ಬ್ರೇಕಿಂಗ್ ನ್ಯೂಸ್
21-02-22 11:18 pm Mangaluru Correspondent ಕ್ರೈಂ
ಮಂಗಳೂರು, ಫೆ.21: ಕಾವೂರು ಠಾಣೆ ವ್ಯಾಪ್ತಿಯ ಪಂಜಿಮೊಗರಿನ ಉರುಂದಾಡಿ ಗುಡ್ಡೆ ಎಂಬಲ್ಲಿ ಹೋಲಿ ಕ್ರಾಸ್ ಚರ್ಚ್ ಮತ್ತು ಅಂಗನವಾಡಿ ಕಟ್ಟಡವನ್ನು ಕೆಡವಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಉರುಂದಾಡಿ ಗುಡ್ಡೆ ನಿವಾಸಿ ಧನಂಜಯ(36) ಮತ್ತು ಬಜ್ಪೆ ನಿವಾಸಿ ಲತೀಶ್ (25) ಬಂಧಿತರು. ಈ ಬಗ್ಗೆ ಶಿಶು ಕಲ್ಯಾಣ ಇಲಾಖೆಯ ಅಧಿಕಾರಿ ಹರೀಶ್ ಕಾವೂರು ಠಾಣೆಗೆ ದೂರು ನೀಡಿದ್ದರು.
ಸದ್ರಿ ಜಾಗದಲ್ಲಿ ಅಂಗನವಾಡಿ ನಿರ್ಮಾಣಕ್ಕೆ 16.5 ಲಕ್ಷ ರೂ. ಮಂಜೂರು ಆಗಿತ್ತು. ಆದರೆ ತಹಸೀಲ್ದಾರ್ ಗೊತ್ತು ಪಡಿಸಿದ ಜಾಗದಲ್ಲಿ ಹೋಲಿ ಕ್ರಾಸ್ ಚರ್ಚ್ ಕಟ್ಟಡ ಇರುವ ಬಗ್ಗೆ ಶಿಶು ಕಲ್ಯಾಣ ಅಧಿಕಾರಿ ಮತ್ತೆ ತಹಸೀಲ್ದಾರ್ ಗೆ ಪತ್ರ ಬರೆದು ಆ ಕಟ್ಟಡವನ್ನು ತೆರವುಗೊಳಿಸಿ ಕೊಡುವಂತೆ ಕೇಳಿಕೊಂಡಿದ್ದರು. ಈ ನಡುವೆ, ಫೆ.5 ರಂದು ಏಕಾಏಕಿ ಯಾರೋ ಬಂದು ಕಟ್ಟಡವನ್ನು ಒಡೆದು ಹಾಕಿದ್ದರು. ಈ ಬಗ್ಗೆ ಅಧಿಕಾರಿ ಹರೀಶ್, ಕಾವೂರು ಠಾಣೆಗೆ ದೂರು ನೀಡಿ ಕಟ್ಟಡವನ್ನು ಒಡೆದು ಹಾಕಲು ಯಾವುದೇ ಆದೇಶ ಆಗಿರುವುದಿಲ್ಲ. ಇದರ ಮಧ್ಯೆ ಯಾರೋ ಕಟ್ಟಡ ಒಡೆದು ಹಾಕಿದ್ದು ಕ್ರಮ ಕೈಗೊಳ್ಳಲು ದೂರಿನಲ್ಲಿ ತಿಳಿಸಿದ್ದರು. ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿ ಧನಂಜಯ ಅದೇ ಪರಿಸರದ ನಿವಾಸಿಯಾಗಿದ್ದು ಮಾಧ್ಯಮದ ಮುಂದೆ ಕಟ್ಟಡ ಒಡೆದ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ಹೇಳಿಕೊಂಡಿದ್ದ. ಈಗ ಅದೇ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ತಿಯನ್ ಬಾಂಧವರು ಘಟನೆ ಖಂಡಿಸಿ ಕುಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು.
The Kavoor police on February 21, arrested two persons in connection with the demolition of St Antony Prayer centre in Urandady Gudde-Panjimogaru. The arrested have been identified as Lathish (25) from Bajpe and Dhananjay (36) from Panjimogeru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm