ಬ್ರೇಕಿಂಗ್ ನ್ಯೂಸ್
23-02-22 10:23 pm Mangalore Correspondent ಕ್ರೈಂ
ಬಂಟ್ವಾಳ, ಫೆ.23 : ಹಣಕಾಸಿನ ವಿಚಾರದಲ್ಲಿ ಗಂಡ ಹೆಂಡತಿ ನಡುವಿನ ಜಗಳ ಕೊನೆಗೆ ಪತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರದ ಹಿಂದೆ ಬಂಟ್ವಾಳದಲ್ಲಿ ಘಟನೆ ನಡೆದಿದ್ದು, ಮೃತರ ಪೋಸ್ಟ್ ಮಾರ್ಟಂ ವರದಿಯಂತೆ ಪೊಲೀಸರು ಕೇಸು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47) ಮೃತರು. ಮಣಿನಾಲ್ಕೂರು ನಿವಾಸಿ, ಮೃತರ ಭಾವ ಅಶೋಕ್ ಅಲಿಯಾಸ್ ಚಂದಪ್ಪ ಪೂಜಾರಿ(45) ಆರೋಪಿಯಾಗಿದ್ದು, ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮೃತ ಕೇಶವ ಪೂಜಾರಿ ಮಂಗಳೂರಿನ ಹೊಟೇಲ್ ಒಂದರಲ್ಲಿ ಅಡುಗೆ ಕಾರ್ಮಿಕನಾಗಿದ್ದು, ಜನವರಿ 31ರಂದು ಮನೆಗೆ ಬಂದಿದ್ದ ವೇಳೆ ತನ್ನ ದುಡಿದ ಹಣವನ್ನು ಪತ್ನಿ ಪ್ರೇಮಾಗೆ ಕೊಟ್ಟಿದ್ದರು ಎನ್ನಲಾಗಿದೆ. ಆನಂತರ, ಅದರಲ್ಲಿ ನೂರು ರೂ. ಖರ್ಚಿಗೆ ಕೊಡುವಂತೆ ಕೇಳಿದ್ದು, ಅದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಕಲಹ ನಡೆದಿತ್ತು.
ಆನಂತರ ಪತ್ನಿ ಪ್ರೇಮಾ ಈ ಬಗ್ಗೆ ತನ್ನ ಸೋದರ ಚಂದಪ್ಪನಿಗೆ ವಿಷಯ ತಿಳಿಸಿದ್ದು ಆತ ಇವರ ಮನೆಗೆ ಬಂದಿದ್ದ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದ್ದು, ಕೇಶವ ಮೇಲೆ ಚಂದಪ್ಪ ಪೂಜಾರಿ ಹಲ್ಲೆ ನಡೆಸಿದ್ದ. ಹಲ್ಲೆಯಿಂದ ಗಾಯಗೊಂಡ ಕೇಶವ ಅವರನ್ನು ತಾಯಿ ಲೀಲಾ ಅವರು ಬಂಟ್ವಾಳ ಸರಕಾರಿ ಸರಕಾರಿ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ಒದಗಿಸಿದ್ದರು. ಆನಂತರ, ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದರು.
A squabble between a couple has ended in the fatal assault of the husband in the hands of his brother-in-law. Bantwal taluk Tenkakajekar, Baramelu resident Keshava Poojary (47) is the deceased. The police have arrested his brother-in law Maninalkur resident Ashok alias Chandappa Poojary (45).
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm