ಬ್ರೇಕಿಂಗ್ ನ್ಯೂಸ್
22-02-22 11:52 am HK Desk news ಕ್ರೈಂ
ಶಿವಮೊಗ್ಗ, ಫೆ.22 : ಹಿಂದು ಸಂಘಟನೆ ಕಾರ್ಯಕರ್ತನ ಹತ್ಯೆಯಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ನಗರ ಸ್ವಲ್ಪಮಟ್ಟಿಗೆ ಶಾಂತವಾಗಿದೆ. ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗಲಭೆ ನಿಯಂತ್ರಣಕ್ಕಾಗಿ ಕರ್ಫ್ಯೂ ಜಾರಿ ಮಾಡಲಾಗಿದೆ.
ನಿನ್ನೆ ಕೊಲೆಯಾದ ಯುವಕ ಹರ್ಷನ ಶವ ಮೆರವಣಿಗೆ ವೇಳೆ ವ್ಯಾಪಕ ಕಲ್ಲು ತೂರಾಟ ನಡೆದು ಹಿಂಸಾಚಾರ ಆಗಿತ್ತು. ಹೀಗಾಗಿ ಶಿವಮೊಗ್ಗ ನಗರದ ಆಯಕಟ್ಟಿನ ಜಾಗಗಳಲ್ಲಿ ಆರ್ ಎಎಫ್ ಸೇರಿದಂತೆ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜನೆ ಮಾಡಲಾಗಿದೆ. ಪೊಲೀಸರು ನಗರದಾದ್ಯಂತ ಸುತ್ತುವರಿದಿದ್ದು ಅಹಿತಕರ ಘಟನೆ ನಡೆಯದಂತೆ ಕಾವಲು ಹಾಕಿದ್ದಾರೆ.


ಈ ನಡುವೆ, ಕೊಲೆ ಪ್ರಕರಣ ಸಂಬಂಧಿಸಿ ಹತ್ತಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರನ್ನು ಬಂಧಿಸಿರುವ ಬಗ್ಗೆ ಎಡಿಜಿಪಿ ಮುರುಗನ್ ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಬುಡ್ಡಾನಗರ್ ನಿವಾಸಿ, ಲಾರಿ ಕ್ಲೀನರ್ ಆಗಿದ್ದ ಕಾಶಿಫ್ (30) ಮತ್ತು ಶಿವಮೊಗ್ಗ ಜೆಪಿ ನಗರ ನಿವಾಸಿ ಸೈಯದ್ ನದೀಂ ಬಂಧಿತರು. ಘಟನೆ ಬಳಿಕ ಬೆಂಗಳೂರಿಗೆ ಪರಾರಿಯಾಗಿದ್ದ ಮೂವರನ್ನು ವಶಕ್ಕೆ ಪಡೆದಿರುವ ಮಾಹಿತಿಯಿದೆ.



ಹಿಂಸಾಚಾರ ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಸ್ಥಿತಿಯಿದ್ದು ಪರಸ್ಪರ ಎರಡು ಕೋಮುಗಳ ಯುವಕರು ಉದ್ರಿಕ್ರರಾಗಿದ್ದಾರೆ. ನಿನ್ನೆ ಶವ ಮೆರವಣಿಗೆ ವೇಳೆ ಎರಡೂ ಕಡೆಯಿಂದ ಕಲ್ಲು ತೂರಾಟ ನಡೆದಿತ್ತು. ಘಟನೆಯಲ್ಲಿ 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಿಂಸೆ ಘಟನೆ ಕಾರಣ ಶಿವಮೊಗ್ಗ ನಗರದಲ್ಲಿ ಎರಡು ದಿನಗಳ ಕಾಲ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ.


ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಎಸ್ಪಿ -03, ಎಎಸ್ಪಿ -01, ಡಿವೈಎಸ್ಪಿ-12, ಪೊಲೀಸ್ ಇನ್ಸ್ ಪೆಕ್ಟರ್ -39, ಎಸ್ಐ-54, ಎಎಸ್ಐ- 48, ಪೊಲೀಸ್ ಸಿಬಂದಿ-819, 20-KSRP ತುಕಡಿಗಳು, 10-ಡಿಎಆರ್ ತುಕಡಿಗಳು ಮತ್ತು 01-ಆರ್ ಎಎಫ್ ತುಕಡಿಯನ್ನು ನಿಯೋಜನೆ ಮಾಡಲಾಗಿದೆ.
Shivamogga Harsha Murder case, the police have succeeded in arresting two Muslim youths and also have taken 10 into custody. In order to avoid communal violence the Karnataka State police have deployed RPF all over city. Crime records for the Shivamogga city reveal that Harsha Hindu was involved in at least five cases of assault and attempt to murder including several communal incidents of attacks on rival anti-social elements from the Muslim community.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm