ಬ್ರೇಕಿಂಗ್ ನ್ಯೂಸ್
20-02-22 01:11 pm Bengaluru Correspondent ಕ್ರೈಂ
ಬೆಂಗಳೂರು, ಫೆ.20 : ಕಾಂಗ್ರೆಸ್ ಮುಖಂಡ, ಶಾಸಕ ಪ್ರಿಯಾಂಕ ಖರ್ಗೆ ಪತ್ನಿ ಶ್ರುತಿ ಖರ್ಗೆ ಅವರ ಮೊಬೈಲ್ ಸುಲಿಗೆ ಮಾಡಿದ ಪ್ರಕರಣದಲ್ಲಿ ಸದಾಶಿವ ನಗರ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.
ಮೋಯಿನ್ @ ಕಾಜಾ ಮೋಯಿನ್, ತೋಹಿದ್, ಜಬೀ ಅಲಿಯಾಸ್ ಕಾಲಾ ಹಾಗೂ ಇಲಿಯಾಸ್ ಬಂಧಿತ ಆರೋಪಿಗಳು. ಪೊಲೀಸರ ವಿಚಾರಣೆ ವೇಳೆ ಆರೋಪಿಗಳ ಸಾಲು ಸಾಲು ಸುಲಿಗೆ ಕಹಾನಿಯೂ ಬಯಲಿಗೆ ಬಂದಿದೆ. ಆರೋಪಿಗಳು 180ಕ್ಕೂ ಹೆಚ್ಚು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಅನ್ನುವ ಮಾಹಿತಿ ಸಿಕ್ಕಿದೆ.
ವ್ಯವಸ್ಥಿತವಾಗಿ ಸುಲಿಗೆ ಮಾಡುತ್ತಿದ್ದ ಆರೋಪಿಗಳು ದಿನದಲ್ಲಿ ಬೆಳಗ್ಗೆ ಮತ್ತು ಸಂಜೆ ಮಾತ್ರ ತಮ್ಮ ಕೃತ್ಯಕ್ಕೆ ಸಮಯ ಮಾಡಿಕೊಂಡಿದ್ದರು. ಬೆಳಿಗ್ಗೆ 5 ರಿಂದ 8 ಮತ್ತು ರಾತ್ರಿ 8 ರಿಂದ 10ರ ವರೆಗೆ ಮಾತ್ರ ಸುಲಿಗೆ ಮಾಡುತ್ತಿದ್ದರು. ಅದರಲ್ಲೂ ಶನಿವಾರ- ಭಾನುವಾರವೇ ಈ ಗ್ಯಾಂಗ್ ಫುಲ್ ಆಕ್ಟಿವ್ ಆಗುತ್ತಿತ್ತು. ಬೈಕ್ ಕಳ್ಳತನ ಮಾಡಿ ಅದನ್ನೇ ಬಳಸಿಕೊಂಡು ತಮ್ಮ ಕೃತ್ಯ ನಡೆಸುತ್ತಿದ್ದರು.
ಇದೇ ತಂಡ ರಾಜ್ಯದ ಹಲವೆಡೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೃತ್ಯವೆಸಗಿದ್ದು ಬೆಂಗಳೂರಿನ ಹೈಗ್ರೌಂಡ್, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಸರ್ಜಾಪುರ, ಮಂಡ್ಯ, ಹೊಸಕೋಟೆ, ನೆಲಮಂಗಲ ಸೇರಿ ಹಲವು ಠಾಣೆಗಳಲ್ಲಿ ವಾಂಟೆಡ್ ಲಿಸ್ಟ್ ನಲ್ಲಿದ್ದಾರೆ. ಹಲವು ಠಾಣೆಗಳಲ್ಲಿ ಇವರ ವಿರುದ್ಧ ಸುಲಿಗೆ ಪ್ರಕರಣ ದಾಖಲಾಗಿದೆ. ಎಚ್.ಎಸ್ ಆರ್ ಲೇಔಟ್ ನಲ್ಲಿ ಹಣ ಕೊಡದ ಕಾರಣಕ್ಕೆ ಕ್ಯಾಬ್ ಚಾಲಕನಿಗೆ ಚಾಕು ಇರಿದಿದ್ದರು ಅನ್ನುವ ಮಾಹಿತಿಯೂ ಲಭಿಸಿದೆ. ಸದ್ಯ ಸದಾಶಿವನಗರ ಪೊಲೀಸರಿಂದ ಆರೋಪಿಗಳ ಬಂಧನವಾಗಿದೆ. ಇತ್ತೀಚೆಗೆ ಶ್ರುತಿ ಖರ್ಗೆ ಮೊಬೈಲ್ ದೋಚಿದ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು.
Four accused have been arrested in connection with the mobile extortion case of Shruti Kharge(Shruthi Kharge), wife of MLA Priyank Kharge (Priyank Kharge). Sadashivanagar police, who managed to nab Khatarnak Khadimar, exposed a line of extortion and extortion of the accused during interrogation
31-07-25 11:20 pm
Bangalore Correspondent
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
31-07-25 10:08 pm
HK News Desk
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
31-07-25 11:16 pm
Mangalore Correspondent
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
Human Skull, Multiple Bones, Dharmasthala, SI...
31-07-25 08:45 pm
31-07-25 06:04 pm
Mangalore Correspondent
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm