ಬ್ರೇಕಿಂಗ್ ನ್ಯೂಸ್
23-02-22 11:00 am Mangalore Correspondent ಕ್ರೈಂ
ಉಳ್ಳಾಲ, ಫೆ.23 : ತಲಪಾಡಿಯ ಸಾಮಾಜಿಕ ಕಾರ್ಯಕರ್ತ ಯಶು ಪಕ್ಕಳ ಎಂಬವರ ಮೇಲೆ ತಲಪಾಡಿ ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಮತ್ತು ತಂಡ ಮಾರಣಾಂತಿಕ ಹಲ್ಲೆ ನಡೆಸಿದ್ದು ಕೇಸು ಕೊಟ್ಟರೆ ಬಿಜೆಪಿ ಪವರ್ ಬಳಸಿ ತಾನೂ ಅಡ್ಮಿಟ್ ಆಗುತ್ತೇನೆಂದು ಹಲ್ಲೆಕೋರ ವ್ಯಕ್ತಿ ಧಮ್ಕಿ ಹಾಕಿದ ಘಟನೆ ನಡೆದಿದೆ.
ಮಂಗಳವಾರ ಸಂಜೆ ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಮುಂಭಾಗದ ಪ್ರದೇಶದಲ್ಲಿ ಯಶು ಪಕ್ಕಳ ಮೇಲೆ ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯ ಶೈಲೇಶ್ ಮತ್ತು ಗ್ಯಾಂಗ್ ಆಕ್ರಮಣ ನಡೆಸಿದ್ದು ಸೋಂಟೆಯಿಂದ ತಲೆಗೆ ಹಲ್ಲೆ ನಡೆಸಿದೆ. ದುರ್ಗಾಪರಮೇಶ್ವರಿ ಕ್ಷೇತ್ರದ ಮುಂಭಾಗದಲ್ಲಿ ಪಂಚಾಯತ್ ಅನುದಾನದಲ್ಲಿ ನಡೆಯುತ್ತಿದ್ದ ಮೋರಿ ಕಾಮಗಾರಿಯನ್ನ ನೋಡಲು ತೆರಳಿದ್ದ ಯಶು ಪಕ್ಕಳ ಅವರಿಗೆ ಹಲ್ಲೆ ನಡೆದಿದ್ದು ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಾಳು ಯಶು ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾ.ಪಂ ಸದಸ್ಯ ಶೈಲೇಶ್ ಮತ್ತು ಇತರ ನಾಲ್ಕೈದು ಮಂದಿ ಸೇರಿ ತನ್ನ ಜಮೀನಿಗೆ ಅಕ್ರಮ ಪ್ರವೇಶಿಸಿ ನನ್ನನ್ನು ಹಿಡಿದಿಟ್ಟು ಸೋಂಟೆಯಿಂದ ಹಲ್ಲೆ ನಡೆಸಿರುವುದಾಗಿ ಯಶು ಆರೋಪಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಕೇಸು ಕೊಟ್ಟರೆ ಬಿಜೆಪಿಯ ಪವರ್ ಬಳಸಿ ನಿನಗಿಂತ ಮೊದಲು ತಾನು ಆಸ್ಪತ್ರೆಗೆ ದಾಖಲಾಗುವುದಾಗಿ ಶೈಲೇಶ್ ಹೇಳಿದ್ದಾಗಿ ಯಶು ಪಕ್ಕಳ ಆರೋಪಿಸಿದ್ದಾರೆ. ಹಲ್ಲೆ ಘಟನೆಯು ದೇವಸ್ಥಾನಕ್ಕೆ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿರುವುದಾಗಿ ಯಶು ತಿಳಿಸಿದ್ದು ಉಳ್ಳಾಲ ಪೊಲೀಸರು ಇದನ್ನ ಪರಿಶೀಲಿಸಬೇಕಿದೆ.

ಆಸ್ಪತ್ರೆಗೆ ಎಸಿಪಿ ದಿನಕರ ಶೆಟ್ಟಿ ಭೇಟಿ ನೀಡಿ ವರದಿ ಪಡೆದಿದ್ದಾರೆ. ಯಶು ಪಕ್ಕಳ ಅವರು ತಲಪಾಡಿ ಗಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ, ಸ್ಥಳೀಯ ಗ್ರಾಮ ಪಂಚಾಯತ್ ಮತ್ತು ಪುರಾಣ ಪ್ರಸಿದ್ಧ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ನಿರಂತರ ಧ್ವನಿ ಎತ್ತುತ್ತಿರುವುದು ಕೆಲವರ ಕಣ್ಣು ಕೆಂಪು ಮಾಡಿತ್ತು. ಗ್ರಾಮ ಸದಸ್ಯ ಶೈಲೇಶ್ ಕೂಡ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಯಶು ಪಕ್ಕಳ ವಿರುದ್ಧ ದೂರು ದಾಖಲಿಸಿದ್ದಾರೆ.
In an incident reported from near Talapady Devinagara, a social activist, Yashu Pakala, came under savagely attack. Talapady gram panchayat member Shylesh, and eight others reportedly formed a gang and attacked Yashu Pakala. Pakala is now being treated in a private hospital in Natekal.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm