ಬ್ರೇಕಿಂಗ್ ನ್ಯೂಸ್
21-02-22 11:18 pm Mangaluru Correspondent ಕ್ರೈಂ
ಮಂಗಳೂರು, ಫೆ.21: ಕಾವೂರು ಠಾಣೆ ವ್ಯಾಪ್ತಿಯ ಪಂಜಿಮೊಗರಿನ ಉರುಂದಾಡಿ ಗುಡ್ಡೆ ಎಂಬಲ್ಲಿ ಹೋಲಿ ಕ್ರಾಸ್ ಚರ್ಚ್ ಮತ್ತು ಅಂಗನವಾಡಿ ಕಟ್ಟಡವನ್ನು ಕೆಡವಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಉರುಂದಾಡಿ ಗುಡ್ಡೆ ನಿವಾಸಿ ಧನಂಜಯ(36) ಮತ್ತು ಬಜ್ಪೆ ನಿವಾಸಿ ಲತೀಶ್ (25) ಬಂಧಿತರು. ಈ ಬಗ್ಗೆ ಶಿಶು ಕಲ್ಯಾಣ ಇಲಾಖೆಯ ಅಧಿಕಾರಿ ಹರೀಶ್ ಕಾವೂರು ಠಾಣೆಗೆ ದೂರು ನೀಡಿದ್ದರು.
ಸದ್ರಿ ಜಾಗದಲ್ಲಿ ಅಂಗನವಾಡಿ ನಿರ್ಮಾಣಕ್ಕೆ 16.5 ಲಕ್ಷ ರೂ. ಮಂಜೂರು ಆಗಿತ್ತು. ಆದರೆ ತಹಸೀಲ್ದಾರ್ ಗೊತ್ತು ಪಡಿಸಿದ ಜಾಗದಲ್ಲಿ ಹೋಲಿ ಕ್ರಾಸ್ ಚರ್ಚ್ ಕಟ್ಟಡ ಇರುವ ಬಗ್ಗೆ ಶಿಶು ಕಲ್ಯಾಣ ಅಧಿಕಾರಿ ಮತ್ತೆ ತಹಸೀಲ್ದಾರ್ ಗೆ ಪತ್ರ ಬರೆದು ಆ ಕಟ್ಟಡವನ್ನು ತೆರವುಗೊಳಿಸಿ ಕೊಡುವಂತೆ ಕೇಳಿಕೊಂಡಿದ್ದರು. ಈ ನಡುವೆ, ಫೆ.5 ರಂದು ಏಕಾಏಕಿ ಯಾರೋ ಬಂದು ಕಟ್ಟಡವನ್ನು ಒಡೆದು ಹಾಕಿದ್ದರು. ಈ ಬಗ್ಗೆ ಅಧಿಕಾರಿ ಹರೀಶ್, ಕಾವೂರು ಠಾಣೆಗೆ ದೂರು ನೀಡಿ ಕಟ್ಟಡವನ್ನು ಒಡೆದು ಹಾಕಲು ಯಾವುದೇ ಆದೇಶ ಆಗಿರುವುದಿಲ್ಲ. ಇದರ ಮಧ್ಯೆ ಯಾರೋ ಕಟ್ಟಡ ಒಡೆದು ಹಾಕಿದ್ದು ಕ್ರಮ ಕೈಗೊಳ್ಳಲು ದೂರಿನಲ್ಲಿ ತಿಳಿಸಿದ್ದರು. ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿ ಧನಂಜಯ ಅದೇ ಪರಿಸರದ ನಿವಾಸಿಯಾಗಿದ್ದು ಮಾಧ್ಯಮದ ಮುಂದೆ ಕಟ್ಟಡ ಒಡೆದ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ಹೇಳಿಕೊಂಡಿದ್ದ. ಈಗ ಅದೇ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ತಿಯನ್ ಬಾಂಧವರು ಘಟನೆ ಖಂಡಿಸಿ ಕುಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು.
The Kavoor police on February 21, arrested two persons in connection with the demolition of St Antony Prayer centre in Urandady Gudde-Panjimogaru. The arrested have been identified as Lathish (25) from Bajpe and Dhananjay (36) from Panjimogeru.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm