ಬ್ರೇಕಿಂಗ್ ನ್ಯೂಸ್
25-02-22 07:39 pm HK Desk news ಕ್ರೈಂ
ಶಿವಮೊಗ್ಗ, ಫೆ.25 : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹತ್ತು ಮಂದಿಯನ್ನು ಬಂಧಿಸಿದ್ದೇವೆ. ವಶಕ್ಕೆ ಪಡೆದವರ ವಿಚಾರಣೆ ಆರಂಭಿಸುತ್ತೇವೆ. ವಿಚಾರಣೆ ಬಳಿಕ ಬೇರೆ ಈ ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದು ತಿಳಿಯಲಿದೆ. 14 ದಿನಗಳ ಬಳಿಕ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ ಎಂದು ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರ್ಷನ ಕೊಲೆಗೆ ಬಳಸಿದ್ದ ಕಾರನ್ನು ಹಾಗೂ ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರು ಹಾಗೂ ಬೈಕನ್ನು ವಶಕ್ಕೆ ಪಡೆದಿದ್ದೇವೆ. ಕೊಲೆ ಮಾಡಲು ಬೇರೆ ರಾಜ್ಯದ ಕಾರನ್ನು ಬಳಸಿಕೊಂಡಿದ್ದಾರೆ. ಆ ಕಾರು ಯಾರದ್ದು, ಶಿವಮೊಗ್ಗಕ್ಕೆ ಯಾಕೆ ಬಂತು, ಕಾರಿನ ಮಾಲಕರು ಯಾರು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದರು.

ವಿಡಿಯೋ ಕಾಲ್ ಮಾಡಿದವರ ಪತ್ತೆ
ಕೊಲೆಯಾದ ಹರ್ಷನ ಮೊಬೈಲ್ ಫೋನ್ ಇದುವರೆಗೂ ಪತ್ತೆಯಾಗಿಲ್ಲ. ಆದರೆ ಆತನಿಗೆ ಕೊಲೆಯಾಗೋದಕ್ಕೂ ಮುನ್ನ ವೀಡಿಯೋ ಕರೆ ಮಾಡಿದವರನ್ನು ಪತ್ತೆ ಮಾಡಿದ್ದೇವೆ. ವಿಡಿಯೋ ಕರೆ ಮಾಡಿದವರಿಗೂ ಹಂತಕರಿಗೂ ಯಾವುದೇ ಸಂಬಂಧ ಇಲ್ಲ. ಅದರ ಬಗ್ಗೆ ವಿಚಾರಣೆ ಮಾಡಿದ್ದೇವೆ. ಮೆರವಣಿಗೆ ವೇಳೆ ಪೊಲೀಸರಿಗೆ ಲಾಂಗ್- ಮಚ್ಚು ತೋರಿಸಿ ಬೆದರಿಕೆ ಹಾಕಿದವರು ಯಾರು ಎಂಬುದು ಗೊತ್ತಾಗಿದೆ. ಸಿಸಿಟಿವಿ ಆಧರಿಸಿ ಅವರನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ಎಸ್ಪಿ ಮಾಹಿತಿ ನೀಡಿದರು.
ಹರ್ಷ ಕೊಲೆ ಪ್ರಕರಣದಲ್ಲಿ ಸಾತು ಆ್ಯಂಡ್ ಗ್ಯಾಂಗ್ ಭಾಗಿಯಾಗಿತ್ತೇ ಎಂಬ ಪ್ರಶ್ನೆಗೆ, ಆ ಬಗ್ಗೆ ತನಿಖೆ ನಡೆಸುತಿದ್ದೇವೆ. ಕೊಲೆ ಹಿಂದೆ ಯಾವುದಾದರೂ ಸಂಘಟನೆಗಳಿವೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಖಾಸಿಫ್, ಆಸಿಫ್ ಮೇಲೆ ಐದು, ರಿಹಾನ್ ಮೇಲೆ ಮೂರು ಹಾಗೂ ಅಫ್ನಾನ್ ಮೇಲೆ ಎರಡು ಕಾನೂನು ಸುವ್ಯವಸ್ಥೆಗೆ ಧಕ್ಕೆ ಎಸಗಿದ ಕೋಮು ವೈಷಮ್ಯದ ಪ್ರಕರಣಗಳಿವೆ. ಉಳಿದಂತೆ ಡಕಾಯಿತಿ, ಕಳ್ಳತನ ಪ್ರಕರಣಗಳು ದಾಖಲಾಗಿವೆ. ಕೊಲೆಯಾದ ಹರ್ಷನ ಮೇಲೆ ಧರ್ಮ ದ್ವೇಷ ಸಂಬಂಧಿಸಿದ ಎರಡು ಪ್ರಕರಣ ದಾಖಲಾಗಿತ್ತು ಎಂದು ಎಸ್ಪಿ ಹೇಳಿದರು.
Harsha Murder case 10 arrested so far, investigating organisation support angle says SP Lakshmi Prasad.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm