಮತ್ತು ಸಂಜೆ ಮಾತ್ರ ತಮ್ಮ ಕೃತ್ಯಕ್ಕೆ ಸಮಯ ಮಾಡಿಕೊಂಡಿದ್ದರು. ಬೆಳಿಗ್ಗೆ 5 ರಿಂದ 8 ಮತ್ತು ರಾತ್ರಿ 8 ರಿಂದ 10ರ ವರೆಗೆ ಮಾತ್ರ ಸುಲಿಗೆ ಮಾಡುತ್ತಿದ್ದರು. ಅದರಲ್ಲೂ ಶನಿವಾರ- ಭಾನುವಾರವೇ ಈ ಗ್ಯಾಂಗ್ ಫುಲ್ ಆಕ್ಟಿವ್ ಆಗುತ್ತಿತ್ತು. ಬೈಕ್ ಕಳ್ಳತನ ಮಾಡಿ ಅದನ್ನೇ ಬಳಸಿಕೊಂಡು ತಮ್ಮ ಕೃತ್ಯ ನಡೆಸುತ್ತಿದ್ದರು.
ಇದೇ ತಂಡ ರಾಜ್ಯದ ಹಲವೆಡೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೃತ್ಯವೆಸಗಿದ್ದು ಬೆಂಗಳೂರಿನ ಹೈಗ್ರೌಂಡ್, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಸರ್ಜಾಪುರ, ಮಂಡ್ಯ, ಹೊಸಕೋಟೆ, ನೆಲಮಂಗಲ ಸೇರಿ ಹಲವು ಠಾಣೆಗಳಲ್ಲಿ ವಾಂಟೆಡ್ ಲಿಸ್ಟ್ ನಲ್ಲಿದ್ದಾರೆ. ಹಲವು ಠಾಣೆಗಳಲ್ಲಿ ಇವರ ವಿರುದ್ಧ ಸುಲಿಗೆ ಪ್ರಕರಣ ದಾಖಲಾಗಿದೆ. ಎಚ್.ಎಸ್ ಆರ್ ಲೇಔಟ್ ನಲ್ಲಿ ಹಣ ಕೊಡದ ಕಾರಣಕ್ಕೆ ಕ್ಯಾಬ್ ಚಾಲಕನಿಗೆ ಚಾಕು ಇರಿದಿದ್ದರು ಅನ್ನುವ ಮಾಹಿತಿಯೂ ಲಭಿಸಿದೆ. ಸದ್ಯ ಸದಾಶಿವನಗರ ಪೊಲೀಸರಿಂದ ಆರೋಪಿಗಳ ಬಂಧನವಾಗಿದೆ. ಇತ್ತೀಚೆಗೆ ಶ್ರುತಿ ಖರ್ಗೆ ಮೊಬೈಲ್ ದೋಚಿದ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು.
Four accused have been arrested in connection with the mobile extortion case of Shruti Kharge(Shruthi Kharge), wife of MLA Priyank Kharge (Priyank Kharge). Sadashivanagar police, who managed to nab Khatarnak Khadimar, exposed a line of extortion and extortion of the accused during interrogation
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm