ಬ್ರೇಕಿಂಗ್ ನ್ಯೂಸ್
23-02-22 10:23 pm Mangalore Correspondent ಕ್ರೈಂ
ಬಂಟ್ವಾಳ, ಫೆ.23 : ಹಣಕಾಸಿನ ವಿಚಾರದಲ್ಲಿ ಗಂಡ ಹೆಂಡತಿ ನಡುವಿನ ಜಗಳ ಕೊನೆಗೆ ಪತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರದ ಹಿಂದೆ ಬಂಟ್ವಾಳದಲ್ಲಿ ಘಟನೆ ನಡೆದಿದ್ದು, ಮೃತರ ಪೋಸ್ಟ್ ಮಾರ್ಟಂ ವರದಿಯಂತೆ ಪೊಲೀಸರು ಕೇಸು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47) ಮೃತರು. ಮಣಿನಾಲ್ಕೂರು ನಿವಾಸಿ, ಮೃತರ ಭಾವ ಅಶೋಕ್ ಅಲಿಯಾಸ್ ಚಂದಪ್ಪ ಪೂಜಾರಿ(45) ಆರೋಪಿಯಾಗಿದ್ದು, ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮೃತ ಕೇಶವ ಪೂಜಾರಿ ಮಂಗಳೂರಿನ ಹೊಟೇಲ್ ಒಂದರಲ್ಲಿ ಅಡುಗೆ ಕಾರ್ಮಿಕನಾಗಿದ್ದು, ಜನವರಿ 31ರಂದು ಮನೆಗೆ ಬಂದಿದ್ದ ವೇಳೆ ತನ್ನ ದುಡಿದ ಹಣವನ್ನು ಪತ್ನಿ ಪ್ರೇಮಾಗೆ ಕೊಟ್ಟಿದ್ದರು ಎನ್ನಲಾಗಿದೆ. ಆನಂತರ, ಅದರಲ್ಲಿ ನೂರು ರೂ. ಖರ್ಚಿಗೆ ಕೊಡುವಂತೆ ಕೇಳಿದ್ದು, ಅದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಕಲಹ ನಡೆದಿತ್ತು.
ಆನಂತರ ಪತ್ನಿ ಪ್ರೇಮಾ ಈ ಬಗ್ಗೆ ತನ್ನ ಸೋದರ ಚಂದಪ್ಪನಿಗೆ ವಿಷಯ ತಿಳಿಸಿದ್ದು ಆತ ಇವರ ಮನೆಗೆ ಬಂದಿದ್ದ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದ್ದು, ಕೇಶವ ಮೇಲೆ ಚಂದಪ್ಪ ಪೂಜಾರಿ ಹಲ್ಲೆ ನಡೆಸಿದ್ದ. ಹಲ್ಲೆಯಿಂದ ಗಾಯಗೊಂಡ ಕೇಶವ ಅವರನ್ನು ತಾಯಿ ಲೀಲಾ ಅವರು ಬಂಟ್ವಾಳ ಸರಕಾರಿ ಸರಕಾರಿ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ಒದಗಿಸಿದ್ದರು. ಆನಂತರ, ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದರು.
A squabble between a couple has ended in the fatal assault of the husband in the hands of his brother-in-law. Bantwal taluk Tenkakajekar, Baramelu resident Keshava Poojary (47) is the deceased. The police have arrested his brother-in law Maninalkur resident Ashok alias Chandappa Poojary (45).
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm