ಬ್ರೇಕಿಂಗ್ ನ್ಯೂಸ್
22-02-22 11:52 am HK Desk news ಕ್ರೈಂ
ಶಿವಮೊಗ್ಗ, ಫೆ.22 : ಹಿಂದು ಸಂಘಟನೆ ಕಾರ್ಯಕರ್ತನ ಹತ್ಯೆಯಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ನಗರ ಸ್ವಲ್ಪಮಟ್ಟಿಗೆ ಶಾಂತವಾಗಿದೆ. ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗಲಭೆ ನಿಯಂತ್ರಣಕ್ಕಾಗಿ ಕರ್ಫ್ಯೂ ಜಾರಿ ಮಾಡಲಾಗಿದೆ.
ನಿನ್ನೆ ಕೊಲೆಯಾದ ಯುವಕ ಹರ್ಷನ ಶವ ಮೆರವಣಿಗೆ ವೇಳೆ ವ್ಯಾಪಕ ಕಲ್ಲು ತೂರಾಟ ನಡೆದು ಹಿಂಸಾಚಾರ ಆಗಿತ್ತು. ಹೀಗಾಗಿ ಶಿವಮೊಗ್ಗ ನಗರದ ಆಯಕಟ್ಟಿನ ಜಾಗಗಳಲ್ಲಿ ಆರ್ ಎಎಫ್ ಸೇರಿದಂತೆ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜನೆ ಮಾಡಲಾಗಿದೆ. ಪೊಲೀಸರು ನಗರದಾದ್ಯಂತ ಸುತ್ತುವರಿದಿದ್ದು ಅಹಿತಕರ ಘಟನೆ ನಡೆಯದಂತೆ ಕಾವಲು ಹಾಕಿದ್ದಾರೆ.
ಈ ನಡುವೆ, ಕೊಲೆ ಪ್ರಕರಣ ಸಂಬಂಧಿಸಿ ಹತ್ತಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರನ್ನು ಬಂಧಿಸಿರುವ ಬಗ್ಗೆ ಎಡಿಜಿಪಿ ಮುರುಗನ್ ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಬುಡ್ಡಾನಗರ್ ನಿವಾಸಿ, ಲಾರಿ ಕ್ಲೀನರ್ ಆಗಿದ್ದ ಕಾಶಿಫ್ (30) ಮತ್ತು ಶಿವಮೊಗ್ಗ ಜೆಪಿ ನಗರ ನಿವಾಸಿ ಸೈಯದ್ ನದೀಂ ಬಂಧಿತರು. ಘಟನೆ ಬಳಿಕ ಬೆಂಗಳೂರಿಗೆ ಪರಾರಿಯಾಗಿದ್ದ ಮೂವರನ್ನು ವಶಕ್ಕೆ ಪಡೆದಿರುವ ಮಾಹಿತಿಯಿದೆ.
ಹಿಂಸಾಚಾರ ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಸ್ಥಿತಿಯಿದ್ದು ಪರಸ್ಪರ ಎರಡು ಕೋಮುಗಳ ಯುವಕರು ಉದ್ರಿಕ್ರರಾಗಿದ್ದಾರೆ. ನಿನ್ನೆ ಶವ ಮೆರವಣಿಗೆ ವೇಳೆ ಎರಡೂ ಕಡೆಯಿಂದ ಕಲ್ಲು ತೂರಾಟ ನಡೆದಿತ್ತು. ಘಟನೆಯಲ್ಲಿ 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಿಂಸೆ ಘಟನೆ ಕಾರಣ ಶಿವಮೊಗ್ಗ ನಗರದಲ್ಲಿ ಎರಡು ದಿನಗಳ ಕಾಲ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಎಸ್ಪಿ -03, ಎಎಸ್ಪಿ -01, ಡಿವೈಎಸ್ಪಿ-12, ಪೊಲೀಸ್ ಇನ್ಸ್ ಪೆಕ್ಟರ್ -39, ಎಸ್ಐ-54, ಎಎಸ್ಐ- 48, ಪೊಲೀಸ್ ಸಿಬಂದಿ-819, 20-KSRP ತುಕಡಿಗಳು, 10-ಡಿಎಆರ್ ತುಕಡಿಗಳು ಮತ್ತು 01-ಆರ್ ಎಎಫ್ ತುಕಡಿಯನ್ನು ನಿಯೋಜನೆ ಮಾಡಲಾಗಿದೆ.
Shivamogga Harsha Murder case, the police have succeeded in arresting two Muslim youths and also have taken 10 into custody. In order to avoid communal violence the Karnataka State police have deployed RPF all over city. Crime records for the Shivamogga city reveal that Harsha Hindu was involved in at least five cases of assault and attempt to murder including several communal incidents of attacks on rival anti-social elements from the Muslim community.
31-07-25 11:20 pm
Bangalore Correspondent
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
31-07-25 10:08 pm
HK News Desk
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
31-07-25 11:16 pm
Mangalore Correspondent
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
Human Skull, Multiple Bones, Dharmasthala, SI...
31-07-25 08:45 pm
31-07-25 06:04 pm
Mangalore Correspondent
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm