ಬ್ರೇಕಿಂಗ್ ನ್ಯೂಸ್
19-09-20 01:27 pm Mangalore Reporter ಕ್ರೈಂ
ಮಂಗಳೂರು, ಸೆಪ್ಟಂಬರ್ 19: ಸ್ಯಾಂಡಲ್ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಶೆಟ್ಟಿಯನ್ನು ಪೊಲೀಸರು ಬಂಧಿಸಿರುವುದು ಖಚಿತವಾಗಿದೆ. ಈತನ ಜೊತೆಗೆ ಸುರತ್ಕಲ್ ಕಾಟಿಪಳ್ಳ ನಿವಾಸಿ ಅಕೀಲ್ ನೌಶೀಲ್ (28) ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಇವರಿಬ್ಬರು ಆಪ್ತರಾಗಿದ್ದು ಎಂಡಿಎಂಎ ಮತ್ತಿತರ ಸಿಂಥೆಟಿಕ್ ಡ್ರಗ್ ಅನ್ನು ವಿವಿಧೆಡೆ ಪೂರೈಕೆ ಮಾಡುತ್ತಿದ್ದರು. ಇವರ ಬಳಿಯಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸನ್ನು ವಶಕ್ಕೆ ಪಡೆಯಲಾಗಿದೆ. ಆತ ಮಂಗಳೂರು, ಬೆಂಗಳೂರಿನಲ್ಲಿ ಪಾರ್ಟಿ ಮಾಡಿರುವ ಬಗ್ಗೆ ಮಾಹಿತಿಗಳಿವೆ. ಅದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇವರಿಗೆ ಮುಂಬೈನಿಂದ ಡ್ರಗ್ ಪೂರೈಕೆ ಆಗ್ತಾ ಇತ್ತೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮುಂಬೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಯುವಜನರು, ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದರು. ಇವರ ಜಾಲದಲ್ಲಿ ಇನ್ನಷ್ಟು ಮಂದಿಯಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಆರೋಪಿ ಕಿಶೋರ್ ಅಲಿಯಾಸ್ ಅಮನ್ ಶೆಟ್ಟಿ 2011-12ರಲ್ಲಿ ಝೀಟಿವಿಯಲ್ಲಿ ಪ್ರಸಾರಗೊಂಡಿದ್ದ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಸೀಸನ್ ಎರಡರ ಸ್ಪರ್ಧೆಯಲ್ಲಿ ಬಹುಮಾನ ಪಡೆದಿದ್ದ. ಅಲ್ಲದೆ, ಎಬಿಸಿಡಿ ಎನ್ನುವ ಹಿಂದಿ ಸಿನೆಮಾದಲ್ಲಿ ಅಭಿನಯಿಸಿದ್ದ. ಆಬಳಿಕ ಡ್ಯಾನ್ಸರ್, ಕೊರಿಯೊಗ್ರಾಫರ್ ಆಗಿ ಹೆಸರು ಮಾಡಿದ್ದ. ಬಾಲಿವುಡ್ ಮತ್ತು ಕನ್ನಡ ಚಿತ್ರರಂಗದ ನಂಟು ಹೊಂದಿದ್ದರಿಂದ ಆ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ನೌಶೀಲ್ ಈ ಹಿಂದೆ ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ವರ್ಷದ ಹಿಂದೆ ಊರಿಗೆ ಬಂದಿದ್ದ. ಬಳಿಕ ಕೆಲಸ ಇಲ್ಲದೆ ಮುಂಬೈ ನಂಟು ಬೆಳೆಸಿಕೊಂಡು ಮಾದಕ ದ್ರವ್ಯಗಳನ್ನು ತಂದು ಮಾರಾಟ ಮಾಡುತ್ತಿದ್ದ ಎಂದು ಕಮಿಷನರ್ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm