ಬ್ರೇಕಿಂಗ್ ನ್ಯೂಸ್
19-09-20 01:27 pm Mangalore Reporter ಕ್ರೈಂ
ಮಂಗಳೂರು, ಸೆಪ್ಟಂಬರ್ 19: ಸ್ಯಾಂಡಲ್ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಶೆಟ್ಟಿಯನ್ನು ಪೊಲೀಸರು ಬಂಧಿಸಿರುವುದು ಖಚಿತವಾಗಿದೆ. ಈತನ ಜೊತೆಗೆ ಸುರತ್ಕಲ್ ಕಾಟಿಪಳ್ಳ ನಿವಾಸಿ ಅಕೀಲ್ ನೌಶೀಲ್ (28) ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಇವರಿಬ್ಬರು ಆಪ್ತರಾಗಿದ್ದು ಎಂಡಿಎಂಎ ಮತ್ತಿತರ ಸಿಂಥೆಟಿಕ್ ಡ್ರಗ್ ಅನ್ನು ವಿವಿಧೆಡೆ ಪೂರೈಕೆ ಮಾಡುತ್ತಿದ್ದರು. ಇವರ ಬಳಿಯಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸನ್ನು ವಶಕ್ಕೆ ಪಡೆಯಲಾಗಿದೆ. ಆತ ಮಂಗಳೂರು, ಬೆಂಗಳೂರಿನಲ್ಲಿ ಪಾರ್ಟಿ ಮಾಡಿರುವ ಬಗ್ಗೆ ಮಾಹಿತಿಗಳಿವೆ. ಅದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಇವರಿಗೆ ಮುಂಬೈನಿಂದ ಡ್ರಗ್ ಪೂರೈಕೆ ಆಗ್ತಾ ಇತ್ತೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮುಂಬೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಯುವಜನರು, ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದರು. ಇವರ ಜಾಲದಲ್ಲಿ ಇನ್ನಷ್ಟು ಮಂದಿಯಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಆರೋಪಿ ಕಿಶೋರ್ ಅಲಿಯಾಸ್ ಅಮನ್ ಶೆಟ್ಟಿ 2011-12ರಲ್ಲಿ ಝೀಟಿವಿಯಲ್ಲಿ ಪ್ರಸಾರಗೊಂಡಿದ್ದ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಸೀಸನ್ ಎರಡರ ಸ್ಪರ್ಧೆಯಲ್ಲಿ ಬಹುಮಾನ ಪಡೆದಿದ್ದ. ಅಲ್ಲದೆ, ಎಬಿಸಿಡಿ ಎನ್ನುವ ಹಿಂದಿ ಸಿನೆಮಾದಲ್ಲಿ ಅಭಿನಯಿಸಿದ್ದ. ಆಬಳಿಕ ಡ್ಯಾನ್ಸರ್, ಕೊರಿಯೊಗ್ರಾಫರ್ ಆಗಿ ಹೆಸರು ಮಾಡಿದ್ದ. ಬಾಲಿವುಡ್ ಮತ್ತು ಕನ್ನಡ ಚಿತ್ರರಂಗದ ನಂಟು ಹೊಂದಿದ್ದರಿಂದ ಆ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ನೌಶೀಲ್ ಈ ಹಿಂದೆ ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ವರ್ಷದ ಹಿಂದೆ ಊರಿಗೆ ಬಂದಿದ್ದ. ಬಳಿಕ ಕೆಲಸ ಇಲ್ಲದೆ ಮುಂಬೈ ನಂಟು ಬೆಳೆಸಿಕೊಂಡು ಮಾದಕ ದ್ರವ್ಯಗಳನ್ನು ತಂದು ಮಾರಾಟ ಮಾಡುತ್ತಿದ್ದ ಎಂದು ಕಮಿಷನರ್ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.
06-06-25 12:58 am
Bengaluru Staff
Bangalore Police commissioner Dayanand, RCB,...
05-06-25 11:04 pm
Rcb, Death, Bangalore, Araga Jnandnder: ಕಾಲ್ತ...
05-06-25 09:27 pm
DK Shivakumar, Crying, RCB, Bangalore; ಬೆಂಗಳೂ...
05-06-25 04:31 pm
Anjum Parwez, CM Siddaramaiah: ಸಿಎಂ ಸಿದ್ದರಾಮಯ...
05-06-25 11:06 am
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
05-06-25 10:29 pm
Mangalore Correspondent
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
BK Hariprasad, Mangalore, Congress; ಮಂಗಳೂರಿಗೆ...
05-06-25 03:56 pm
B K Hariprasad, Mangalore, RCB; ಐಪಿಎಲ್ ನಡೆಸೋರ...
05-06-25 03:05 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm