ಬ್ರೇಕಿಂಗ್ ನ್ಯೂಸ್
19-09-20 01:27 pm Mangalore Reporter ಕ್ರೈಂ
ಮಂಗಳೂರು, ಸೆಪ್ಟಂಬರ್ 19: ಸ್ಯಾಂಡಲ್ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಶೆಟ್ಟಿಯನ್ನು ಪೊಲೀಸರು ಬಂಧಿಸಿರುವುದು ಖಚಿತವಾಗಿದೆ. ಈತನ ಜೊತೆಗೆ ಸುರತ್ಕಲ್ ಕಾಟಿಪಳ್ಳ ನಿವಾಸಿ ಅಕೀಲ್ ನೌಶೀಲ್ (28) ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಇವರಿಬ್ಬರು ಆಪ್ತರಾಗಿದ್ದು ಎಂಡಿಎಂಎ ಮತ್ತಿತರ ಸಿಂಥೆಟಿಕ್ ಡ್ರಗ್ ಅನ್ನು ವಿವಿಧೆಡೆ ಪೂರೈಕೆ ಮಾಡುತ್ತಿದ್ದರು. ಇವರ ಬಳಿಯಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸನ್ನು ವಶಕ್ಕೆ ಪಡೆಯಲಾಗಿದೆ. ಆತ ಮಂಗಳೂರು, ಬೆಂಗಳೂರಿನಲ್ಲಿ ಪಾರ್ಟಿ ಮಾಡಿರುವ ಬಗ್ಗೆ ಮಾಹಿತಿಗಳಿವೆ. ಅದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇವರಿಗೆ ಮುಂಬೈನಿಂದ ಡ್ರಗ್ ಪೂರೈಕೆ ಆಗ್ತಾ ಇತ್ತೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮುಂಬೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಯುವಜನರು, ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದರು. ಇವರ ಜಾಲದಲ್ಲಿ ಇನ್ನಷ್ಟು ಮಂದಿಯಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಆರೋಪಿ ಕಿಶೋರ್ ಅಲಿಯಾಸ್ ಅಮನ್ ಶೆಟ್ಟಿ 2011-12ರಲ್ಲಿ ಝೀಟಿವಿಯಲ್ಲಿ ಪ್ರಸಾರಗೊಂಡಿದ್ದ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಸೀಸನ್ ಎರಡರ ಸ್ಪರ್ಧೆಯಲ್ಲಿ ಬಹುಮಾನ ಪಡೆದಿದ್ದ. ಅಲ್ಲದೆ, ಎಬಿಸಿಡಿ ಎನ್ನುವ ಹಿಂದಿ ಸಿನೆಮಾದಲ್ಲಿ ಅಭಿನಯಿಸಿದ್ದ. ಆಬಳಿಕ ಡ್ಯಾನ್ಸರ್, ಕೊರಿಯೊಗ್ರಾಫರ್ ಆಗಿ ಹೆಸರು ಮಾಡಿದ್ದ. ಬಾಲಿವುಡ್ ಮತ್ತು ಕನ್ನಡ ಚಿತ್ರರಂಗದ ನಂಟು ಹೊಂದಿದ್ದರಿಂದ ಆ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ನೌಶೀಲ್ ಈ ಹಿಂದೆ ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ವರ್ಷದ ಹಿಂದೆ ಊರಿಗೆ ಬಂದಿದ್ದ. ಬಳಿಕ ಕೆಲಸ ಇಲ್ಲದೆ ಮುಂಬೈ ನಂಟು ಬೆಳೆಸಿಕೊಂಡು ಮಾದಕ ದ್ರವ್ಯಗಳನ್ನು ತಂದು ಮಾರಾಟ ಮಾಡುತ್ತಿದ್ದ ಎಂದು ಕಮಿಷನರ್ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.
30-05-26 01:14 pm
HK News Staffer
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am