ಬ್ರೇಕಿಂಗ್ ನ್ಯೂಸ್
21-02-22 11:18 pm Mangaluru Correspondent ಕ್ರೈಂ
ಮಂಗಳೂರು, ಫೆ.21: ಕಾವೂರು ಠಾಣೆ ವ್ಯಾಪ್ತಿಯ ಪಂಜಿಮೊಗರಿನ ಉರುಂದಾಡಿ ಗುಡ್ಡೆ ಎಂಬಲ್ಲಿ ಹೋಲಿ ಕ್ರಾಸ್ ಚರ್ಚ್ ಮತ್ತು ಅಂಗನವಾಡಿ ಕಟ್ಟಡವನ್ನು ಕೆಡವಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಉರುಂದಾಡಿ ಗುಡ್ಡೆ ನಿವಾಸಿ ಧನಂಜಯ(36) ಮತ್ತು ಬಜ್ಪೆ ನಿವಾಸಿ ಲತೀಶ್ (25) ಬಂಧಿತರು. ಈ ಬಗ್ಗೆ ಶಿಶು ಕಲ್ಯಾಣ ಇಲಾಖೆಯ ಅಧಿಕಾರಿ ಹರೀಶ್ ಕಾವೂರು ಠಾಣೆಗೆ ದೂರು ನೀಡಿದ್ದರು.
ಸದ್ರಿ ಜಾಗದಲ್ಲಿ ಅಂಗನವಾಡಿ ನಿರ್ಮಾಣಕ್ಕೆ 16.5 ಲಕ್ಷ ರೂ. ಮಂಜೂರು ಆಗಿತ್ತು. ಆದರೆ ತಹಸೀಲ್ದಾರ್ ಗೊತ್ತು ಪಡಿಸಿದ ಜಾಗದಲ್ಲಿ ಹೋಲಿ ಕ್ರಾಸ್ ಚರ್ಚ್ ಕಟ್ಟಡ ಇರುವ ಬಗ್ಗೆ ಶಿಶು ಕಲ್ಯಾಣ ಅಧಿಕಾರಿ ಮತ್ತೆ ತಹಸೀಲ್ದಾರ್ ಗೆ ಪತ್ರ ಬರೆದು ಆ ಕಟ್ಟಡವನ್ನು ತೆರವುಗೊಳಿಸಿ ಕೊಡುವಂತೆ ಕೇಳಿಕೊಂಡಿದ್ದರು. ಈ ನಡುವೆ, ಫೆ.5 ರಂದು ಏಕಾಏಕಿ ಯಾರೋ ಬಂದು ಕಟ್ಟಡವನ್ನು ಒಡೆದು ಹಾಕಿದ್ದರು. ಈ ಬಗ್ಗೆ ಅಧಿಕಾರಿ ಹರೀಶ್, ಕಾವೂರು ಠಾಣೆಗೆ ದೂರು ನೀಡಿ ಕಟ್ಟಡವನ್ನು ಒಡೆದು ಹಾಕಲು ಯಾವುದೇ ಆದೇಶ ಆಗಿರುವುದಿಲ್ಲ. ಇದರ ಮಧ್ಯೆ ಯಾರೋ ಕಟ್ಟಡ ಒಡೆದು ಹಾಕಿದ್ದು ಕ್ರಮ ಕೈಗೊಳ್ಳಲು ದೂರಿನಲ್ಲಿ ತಿಳಿಸಿದ್ದರು. ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿ ಧನಂಜಯ ಅದೇ ಪರಿಸರದ ನಿವಾಸಿಯಾಗಿದ್ದು ಮಾಧ್ಯಮದ ಮುಂದೆ ಕಟ್ಟಡ ಒಡೆದ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ಹೇಳಿಕೊಂಡಿದ್ದ. ಈಗ ಅದೇ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ತಿಯನ್ ಬಾಂಧವರು ಘಟನೆ ಖಂಡಿಸಿ ಕುಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು.
The Kavoor police on February 21, arrested two persons in connection with the demolition of St Antony Prayer centre in Urandady Gudde-Panjimogaru. The arrested have been identified as Lathish (25) from Bajpe and Dhananjay (36) from Panjimogeru.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm