ಬ್ರೇಕಿಂಗ್ ನ್ಯೂಸ್
25-02-22 07:39 pm HK Desk news ಕ್ರೈಂ
ಶಿವಮೊಗ್ಗ, ಫೆ.25 : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹತ್ತು ಮಂದಿಯನ್ನು ಬಂಧಿಸಿದ್ದೇವೆ. ವಶಕ್ಕೆ ಪಡೆದವರ ವಿಚಾರಣೆ ಆರಂಭಿಸುತ್ತೇವೆ. ವಿಚಾರಣೆ ಬಳಿಕ ಬೇರೆ ಈ ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದು ತಿಳಿಯಲಿದೆ. 14 ದಿನಗಳ ಬಳಿಕ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ ಎಂದು ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರ್ಷನ ಕೊಲೆಗೆ ಬಳಸಿದ್ದ ಕಾರನ್ನು ಹಾಗೂ ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರು ಹಾಗೂ ಬೈಕನ್ನು ವಶಕ್ಕೆ ಪಡೆದಿದ್ದೇವೆ. ಕೊಲೆ ಮಾಡಲು ಬೇರೆ ರಾಜ್ಯದ ಕಾರನ್ನು ಬಳಸಿಕೊಂಡಿದ್ದಾರೆ. ಆ ಕಾರು ಯಾರದ್ದು, ಶಿವಮೊಗ್ಗಕ್ಕೆ ಯಾಕೆ ಬಂತು, ಕಾರಿನ ಮಾಲಕರು ಯಾರು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದರು.
ವಿಡಿಯೋ ಕಾಲ್ ಮಾಡಿದವರ ಪತ್ತೆ
ಕೊಲೆಯಾದ ಹರ್ಷನ ಮೊಬೈಲ್ ಫೋನ್ ಇದುವರೆಗೂ ಪತ್ತೆಯಾಗಿಲ್ಲ. ಆದರೆ ಆತನಿಗೆ ಕೊಲೆಯಾಗೋದಕ್ಕೂ ಮುನ್ನ ವೀಡಿಯೋ ಕರೆ ಮಾಡಿದವರನ್ನು ಪತ್ತೆ ಮಾಡಿದ್ದೇವೆ. ವಿಡಿಯೋ ಕರೆ ಮಾಡಿದವರಿಗೂ ಹಂತಕರಿಗೂ ಯಾವುದೇ ಸಂಬಂಧ ಇಲ್ಲ. ಅದರ ಬಗ್ಗೆ ವಿಚಾರಣೆ ಮಾಡಿದ್ದೇವೆ. ಮೆರವಣಿಗೆ ವೇಳೆ ಪೊಲೀಸರಿಗೆ ಲಾಂಗ್- ಮಚ್ಚು ತೋರಿಸಿ ಬೆದರಿಕೆ ಹಾಕಿದವರು ಯಾರು ಎಂಬುದು ಗೊತ್ತಾಗಿದೆ. ಸಿಸಿಟಿವಿ ಆಧರಿಸಿ ಅವರನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ಎಸ್ಪಿ ಮಾಹಿತಿ ನೀಡಿದರು.
ಹರ್ಷ ಕೊಲೆ ಪ್ರಕರಣದಲ್ಲಿ ಸಾತು ಆ್ಯಂಡ್ ಗ್ಯಾಂಗ್ ಭಾಗಿಯಾಗಿತ್ತೇ ಎಂಬ ಪ್ರಶ್ನೆಗೆ, ಆ ಬಗ್ಗೆ ತನಿಖೆ ನಡೆಸುತಿದ್ದೇವೆ. ಕೊಲೆ ಹಿಂದೆ ಯಾವುದಾದರೂ ಸಂಘಟನೆಗಳಿವೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಖಾಸಿಫ್, ಆಸಿಫ್ ಮೇಲೆ ಐದು, ರಿಹಾನ್ ಮೇಲೆ ಮೂರು ಹಾಗೂ ಅಫ್ನಾನ್ ಮೇಲೆ ಎರಡು ಕಾನೂನು ಸುವ್ಯವಸ್ಥೆಗೆ ಧಕ್ಕೆ ಎಸಗಿದ ಕೋಮು ವೈಷಮ್ಯದ ಪ್ರಕರಣಗಳಿವೆ. ಉಳಿದಂತೆ ಡಕಾಯಿತಿ, ಕಳ್ಳತನ ಪ್ರಕರಣಗಳು ದಾಖಲಾಗಿವೆ. ಕೊಲೆಯಾದ ಹರ್ಷನ ಮೇಲೆ ಧರ್ಮ ದ್ವೇಷ ಸಂಬಂಧಿಸಿದ ಎರಡು ಪ್ರಕರಣ ದಾಖಲಾಗಿತ್ತು ಎಂದು ಎಸ್ಪಿ ಹೇಳಿದರು.
Harsha Murder case 10 arrested so far, investigating organisation support angle says SP Lakshmi Prasad.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm