ಬ್ರೇಕಿಂಗ್ ನ್ಯೂಸ್
20-02-22 01:11 pm Bengaluru Correspondent ಕ್ರೈಂ
ಬೆಂಗಳೂರು, ಫೆ.20 : ಕಾಂಗ್ರೆಸ್ ಮುಖಂಡ, ಶಾಸಕ ಪ್ರಿಯಾಂಕ ಖರ್ಗೆ ಪತ್ನಿ ಶ್ರುತಿ ಖರ್ಗೆ ಅವರ ಮೊಬೈಲ್ ಸುಲಿಗೆ ಮಾಡಿದ ಪ್ರಕರಣದಲ್ಲಿ ಸದಾಶಿವ ನಗರ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.
ಮೋಯಿನ್ @ ಕಾಜಾ ಮೋಯಿನ್, ತೋಹಿದ್, ಜಬೀ ಅಲಿಯಾಸ್ ಕಾಲಾ ಹಾಗೂ ಇಲಿಯಾಸ್ ಬಂಧಿತ ಆರೋಪಿಗಳು. ಪೊಲೀಸರ ವಿಚಾರಣೆ ವೇಳೆ ಆರೋಪಿಗಳ ಸಾಲು ಸಾಲು ಸುಲಿಗೆ ಕಹಾನಿಯೂ ಬಯಲಿಗೆ ಬಂದಿದೆ. ಆರೋಪಿಗಳು 180ಕ್ಕೂ ಹೆಚ್ಚು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಅನ್ನುವ ಮಾಹಿತಿ ಸಿಕ್ಕಿದೆ.
ವ್ಯವಸ್ಥಿತವಾಗಿ ಸುಲಿಗೆ ಮಾಡುತ್ತಿದ್ದ ಆರೋಪಿಗಳು ದಿನದಲ್ಲಿ ಬೆಳಗ್ಗೆ ಮತ್ತು ಸಂಜೆ ಮಾತ್ರ ತಮ್ಮ ಕೃತ್ಯಕ್ಕೆ ಸಮಯ ಮಾಡಿಕೊಂಡಿದ್ದರು. ಬೆಳಿಗ್ಗೆ 5 ರಿಂದ 8 ಮತ್ತು ರಾತ್ರಿ 8 ರಿಂದ 10ರ ವರೆಗೆ ಮಾತ್ರ ಸುಲಿಗೆ ಮಾಡುತ್ತಿದ್ದರು. ಅದರಲ್ಲೂ ಶನಿವಾರ- ಭಾನುವಾರವೇ ಈ ಗ್ಯಾಂಗ್ ಫುಲ್ ಆಕ್ಟಿವ್ ಆಗುತ್ತಿತ್ತು. ಬೈಕ್ ಕಳ್ಳತನ ಮಾಡಿ ಅದನ್ನೇ ಬಳಸಿಕೊಂಡು ತಮ್ಮ ಕೃತ್ಯ ನಡೆಸುತ್ತಿದ್ದರು.

ಇದೇ ತಂಡ ರಾಜ್ಯದ ಹಲವೆಡೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೃತ್ಯವೆಸಗಿದ್ದು ಬೆಂಗಳೂರಿನ ಹೈಗ್ರೌಂಡ್, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಸರ್ಜಾಪುರ, ಮಂಡ್ಯ, ಹೊಸಕೋಟೆ, ನೆಲಮಂಗಲ ಸೇರಿ ಹಲವು ಠಾಣೆಗಳಲ್ಲಿ ವಾಂಟೆಡ್ ಲಿಸ್ಟ್ ನಲ್ಲಿದ್ದಾರೆ. ಹಲವು ಠಾಣೆಗಳಲ್ಲಿ ಇವರ ವಿರುದ್ಧ ಸುಲಿಗೆ ಪ್ರಕರಣ ದಾಖಲಾಗಿದೆ. ಎಚ್.ಎಸ್ ಆರ್ ಲೇಔಟ್ ನಲ್ಲಿ ಹಣ ಕೊಡದ ಕಾರಣಕ್ಕೆ ಕ್ಯಾಬ್ ಚಾಲಕನಿಗೆ ಚಾಕು ಇರಿದಿದ್ದರು ಅನ್ನುವ ಮಾಹಿತಿಯೂ ಲಭಿಸಿದೆ. ಸದ್ಯ ಸದಾಶಿವನಗರ ಪೊಲೀಸರಿಂದ ಆರೋಪಿಗಳ ಬಂಧನವಾಗಿದೆ. ಇತ್ತೀಚೆಗೆ ಶ್ರುತಿ ಖರ್ಗೆ ಮೊಬೈಲ್ ದೋಚಿದ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು.
Four accused have been arrested in connection with the mobile extortion case of Shruti Kharge(Shruthi Kharge), wife of MLA Priyank Kharge (Priyank Kharge). Sadashivanagar police, who managed to nab Khatarnak Khadimar, exposed a line of extortion and extortion of the accused during interrogation
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm